ಪ್ರಶಾಂತ್ ನೀಲ್‌ಗೆ ಬೆದರಿಕೆ ಹಾಕಿದ ಫ್ಯಾನ್: ಹುಚ್ಚು ಅಭಿಮಾನಿಯ ಬೆದರಿಕೆಗೆ ಏನಂದ್ರು ಪ್ರಭಾಸ್?‌

ಪ್ರಶಾಂತ್ ನೀಲ್‌ಗೆ ಬೆದರಿಕೆ ಹಾಕಿದ ಫ್ಯಾನ್: ಹುಚ್ಚು ಅಭಿಮಾನಿಯ ಬೆದರಿಕೆಗೆ ಏನಂದ್ರು ಪ್ರಭಾಸ್?‌

Published : May 14, 2022, 10:33 PM IST

ಟಾಲಿವುಡ್ ಸ್ಟಾರ್ ಪ್ರಭಾಸ್ ಅಭಿಮಾನಿಯೊಬ್ಬ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ನಿರ್ದೇಶಕ ಪ್ರಶಾಂತ್ ನೀಲ್ ಅವರಿಗೆ ಪತ್ರ ಬರೆದಿದ್ದಾನೆ. ಈ ಪತ್ರ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ.

ಕೆಜಿಎಫ್ 2 ಸಕ್ಸಸ್ ನಂತರ ಪ್ರಶಾಂತ್ ನೀಲ್ (Prashant Neel) ಸದ್ಯ ಟಾಲಿವುಡ್ ಸ್ಟಾರ್ ಪ್ರಭಾಸ್ (Prabhas) ಜೊತೆ ಸಲಾರ್ (Salaar) ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಸಲಾರ್ ಸಿನಿಮಾದ ಚಿತ್ರೀಕರಣ ಸದ್ಯ 35ರಷ್ಟು ಮುಕ್ತಾಯವಾಗಿದೆ. ಇನ್ನು ಉಳಿದ ಭಾಗದ ಚಿತ್ರೀಕರಣ ಮುಂದಿನ ವಾರದಿಂದ ಪ್ರಾರಂಭವಾಗುತ್ತಿದೆ. ಈ ಮಧ್ಯೆ ನಡುವೆ ಪ್ರಭಾಸ್ ಅಭಿಮಾನಿಯೊಬ್ಬರು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ನಿರ್ದೇಶಕ ಪ್ರಶಾಂತ್ ನೀಲ್ ಅವರಿಗೆ ಪತ್ರ ಬರೆದಿದ್ದಾನೆ. ಈ ಪತ್ರ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ. ಅಷ್ಟಕ್ಕೂ ಅಭಿಮಾನಿ ಹೀಗೆ ಮಾಡಲು ಕಾರಣ ಸಲಾರ್ ಸಿನಿಮಾದ ಅಪ್‌ಡೇಟ್‌ಗಾಗಿ.

ಟಾಲಿವುಡ್‌ನಲ್ಲಿ ಶುರು ಹೊಸ ಭಯ; ರಾಜಮೌಳಿ ಜೊತೆ ಸಿನಿಮಾ ಮಾಡಿ ಗೆದ್ದವ್ರು ಮತ್ತೆ ಕಾಣಲಿಲ್ಲ ಗೆಲುವು

ಹೌದು! ಸಲಾರ್ ಸಿನಿಮಾದ ಬಗ್ಗೆ ಯಾವುದೇ ಅಪ್‌ಡೇಟ್ ನೀಡಿಲ್ಲ ಎಂದರೆ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಪತ್ರದಲ್ಲಿ ಬರೆದಿದ್ದಾರೆ. ಈಗಾಗಲೇ ಮೇ ತಿಂಗಳ 2ನೇ ವಾರ ಕೂಡ ಮುಗಿಯುತ್ತಿದೆ. ಇದುವರೆಗೂ ಸಿನಿಮಾದಿಂದ ಯಾವುದೇ ಅಪ್‌ಡೇಟ್‌ ಸಿಕ್ಕಿಲ್ಲ. ಸಾಹೋ ಮತ್ತು ರಾಧೆ ಶ್ಯಾಮ್ ಸಿನಿಮಾದಿಂದನೂ ಇದೇ ತಪ್ಪು ಮಾಡಿದ್ದರು. ತುಂಬಾ ನಿರಾಸೆಯಾಗಿತ್ತು. ಹಾಗಾಗಿ ನಾವು ಈಗಾಗಲೇ ತುಂಬಾ ನೊಂದಿದ್ದೇವೆ ಎಂದು ಹೇಳಿದ್ದಾರೆ. ಒಂದು ವೇಳೆ ನಿರ್ದೇಶಕ ಪ್ರಶಾಂತ್ ನೀಲ್ ಈ ತಿಂಗಳಲ್ಲಿ ಅಪ್‌ಡೇಟ್‌ ನೀಡದಿದ್ದರೆ ನಾನು ಖಂಡಿತ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಪತ್ರದಲ್ಲಿ ಬರೆದಿದ್ದಾರೆ. ಕೊನೆಯಲ್ಲಿ ನಮಗೆ ಸಲಾರ್ ಸಿನಿಮಾದ ಅಪ್‌ಡೇಟ್‌ ಬೇಕು ಎಂದು ಬರೆದು ಪತ್ರ ಕೊನೆಗೊಳಿಸಿದ್ದಾರೆ. ಈ ಪತ್ರ ಇದೀಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಸಿನಿಮಾ ಹಂಗಾಮಾ ವೀಡಿಯೋಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ಕಿಸಿ: https://kannada.asianetnews.com/movies

03:52ರಾಕಿ ಸಾಮ್ರಾಜ್ಯಕ್ಕೆ 'ಲೇಡಿ ಬಾಸ್': ನಿರ್ದೇಶಕಿಗೆ ಬಿಗ್ ಬಜೆಟ್ ಟಾಕ್ಸಿಕ್ ಸಿನಿಮಾದ ಬರ್ತ್‌ಡೇ ಗಿಫ್ಟ್!
02:48ಪೆದ್ದಿ ಸೆಟ್​ನಲ್ಲಿ ಕಣ್ಣೀರಿಟ್ಟಿದ್ರಾ ಜಾನ್ವಿ ಕಪೂರ್? ಚಾಟ್ಸ್ ವಿವರ ವೈರಲ್, ಏನಿದು ಜಾನು ಚಾಟ್ ಸೀಕ್ರೆಟ್!
04:41ಸಾಯಿ ಪಲ್ಲವಿ, ರುಕ್ಮಿಣಿ ವಸಂತ್ ಕೂಡ ಅಲ್ಲ: ಸುಬ್ಬುಲಕ್ಷ್ಮಿ ಬಯೋಪಿಕ್​ಗೆ ರಶ್ಮಿಕಾ ಎಂಟ್ರಿ?
03:08Rashmika-Vijay: ವಿಜಯ್ ಕಟ್ಟಿರೋ ತಾಳಿಯಲ್ಲೂ ರಶ್ಮಿಕಾ ಕೈಚಳಕ.. ನ್ಯಾಷನಲ್ ಕ್ರಶ್ ಟ್ಯಾಲೆಂಟ್ ಒಂದೆರಡಲ್ಲ!
02:49ಸಪ್ತಮಿ ಗೌಡ ಬಳಿಕ ಪಾಪರಾಜಿಗಳ ಮೇಲೆ ರಣಬೀರ್​ ಕಪೂರ್ ಗರಂ: ರಾಂಗ್ ಆದ ಬಾಲಿವುಡ್​ ರಾಮ!
21:03TVK ವಿಜಯೋತ್ಸವ.. ತ್ರಿಷಾ ಜೊತೆ ನಂಟಿಗೆ ಅಧಿಕೃತ ಮುದ್ರೆ? ಇತಿಹಾಸ ಮರೆಸುತ್ತಾರಾ ವಿಜಯ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
04:06ಸಲ್ಲೂಗೆ ಮತ್ತೆ ಕಂಟಕ; ದೇಶಪ್ರೇಮ ತೋರಿಸ್ತೀನಿ ಅಂದ್ರೂ 'ಮಾತೃಭೂಮಿ'ಗೆ ಇದೆಂತಾ ಅಗ್ನಿ ಪರೀಕ್ಷೆ?
Read more