ಅಜಯ್‌ ದೇವಗನ್ - ಸುದೀಪ್ ಮಧ್ಯೆ ಹಿಂದಿ ವಿವಾದ ಉಂಟಾಗಿದ್ಹೇಗೆ.?

ಅಜಯ್‌ ದೇವಗನ್ - ಸುದೀಪ್ ಮಧ್ಯೆ ಹಿಂದಿ ವಿವಾದ ಉಂಟಾಗಿದ್ಹೇಗೆ.?

Published : Apr 29, 2022, 03:25 PM IST

ಕಿಚ್ಚ ಸುದೀಪ್ (Kiccha Sudeep) ಹಾಗೂ ಅಜಯ್ ದೇವಗನ್ (Ajay Devgan) ನಡುವೆ ಟ್ವಿಟ್ ವಾರ್ (Tweet War) ಇದೀಗ ದೊಡ್ಡ ಮಟ್ಟದ ಚರ್ಚೆಗೆ ಕಾರಣವಾಗಿದೆ. ಹಾಗಿದ್ರೆ ಅಜಯ್‌ ದೇವಗನ್ ಹಾಗೂ ಸುದೀಪ್ ಮಧ್ಯೆ ಸಮರಕ್ಕೆ ಕಾರಣ ಏನು? ಮೊದಲು ವಿವಾದ ಉಂಟಾಗಿದ್ದು ಹೇಗೆ.? 

ಕಿಚ್ಚ ಸುದೀಪ್ (Kiccha Sudeep) ಹಾಗೂ ಅಜಯ್ ದೇವಗನ್ (Ajay Devgan) ನಡುವೆ ಟ್ವಿಟ್ ವಾರ್ (Tweet War) ಇದೀಗ ದೊಡ್ಡ ಮಟ್ಟದ ಚರ್ಚೆಗೆ ಕಾರಣವಾಗಿದೆ. ಹಾಗಿದ್ರೆ ಅಜಯ್‌ ದೇವಗನ್ ಹಾಗೂ ಸುದೀಪ್ ಮಧ್ಯೆ ಸಮರಕ್ಕೆ ಕಾರಣ ಏನು? ಮೊದಲು ವಿವಾದ ಉಂಟಾಗಿದ್ದು ಹೇಗೆ.?

ಅದು ರಾಮ್ ಗೋಪಾಲ್ ವರ್ಮಾ ಮತ್ತು ಉಪೇಂದ್ರ ಕಾಂಬಿನೇಷನ್ನಲ್ಲಿ ಮೂಡಿಬರುತ್ತಿರುವ ‘ಐ ಆ್ಯಮ್ ಆರ್’(I Am R) ಸಿನಿಮಾದ ಟೈಟಲ್ ಮತ್ತು ಫಸ್ಟ್ಲುಕ್ ಲಾಂಚ್ ಕಾರ್ಯಕ್ರಮ. ಅದಕ್ಕೆ ಕಿಚ್ಚ ಸುದೀಪ್ ಅವರು ಮುಖ್ಯ ಅಥಿತಿ ಆಗಿದ್ದರು. ಆ ವೇದಿಕೆಯಲ್ಲಿ ಪ್ಯಾನ್ ಇಂಡಿಯಾ ಸಿನಿಮಾ ಬಗ್ಗೆ ಮಾತು ಪ್ರಸ್ತಾಪ ಆಯಿತು. ಅದಕ್ಕೆ ಪ್ರತಿಕ್ರಿಯಿಸಿದ ಕಿಚ್ಚ ಸುದೀಪ್ ಅವರು, ‘ಕನ್ನಡ ಚಿತ್ರರಂಗದ ಒಂದು ಸಿನಿಮಾವನ್ನು ಪ್ಯಾನ್ ಇಂಡಿಯಾ ಚಿತ್ರ ಅಂತ ಹೇಳಿದ್ದೀರಿ. ಅದಕ್ಕೆ ಒಂದು ಕರೆಕ್ಷನ್ ಇರಲಿ. ಯಾಕೆಂದರೆ ಈಗ ಹಿಂದಿ ರಾಷ್ಟ್ರ ಭಾಷೆ ಅಲ್ಲ. ಹಿಂದಿಯವರು ನಿಜವಾಗಿಯೂ ಪ್ಯಾನ್ ಇಂಡಿಯಾ ಸಿನಿಮಾ ಮಾಡುತ್ತಿದ್ದಾರೆ. ತಮ್ಮ ಚಿತ್ರವನ್ನು ತಮಿಳು, ತೆಲುಗಿಗೆ ಡಬ್ ಮಾಡಿ ಒದ್ದಾಡುತ್ತಿದ್ದಾರೆ. ಆಗ್ತಾ ಇಲ್ಲ’ ಎಂದು ಸುದೀಪ್ ಹೇಳಿದ್ದರು.

ಸುದೀಪ್ ಅವರ ಮಾತುಗಳು ಹಿಂದಿ ಸೆಲೆಬ್ರಿಟಿಗಳ ಕಿವಿ ತಲುಪುವ ಹೊತ್ತಿಗೆ ಬೇರೆಯದೇ ಸ್ವರೂಪ ಪಡೆದುಕೊಂಡಿತು. ನಟ ಅಜಯ್ ದೇವಗನ್ ಅವರು ಒಂದು ಲಾಜಿಕ್ ಇಲ್ಲದ ಪ್ರಶ್ನೆಯನ್ನು ಎತ್ತಿದರು. ‘ನನ್ನ ಸಹೋದರ ಕಿಚ್ಚ ಸುದೀಪ್ ಅವರೇ.. ನಿಮ್ಮ ಪ್ರಕಾರ ಹಿಂದಿ ರಾಷ್ಟ್ರ ಭಾಷೆ ಅಲ್ಲ ಎಂಬುದಾದರೆ ನಿಮ್ಮ ಮಾತೃಭಾಷೆಯ ಸಿನಿಮಾಗಳನ್ನು ಹಿಂದಿಗೆ ಡಬ್ ಮಾಡಿ ನೀವೇಕೆ ರಿಲೀಸ್ ಮಾಡುತ್ತೀರಿ? ಅಂದು, ಇಂದು ಎಂದೆಂದಿಗೂ ಹಿಂದಿಯೇ ನಮ್ಮ ರಾಷ್ಟ್ರ ಭಾಷೆ ಆಗಿರಲಿದೆ. ಜನ ಗಣ ಮನ’ ಎಂದು ಅಜಯ್ ದೇವಗನ್ ಟ್ವೀಟ್ ಮಾಡಿದರು. ಅವರ ಈ ಮಾತಿಗೆ ಅನೇಕರಿಂದ ಖಂಡನೆ ವ್ಯಕ್ತವಾಗುತ್ತಿದೆ. ಸೋಶಿಯಲ್ ಮೀಡಿಯಾದಲ್ಲಿ ಪರ-ವಿರೋಧದ ಚರ್ಚೆ ಜೋರಾಗಿದೆ.

 

05:21ಕಿರಿಕ್ ಪಾರ್ಟಿ ಮರೆತಳಾ ರಶ್ಮಿಕಾ? ರಿಷಬ್–ರಕ್ಷಿತ್ ಹೆಸರಿಲ್ಲದ ಪೋಸ್ಟ್‌ಗೆ ಕನ್ನಡ ಫ್ಯಾನ್ಸ್ ಗರಂ
04:15ದೈವಗಳ ಟೈಮ್ ಮುಗಿತು.. ದೆವ್ವಗಳ ಸಮಯ ಶುರು.! ದೆವ್ವಗಳ ಆರ್ಭಟ.. ಬಾಹುಬಲಿ ಪ್ರಭಾಸ್​ ಧಗಧಗ..!
06:55ಕಾಟೇರನಂತೆಯೇ ಆಯ್ತು ದರ್ಶನ್ ಬದುಕು! ಕಂಬಿ ಹಿಂದೆ ಇನ್ನೆಷ್ಟು ಕಾಲ ಇರಬೇಕು ದಾಸ?
03:13Video: ರಕ್ಕಸಪುರದಲ್ಲಿ Raj B Shetty; ಮೊದಲ ಬಾರಿಗೆ ಖಾಕಿ ತೊಟ್ಟ ನಟ!
03:18ರಣಚಂಡಿ ರಶ್ಮಿಕಾ ಮಂದಣ್ಣ: ರಗಡ್‌ ಲುಕ್‌ನಲ್ಲಿ ಎಂಟ್ರಿಕೊಟ್ಟ ನ್ಯಾಷನಲ್‌ ಕ್ರಶ್‌!
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
04:19ಸಕ್ಕರೆಗೆ ಇರುವೆ ಮುತ್ತಿದಂತೆ ಸ್ಯಾಮ್​ಗೆ ಮುಗಿಬಿದ್ದ ಜನ: ಅಭಿಮಾನಿಗಳ ವರ್ತನೆಗೆ ಸಮಂತಾ ಹೈರಾಣು!
03:0445, ಮಾರ್ಕ್ ಜೊತೆ ಮತ್ತೊಂದು ಪ್ಯಾನ್ ಇಂಡಿಯಾ ಚಿತ್ರ: ಡಿ.25ಕ್ಕೆ ಮೋಹನ್ ಲಾಲ್ 'ವೃಷಭ' ತೆರೆಗೆ
05:19ಕಾಲಿವುಡ್ ಬ್ಯೂಟಿ ನಿವೇತಾ ಥಾಮಸ್‌ರ ಆ ಫೋಟೋ ವೈರಲ್: 'ನಾನವಳಲ್ಲ' ಎಂದ ಚತುರ್ಭಾಷಾ ನಟಿ
02:50ಅವತಾರ್​ 3 ವರ್ಲ್ಡ್​​ವೈಡ್ ಮೆಗಾ ಓಪನಿಂಗ್: ಬೆಂಗಳೂರಿನಲ್ಲಿಂದು ಬಿಗ್ಗೆಸ್ಟ್ ಮ್ಯೂಸಿಕಲ್ ನೈಟ್
Read more