RRR Movie: 10 ಕೋಟಿ ಹಣವನ್ನು ರಿಫಂಡ್ ಮಾಡಿದ ಚಿತ್ರದ ನಿರ್ಮಾಪಕ ಡಿವಿವಿ ದಾನಯ್ಯ!

RRR Movie: 10 ಕೋಟಿ ಹಣವನ್ನು ರಿಫಂಡ್ ಮಾಡಿದ ಚಿತ್ರದ ನಿರ್ಮಾಪಕ ಡಿವಿವಿ ದಾನಯ್ಯ!

Published : Jan 04, 2022, 03:15 PM IST

ಜ್ಯೂ.ಎನ್​ಟಿಆರ್ ಮತ್ತು ರಾಮ್​ ಚರಣ್ ಕಾಂಬಿನೇಷನ್‌ನ ಎಸ್‌.ಎಸ್‌.ರಾಜಮೌಳಿ ನಿರ್ದೇಶನದ ಬಹು ನಿರೀಕ್ಷಿತ ಚಿತ್ರ 'ಆರ್‌ಆರ್‌ಆರ್‌' ಸಿನಿಮಾ ರಿಲೀಸ್ ಡೇಟ್ ಕೂಡಾ ಮುಂದಕ್ಕೆ ಹೋಗಿದೆ. ಈ ಚಿತ್ರಕ್ಕೆ ಡಿವಿವಿ ದಾನಯ್ಯ ಬಂಡವಾಳ ಹೂಡಿದ್ದಾರೆ. ಚಿತ್ರದ ಬಿಡುಗಡೆಗೂ ಮುನ್ನವೇ ನಿರ್ಮಾಪಕರು ಬರೋಬ್ಬರಿ 10 ಕೋಟಿ ರೂಪಾಯಿಯನ್ನು ಪ್ರೇಕ್ಷಕರಿಗೆ ವಾಪಸ್​ ನೀಡಬೇಕಾದ ಸಂದರ್ಭ ಬಂದಿದೆ.
 

ಜ್ಯೂ.ಎನ್​ಟಿಆರ್ (Jr.NTR) ಮತ್ತು ರಾಮ್​ ಚರಣ್ (Ram Charan)​ ಕಾಂಬಿನೇಷನ್‌ನ ಎಸ್‌.ಎಸ್‌.ರಾಜಮೌಳಿ (SS Rajamouli) ನಿರ್ದೇಶನದ ಬಹು ನಿರೀಕ್ಷಿತ ಚಿತ್ರ 'ಆರ್‌ಆರ್‌ಆರ್‌' (RRR) (ರೌದ್ರ-ರಣ-ರುಧಿರ) ಚಿತ್ರದ ಬಗ್ಗೆ ಕ್ರೇಜ್ ಜೋರಾಗಿಯೇ ಇದೆ. ಆದರೆ ದೇಶದಲ್ಲಿ ಹೆಚ್ಚುತ್ತಿರುವ ಒಮಿಕ್ರಾನ್​ ಪ್ರಕರಣಗಳ (Omicron) ಕಾರಣದಿಂದ ಸಿನಿಮಾ ರಿಲೀಸ್ ಡೇಟ್ ಕೂಡಾ ಮುಂದಕ್ಕೆ ಹೋಗಿದೆ. ಈ ಚಿತ್ರಕ್ಕೆ ಡಿವಿವಿ ದಾನಯ್ಯ ಬಂಡವಾಳ ಹೂಡಿದ್ದಾರೆ. ಚಿತ್ರದ ಬಿಡುಗಡೆಗೂ ಮುನ್ನವೇ ನಿರ್ಮಾಪಕರು ಬರೋಬ್ಬರಿ 10 ಕೋಟಿ ರೂಪಾಯಿಯನ್ನು ಪ್ರೇಕ್ಷಕರಿಗೆ ವಾಪಸ್​ ನೀಡಬೇಕಾದ ಸಂದರ್ಭ ಬಂದಿದೆ.

RRR Movie: ರಾಜಮೌಳಿ ಸಿನಿಮಾದಲ್ಲಿ ಗರಿಷ್ಠ ಸಂಭಾವನೆ ಪಡೆದವರು ಯಾರು?

ಹೌದು! 'ಆರ್​ಆರ್​ಆರ್'​ ಚಿತ್ರ ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಜನವರಿ 7ರಂದು ವಿಶ್ವಾದ್ಯಂತ ಬಿಡುಗಡೆ ಆಗಬೇಕಿತ್ತು. ಅದಕ್ಕಾಗಿ ಕೆಲವು ಕಡೆಗಳಲ್ಲಿ ಮುಂಗಡ ಟಿಕೆಟ್​ ಬುಕಿಂಗ್​ ಸಹ ಆರಂಭ ಆಗಿತ್ತು. ಪ್ರಪಂಚದೆಲ್ಲೆಡೆ ಅಂದಾಜು 10 ಕೋಟಿ ರೂ. ಮೊತ್ತದ ಟಿಕೆಟ್​ ಬುಕ್​ ಆಗಿತ್ತು ಎನ್ನಲಾಗಿದೆ. ಸಿನಿಮಾ ರಿಲೀಸ್​ ಮುಂದಕ್ಕೆ ಹೋಗಿರುವುದರಿಂದ ಆ ಹಣವನ್ನು ಪ್ರೇಕ್ಷಕರಿಗೆ ವಾಪಸ್​ ನೀಡಬೇಕಾಗಿದೆ. ಈ ಚಿತ್ರಕ್ಕೆ ವಿ.ವಿಜಯೇಂದ್ರ ಪ್ರಸಾದ್ ಕಥೆ, ಮತ್ತು ಶ್ರೀಕರ್ ಪ್ರಸಾದ್ ಸಂಕಲನವಿದೆ. ಬಿಗ್‌ ಬಜೆಟ್‌ನಲ್ಲಿ ತಯಾರಾದ ಈ ಚಿತ್ರಕ್ಕೆ ಎಂ.ಎಂ.ಕೀರವಾಣಿ (M.M. Keeravaani) ಸಂಗೀತ ಸಂಯೋಜಿಸಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment

05:53ನೋರಾ ಫತೇಹಿ ಆಫರ್​ ತಮನ್ನಾ ಪಾಲಾಗಿದ್ದೇಕೆ..? ಬಿಳಿ ಬ್ಯೂಟಿ ನೋಡಿದ್ರೆ ಇನ್ಮುಂದೆ ಭಯ ಪಡ್ತೀರಾ ನೀವು!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!
Read more