ಅಜಯ್‌ ದೇವಗನ್ - ಸುದೀಪ್ ಮಧ್ಯೆ ಹಿಂದಿ ವಿವಾದ ಉಂಟಾಗಿದ್ಹೇಗೆ.?

ಅಜಯ್‌ ದೇವಗನ್ - ಸುದೀಪ್ ಮಧ್ಯೆ ಹಿಂದಿ ವಿವಾದ ಉಂಟಾಗಿದ್ಹೇಗೆ.?

Published : Apr 29, 2022, 03:25 PM IST

ಕಿಚ್ಚ ಸುದೀಪ್ (Kiccha Sudeep) ಹಾಗೂ ಅಜಯ್ ದೇವಗನ್ (Ajay Devgan) ನಡುವೆ ಟ್ವಿಟ್ ವಾರ್ (Tweet War) ಇದೀಗ ದೊಡ್ಡ ಮಟ್ಟದ ಚರ್ಚೆಗೆ ಕಾರಣವಾಗಿದೆ. ಹಾಗಿದ್ರೆ ಅಜಯ್‌ ದೇವಗನ್ ಹಾಗೂ ಸುದೀಪ್ ಮಧ್ಯೆ ಸಮರಕ್ಕೆ ಕಾರಣ ಏನು? ಮೊದಲು ವಿವಾದ ಉಂಟಾಗಿದ್ದು ಹೇಗೆ.? 

ಕಿಚ್ಚ ಸುದೀಪ್ (Kiccha Sudeep) ಹಾಗೂ ಅಜಯ್ ದೇವಗನ್ (Ajay Devgan) ನಡುವೆ ಟ್ವಿಟ್ ವಾರ್ (Tweet War) ಇದೀಗ ದೊಡ್ಡ ಮಟ್ಟದ ಚರ್ಚೆಗೆ ಕಾರಣವಾಗಿದೆ. ಹಾಗಿದ್ರೆ ಅಜಯ್‌ ದೇವಗನ್ ಹಾಗೂ ಸುದೀಪ್ ಮಧ್ಯೆ ಸಮರಕ್ಕೆ ಕಾರಣ ಏನು? ಮೊದಲು ವಿವಾದ ಉಂಟಾಗಿದ್ದು ಹೇಗೆ.?

ಅದು ರಾಮ್ ಗೋಪಾಲ್ ವರ್ಮಾ ಮತ್ತು ಉಪೇಂದ್ರ ಕಾಂಬಿನೇಷನ್ನಲ್ಲಿ ಮೂಡಿಬರುತ್ತಿರುವ ‘ಐ ಆ್ಯಮ್ ಆರ್’(I Am R) ಸಿನಿಮಾದ ಟೈಟಲ್ ಮತ್ತು ಫಸ್ಟ್ಲುಕ್ ಲಾಂಚ್ ಕಾರ್ಯಕ್ರಮ. ಅದಕ್ಕೆ ಕಿಚ್ಚ ಸುದೀಪ್ ಅವರು ಮುಖ್ಯ ಅಥಿತಿ ಆಗಿದ್ದರು. ಆ ವೇದಿಕೆಯಲ್ಲಿ ಪ್ಯಾನ್ ಇಂಡಿಯಾ ಸಿನಿಮಾ ಬಗ್ಗೆ ಮಾತು ಪ್ರಸ್ತಾಪ ಆಯಿತು. ಅದಕ್ಕೆ ಪ್ರತಿಕ್ರಿಯಿಸಿದ ಕಿಚ್ಚ ಸುದೀಪ್ ಅವರು, ‘ಕನ್ನಡ ಚಿತ್ರರಂಗದ ಒಂದು ಸಿನಿಮಾವನ್ನು ಪ್ಯಾನ್ ಇಂಡಿಯಾ ಚಿತ್ರ ಅಂತ ಹೇಳಿದ್ದೀರಿ. ಅದಕ್ಕೆ ಒಂದು ಕರೆಕ್ಷನ್ ಇರಲಿ. ಯಾಕೆಂದರೆ ಈಗ ಹಿಂದಿ ರಾಷ್ಟ್ರ ಭಾಷೆ ಅಲ್ಲ. ಹಿಂದಿಯವರು ನಿಜವಾಗಿಯೂ ಪ್ಯಾನ್ ಇಂಡಿಯಾ ಸಿನಿಮಾ ಮಾಡುತ್ತಿದ್ದಾರೆ. ತಮ್ಮ ಚಿತ್ರವನ್ನು ತಮಿಳು, ತೆಲುಗಿಗೆ ಡಬ್ ಮಾಡಿ ಒದ್ದಾಡುತ್ತಿದ್ದಾರೆ. ಆಗ್ತಾ ಇಲ್ಲ’ ಎಂದು ಸುದೀಪ್ ಹೇಳಿದ್ದರು.

ಸುದೀಪ್ ಅವರ ಮಾತುಗಳು ಹಿಂದಿ ಸೆಲೆಬ್ರಿಟಿಗಳ ಕಿವಿ ತಲುಪುವ ಹೊತ್ತಿಗೆ ಬೇರೆಯದೇ ಸ್ವರೂಪ ಪಡೆದುಕೊಂಡಿತು. ನಟ ಅಜಯ್ ದೇವಗನ್ ಅವರು ಒಂದು ಲಾಜಿಕ್ ಇಲ್ಲದ ಪ್ರಶ್ನೆಯನ್ನು ಎತ್ತಿದರು. ‘ನನ್ನ ಸಹೋದರ ಕಿಚ್ಚ ಸುದೀಪ್ ಅವರೇ.. ನಿಮ್ಮ ಪ್ರಕಾರ ಹಿಂದಿ ರಾಷ್ಟ್ರ ಭಾಷೆ ಅಲ್ಲ ಎಂಬುದಾದರೆ ನಿಮ್ಮ ಮಾತೃಭಾಷೆಯ ಸಿನಿಮಾಗಳನ್ನು ಹಿಂದಿಗೆ ಡಬ್ ಮಾಡಿ ನೀವೇಕೆ ರಿಲೀಸ್ ಮಾಡುತ್ತೀರಿ? ಅಂದು, ಇಂದು ಎಂದೆಂದಿಗೂ ಹಿಂದಿಯೇ ನಮ್ಮ ರಾಷ್ಟ್ರ ಭಾಷೆ ಆಗಿರಲಿದೆ. ಜನ ಗಣ ಮನ’ ಎಂದು ಅಜಯ್ ದೇವಗನ್ ಟ್ವೀಟ್ ಮಾಡಿದರು. ಅವರ ಈ ಮಾತಿಗೆ ಅನೇಕರಿಂದ ಖಂಡನೆ ವ್ಯಕ್ತವಾಗುತ್ತಿದೆ. ಸೋಶಿಯಲ್ ಮೀಡಿಯಾದಲ್ಲಿ ಪರ-ವಿರೋಧದ ಚರ್ಚೆ ಜೋರಾಗಿದೆ.

 

05:53ನೋರಾ ಫತೇಹಿ ಆಫರ್​ ತಮನ್ನಾ ಪಾಲಾಗಿದ್ದೇಕೆ..? ಬಿಳಿ ಬ್ಯೂಟಿ ನೋಡಿದ್ರೆ ಇನ್ಮುಂದೆ ಭಯ ಪಡ್ತೀರಾ ನೀವು!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!
Read more