ಕನ್ನಡಕ್ಕೆ ಬರ್ತಾರಾ ವಿಶಾಲ್?: ಶಕ್ತಿಧಾಮಕ್ಕೆ ಭೇಟಿ ನೀಡಿ ಹೇಳಿದ್ದೇನು?

ಕನ್ನಡಕ್ಕೆ ಬರ್ತಾರಾ ವಿಶಾಲ್?: ಶಕ್ತಿಧಾಮಕ್ಕೆ ಭೇಟಿ ನೀಡಿ ಹೇಳಿದ್ದೇನು?

Published : Dec 17, 2022, 04:16 PM IST

ಶಕ್ತಿಧಾಮದ ಮಕ್ಕಳ  ಶಿಕ್ಷಣಕ್ಕೆ ನೆರವಾಗಲು ಯಾವಾಗಲೂ ಸಿದ್ಧವಿರುವುದಾಗಿ ತಮಿಳು ನಟ ವಿಶಾಲ್ ಹೇಳಿದ್ದಾರೆ.
 

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಿಧನರಾದ ಸಂದರ್ಭದಲ್ಲಿ ಮಹಿಳೆಯರ ಪುನರ್ವಸತಿ ಕೇಂದ್ರ 'ಶಕ್ತಿಧಾಮದ' ಹೊಣೆ ಹೊರುವುದಾಗಿ ಹೇಳಿದ್ದ ತಮಿಳು ನಟ ವಿಶಾಲ್, ತದನಂತರ ಆ ಬಗ್ಗೆ ಮೌನ ವಹಿಸಿದ್ದರು. ಸಾಮಾಜಿಕ ಜಾಲತಾಣಗಳಲ್ಲಿಯೂ ಅವರ ಮೌನವನ್ನು ಪ್ರಶ್ನಿಸಲಾಗುತಿತ್ತು. ಇದೀಗ ಆ ಬಗ್ಗೆ ಮೌನ ಮುರಿದಿರುವ ವಿಶಾಲ್, ಡಾ.  ರಾಜ್ ಕುಮಾರ್ ಕುಟುಂಬದಿಂದ ಒಂದೇ ಒಂದು ಕರೆ ಬಂದರೂ ಸಾಕು, ಶಕ್ತಿಧಾಮದ ಮಕ್ಕಳ  ಶಿಕ್ಷಣಕ್ಕೆ ನೆರವಾಗಲು ಯಾವಾಗಲೂ ಸಿದ್ಧವಿರುವುದಾಗಿ ಹೇಳಿದ್ದಾರೆ. ತಮ್ಮ 'ಲಾಠಿ'  ಸಿನಿಮಾದ ಪ್ರಚಾರಕ್ಕಾಗಿ ನಗರಕ್ಕೆ ಆಗಮಿಸಿದ ಅವರು,  ಶಕ್ತಿಧಾಮದ ಮಕ್ಕಳಿಗೆ ಉತ್ತಮ ಶಿಕ್ಷಣ ಸಿಗುತ್ತಿದೆ. ರಾಜ್ ಕುಮಾರ್, ಪುನೀತ್ ರಾಜ್ ಕುಮಾರ್ ಅವರ ಕಾರ್ಯವನ್ನು ಅವರ ಕುಟುಂಬ ಮುಂದುವರೆಸಿದೆ. 1,800 ಮಕ್ಕಳಿಗೆ ಬೆಳಕಾಗಿದೆ. ಅವರಿಗೆ ನೆರವಾಗಲು ಹಾಗೂ ನಟ ಪ್ರಕಾಶ್ ರಾಜ್ ಆರಂಭಿಸಿರುವ 'ಪುನೀತ್ ಆಂಬ್ಯುಲೆನ್ಸ್ ' ಯೋಜನೆಗಾಗಿ ಐದು ವಾಹನ ನೀಡುವುದಕ್ಕೆ ಸಿದ್ಧನಿದ್ದೇನೆ ಎಂದರು. ಇನ್ನು 2024ರ ವೇಳೆ ಕನ್ನಡದಲ್ಲೂ ಅಭಿನಯಿಸಲು ಉತ್ಸುಕನಾಗಿದ್ದೇನೆ ಎಂದು ವಿಶಾಲ್ ತಿಳಿಸಿದ್ದಾರೆ.

ಐಶ್ವರ್ಯಾ ರೈ ಹೆಸರಲ್ಲಿ ನಕಲಿ ಪಾಸ್‌ಪೋರ್ಟ್; ಮೂವರು ವಂಚಕರ ಬಂಧನ

02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
05:21ಕಿರಿಕ್ ಪಾರ್ಟಿ ಮರೆತಳಾ ರಶ್ಮಿಕಾ? ರಿಷಬ್–ರಕ್ಷಿತ್ ಹೆಸರಿಲ್ಲದ ಪೋಸ್ಟ್‌ಗೆ ಕನ್ನಡ ಫ್ಯಾನ್ಸ್ ಗರಂ
04:15ದೈವಗಳ ಟೈಮ್ ಮುಗಿತು.. ದೆವ್ವಗಳ ಸಮಯ ಶುರು.! ದೆವ್ವಗಳ ಆರ್ಭಟ.. ಬಾಹುಬಲಿ ಪ್ರಭಾಸ್​ ಧಗಧಗ..!
06:55ಕಾಟೇರನಂತೆಯೇ ಆಯ್ತು ದರ್ಶನ್ ಬದುಕು! ಕಂಬಿ ಹಿಂದೆ ಇನ್ನೆಷ್ಟು ಕಾಲ ಇರಬೇಕು ದಾಸ?
03:13Video: ರಕ್ಕಸಪುರದಲ್ಲಿ Raj B Shetty; ಮೊದಲ ಬಾರಿಗೆ ಖಾಕಿ ತೊಟ್ಟ ನಟ!
03:18ರಣಚಂಡಿ ರಶ್ಮಿಕಾ ಮಂದಣ್ಣ: ರಗಡ್‌ ಲುಕ್‌ನಲ್ಲಿ ಎಂಟ್ರಿಕೊಟ್ಟ ನ್ಯಾಷನಲ್‌ ಕ್ರಶ್‌!
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
Read more