RSS ಕಥೆಗೆ ರಾಜಮೌಳಿ ಡೈರೆಕ್ಟರ್‌..ಇದು ನಿಜಾನ ? ಮೌಳಿ ಚಿತ್ರದಲ್ಲಿ ದೈವ ಭಕ್ತಿ, ಧರ್ಮ ಪರಿಪಾಲನೆ..!

RSS ಕಥೆಗೆ ರಾಜಮೌಳಿ ಡೈರೆಕ್ಟರ್‌..ಇದು ನಿಜಾನ ? ಮೌಳಿ ಚಿತ್ರದಲ್ಲಿ ದೈವ ಭಕ್ತಿ, ಧರ್ಮ ಪರಿಪಾಲನೆ..!

Published : Oct 17, 2023, 09:48 AM IST

ಎಸ್.ಎಸ್ ರಾಜಮೌಳಿ ಭಾರತೀಯ ಚಿತ್ರರಂಗದ ಸೂಪರ್ ಸ್ಟಾರ್ ಡೈರೆಕ್ಟರ್. ಬಿಗ್ ಸ್ಟಾರ್‌ಗಳಿಗೆ ಇವ್ರು ಜಕ್ಕಣ್ಣ. ಮೌಳಿ ಡೈರೆಕ್ಷನ್‌ನಲ್ಲಿ ನಟಿಸಬೇಕು ಅನ್ನೋದು ಹಲವ ಕನಸು. ಈ ಕನಸು ಈಗ ರಾಜಕಾರಣಿಗಳಿಗೂ ಬಂದಿದೆ ಅಂದ್ರೆ ನೀವ್ ನಂಬ್ತೀರಾ ? ಯೆಸ್, ನಂಬಲೇ ಬೇಕು. ಯಾಕಂದ್ರೆ ಈಗ ಬಿಜೆಪಿ ಪಕ್ಷ ಸ್ಟಾರ್ ಡೈರೆಕ್ಟರ್ ರಾಜಮೌಳಿ ಹಿಂದೆ ಬಿದ್ದಿದೆ.


ಬಾಹುಬಲಿ ಖ್ಯಾತಿಯ  ಎಸ್‌.ಎಸ್‌.ರಾಜಮೌಳಿ(SS Rajamouli) ಆರ್‌ಎಸ್ಎಸ್ (RSS) ಚರಿತ್ರೆಗೆ ಆಕ್ಷನ್ ಕಟ್ ಹೇಳ್ತಾರಂತೆ. RSS ಚರಿತ್ರೆ ಸಿನಿಮಾಗೆ ಕಥೆ ಕೂಡ ರೆಡಿ ಆಗಿದ್ಯಂತೆ. ಮೌಳಿ ತಂದೆ ವಿಜಯೇಂದ್ರ ಪ್ರಸಾದ್(V Vijayendra Prasad) ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸ್ಟೋರಿಯನ್ನ ಸಿದ್ಧಪಡಿಸಿದ್ದಾರಂತೆ. ಸಂಘ ಪರಿವಾರ ತಮ್ಮ ಚರಿತ್ರೆಯನ್ನ ಬೆಳ್ಳಿತೆರೆ ಮೇಲೆ ತೆರೆದಿಡಬೇಕು ಅಂತ ಹಲವು ವರ್ಷಗಳಿಂದ ಪ್ಲಾನ್ ಮಾಡ್ತಿದೆ. ಆರ್‌ಎಸ್ಎಸ್ ಕಥೆಗೆ ಆಕ್ಷನ್ ಕಟ್ ಹೇಳೋಕೆ ಎಸ್.ಎಸ್ ರಾಜಮೌಳಿಯೇ ಸರಿಯಾದ ವ್ಯಕ್ತಿ ಅಂತ ಮೌಳಿಗೆ ಈ ಆಫರ್ ಮಾಡಿದ್ದಾರೆ. ಅದಕ್ಕೆ ಕಾರಣ ರಾಜಮೌಳಿಯ ಸಿನಿಮಾ ಜರ್ನಿ. ರಾಜಮೌಳಿ ಸಿನಿಮಾಗಳನ್ನ ಒಮ್ಮೆ ಮೆಲುಕು ಹಾಕಿ ನೋಡಿ. ಮೌಳಿ ಸಿನಿಮಾದಲ್ಲಿ ಧೈವ ಭಕ್ತಿ ಇರುತ್ತೆ. ಸನಾತನ(Sanatana) ಧರ್ಮದ ಲಿಂಕ್ ಇರುತ್ತೆ. ರಾಮ್‌ ಚರಣ್‌ರ ಮಗಧೀರ, ಪ್ರಭಾಸ್‌ರ ಬಾಹುಬಲಿ, ಇತ್ತೀಚೆಗೆ ಬಂದ ಆರ್‌ಆರ್‌ಆರ್‌ ಸಿನಿಮಾಗಳೇ ಇದಕ್ಕೆ ಸಾಕ್ಷಿ. ಹೀಗಾಗಿ ಆರ್‌ಎಸ್ಎಸ್ ತಮ್ಮ ಚರಿತ್ರೆಯನ್ನ ಹೇಳೋಕೆ ರಾಜಮೌಳಿಯೇ ಸರಿಯಾದ ಡೈರೆಕ್ಟರ್ ಅಂತ ಆಯ್ಕೆ ಮಾಡಿದೆಂತೆ. ಇಡೀ ದೇಶ ಲೋಕಸಭೆ ಎಲೆಕ್ಷನ್‌ಗೆ ಸನ್ನದ್ಧವಾಗ್ತಿದೆ. ಇದಕ್ಕಾಗಿ ಬಿಜೆಪಿ ಪಾಳಯಾ ಸಿನಿಮಾದ ಮೊರೆ ಹೋಗಿದೆಯಂತೆ. ಈ ಸಿನಿಮಾ ಮೂಲಕ ಬಿಜೆಪಿ ಹಾಗೂ ಸಂಘ ಪರಿವಾರ ಇಡೀ ದೇಶದ ಜನರ ಮನೆ-ಮನ ತಲುಪೋಕೆ ಪ್ಲಾನ್ ಮಾಡಿಕೊಂಡಿದ್ದಾರಂತೆ. ರಾಜಮೌಳಿ ಸಂಘಪರಿವಾರದ ಕಥೆಗೆ ಆಕ್ಷನ್ ಕಟ್ ಹೇಳೋದು ಕನ್ಫರ್ಮ್ ಅಂತ ಹೇಳಲಾಗ್ತಿದೆ. 

ಇದನ್ನೂ ವೀಕ್ಷಿಸಿ:  ಇಸ್ರೇಲ್-ಹಮಾಸ್ ಯುದ್ಧ.. ಹಮಾಸ್ ಉಗ್ರರ ನೂರಾರು ಹೆಣಗಳಿಗೆ ಒಂದೇ ಸಮಾಧಿ !

05:21ಕಿರಿಕ್ ಪಾರ್ಟಿ ಮರೆತಳಾ ರಶ್ಮಿಕಾ? ರಿಷಬ್–ರಕ್ಷಿತ್ ಹೆಸರಿಲ್ಲದ ಪೋಸ್ಟ್‌ಗೆ ಕನ್ನಡ ಫ್ಯಾನ್ಸ್ ಗರಂ
04:15ದೈವಗಳ ಟೈಮ್ ಮುಗಿತು.. ದೆವ್ವಗಳ ಸಮಯ ಶುರು.! ದೆವ್ವಗಳ ಆರ್ಭಟ.. ಬಾಹುಬಲಿ ಪ್ರಭಾಸ್​ ಧಗಧಗ..!
06:55ಕಾಟೇರನಂತೆಯೇ ಆಯ್ತು ದರ್ಶನ್ ಬದುಕು! ಕಂಬಿ ಹಿಂದೆ ಇನ್ನೆಷ್ಟು ಕಾಲ ಇರಬೇಕು ದಾಸ?
03:13Video: ರಕ್ಕಸಪುರದಲ್ಲಿ Raj B Shetty; ಮೊದಲ ಬಾರಿಗೆ ಖಾಕಿ ತೊಟ್ಟ ನಟ!
03:18ರಣಚಂಡಿ ರಶ್ಮಿಕಾ ಮಂದಣ್ಣ: ರಗಡ್‌ ಲುಕ್‌ನಲ್ಲಿ ಎಂಟ್ರಿಕೊಟ್ಟ ನ್ಯಾಷನಲ್‌ ಕ್ರಶ್‌!
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
04:19ಸಕ್ಕರೆಗೆ ಇರುವೆ ಮುತ್ತಿದಂತೆ ಸ್ಯಾಮ್​ಗೆ ಮುಗಿಬಿದ್ದ ಜನ: ಅಭಿಮಾನಿಗಳ ವರ್ತನೆಗೆ ಸಮಂತಾ ಹೈರಾಣು!
03:0445, ಮಾರ್ಕ್ ಜೊತೆ ಮತ್ತೊಂದು ಪ್ಯಾನ್ ಇಂಡಿಯಾ ಚಿತ್ರ: ಡಿ.25ಕ್ಕೆ ಮೋಹನ್ ಲಾಲ್ 'ವೃಷಭ' ತೆರೆಗೆ
05:19ಕಾಲಿವುಡ್ ಬ್ಯೂಟಿ ನಿವೇತಾ ಥಾಮಸ್‌ರ ಆ ಫೋಟೋ ವೈರಲ್: 'ನಾನವಳಲ್ಲ' ಎಂದ ಚತುರ್ಭಾಷಾ ನಟಿ
02:50ಅವತಾರ್​ 3 ವರ್ಲ್ಡ್​​ವೈಡ್ ಮೆಗಾ ಓಪನಿಂಗ್: ಬೆಂಗಳೂರಿನಲ್ಲಿಂದು ಬಿಗ್ಗೆಸ್ಟ್ ಮ್ಯೂಸಿಕಲ್ ನೈಟ್
Read more