Deepika Padukone: 20 ನಿಮಿಷಕ್ಕೆ 'ಗೆಹ್ರೈಯಾನ್' ಚಿತ್ರ ವೀಕ್ಷಿಸುವುದನ್ನು ನಿಲ್ಲಿಸಿದೆ ಎಂದ ಭಾಸ್ಕರ್ ರಾವ್!

Deepika Padukone: 20 ನಿಮಿಷಕ್ಕೆ 'ಗೆಹ್ರೈಯಾನ್' ಚಿತ್ರ ವೀಕ್ಷಿಸುವುದನ್ನು ನಿಲ್ಲಿಸಿದೆ ಎಂದ ಭಾಸ್ಕರ್ ರಾವ್!

Suvarna News   | Asianet News
Published : Feb 16, 2022, 03:27 PM IST

ಬಾಲಿವುಡ್ ನಟಿ ದೀಪಿಕಾ ಪಡುಕೋಣೆ, ಸಿದ್ಧಾಂತ್ ಚತುರ್ವೇದಿ ಹಾಗೂ ಅನನ್ಯ ಪಾಂಡೆ ಅಭಿನಯದ 'ಗೆಹ್ರೈಯಾನ್' ಸಿನಿಮಾ ಫೆಬ್ರವರಿ 11 ರಂದು  ಓಟಿಟಿ ವೇದಿಕೆಯಲ್ಲಿ ಬಿಡುಗಡೆಯಾಗಿತ್ತು. ಇದೀಗ ಈ ಚಿತ್ರದ ಬಗ್ಗೆ ಬೆಂಗಳೂರಿನ ಮಾಜಿ ಪೊಲೀಸ್ ಕಮಿಷನರ್ ಭಾಸ್ಕರ್ ರಾವ್ ತಮ್ಮ ಅಭಿಪ್ರಾಯವನ್ನು ಟ್ವೀಟರ್‌ನಲ್ಲಿ ಹಂಚಿಕೊಂಡಿದ್ದಾರೆ.

ಬಾಲಿವುಡ್ (Bollywood) ನಟಿ ದೀಪಿಕಾ ಪಡುಕೋಣೆ (Deepika Padukone), ಸಿದ್ಧಾಂತ್ ಚತುರ್ವೇದಿ (Sidhant Chaturvedi) ಹಾಗೂ ಅನನ್ಯ ಪಾಂಡೆ (Ananya Pandey) ಅಭಿನಯದ 'ಗೆಹ್ರೈಯಾನ್' (Gehraiyaan) ಸಿನಿಮಾ ಫೆಬ್ರವರಿ 11 ರಂದು  ಓಟಿಟಿ (OTT) ವೇದಿಕೆಯಲ್ಲಿ ಬಿಡುಗಡೆಯಾಗಿತ್ತು. ಚಿತ್ರಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ನೆಗೆಟಿವ್ ವಿಮರ್ಶೆಗಳು ಲಭ್ಯವಾಗಿತ್ತು. 'ಗೆಹ್ರೈಯಾನ್' ಸಿನಿಮಾ ಅಶ್ಲೀಲ ಮತ್ತು ಕೆಟ್ಟ ಸಿನಿಮಾ ಅಂತ ಇತ್ತೀಚೆಗಷ್ಟೇ ನಟಿ ಕಂಗನಾ ರಣಾವತ್ (Kangana Ranaut) ಹೇಳಿದ್ದರು. ಇದೀಗ 'ಗೆಹ್ರೈಯಾನ್' ಚಿತ್ರದ ಬಗ್ಗೆ ಬೆಂಗಳೂರಿನ ಮಾಜಿ ಪೊಲೀಸ್ ಕಮಿಷನರ್ ಭಾಸ್ಕರ್ ರಾವ್ (Bhaskar Rao) ತಮ್ಮ ಅಭಿಪ್ರಾಯವನ್ನು ಟ್ವೀಟರ್‌ನಲ್ಲಿ (Twitter) ಹಂಚಿಕೊಂಡಿದ್ದಾರೆ.

ಗೆಹ್ರೈಯಾನ್ ಚಿತ್ರದಲ್ಲಿ ನಟನ ಜೊತೆ ದೀಪಿಕಾ ರೊಮ್ಯಾನ್ಸ್‌; ಪತಿ Ranveer Singh ಹೇಳಿದ್ದಿಷ್ಟು!

'ಗೆಹ್ರೈಯಾನ್' ಚಿತ್ರವನ್ನು ನೋಡಲು ಪ್ರಾರಂಭಿಸಿದೆವು. 20 ನಿಮಿಷಗಳ ನಂತರ ನಾನು ಚಿತ್ರವನ್ನು ವೀಕ್ಷಿಸಲು ನಿಲ್ಲಿಸಿದೆ. ಜೀವನದ ಮೌಲ್ಯಗಳಿಗೆ ಈ ಚಿತ್ರ ಅವಮಾನಿಸಿದೆ ಎಂದು ನನಗೆ ಅನಿಸಿತು. ನಾನು ದೀಪಿಕಾ ಪಡುಕೋಣೆ ಅವರ ಅಭಿಮಾನಿ. ಅವರು ನಮ್ಮ ಬೆಂಗಳೂರಿನ ಹುಡುಗಿ, ಸಾಧಕಿ ಮತ್ತು ಧೈರ್ಯಶಾಲಿ ಹೆಣ್ಣುಮಗಳು. ಲಕ್ಷಾಂತರ ಯುವತಿಯರು ದೀಪಿಕಾ ಪಡುಕೋಣೆ ಅವರನ್ನು ಆರಾಧಿಸುತ್ತಾರೆ, ಅನುಸರಿಸುತ್ತಾರೆ. ಆದರೆ, ಸಿನಿಮಾದಲ್ಲಿ ವಿವಾಹೇತರ ಸಂಬಂಧ ಮತ್ತು ಮನೆಯ ನಾಶದ ಕಥಾವಸ್ತು ಇದೆ. ಇದು ಸರಿ ಎಂದು ಕೆಲವರು ಭಾವಿಸಬಹುದು. ಆದರೆ ಚಿತ್ರದಿಂದ ಸಮಾಜಕ್ಕೆ ತಪ್ಪು ಸಂದೇಶ ರವಾನೆಯಾಗಿದೆ. ನಾನು ಹಳೆಯ ಕಾಲದವನಾ? ಎಂದು ಭಾಸ್ಕರ್ ರಾವ್ ಟ್ವೀಟ್ (Tweet) ಮಾಡಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment

02:16ಬೇರೆಯದೇ ಸಂದೇಶ ಕೊಡುತ್ತಿರೋ 'ದಿ ಡೆವಿಲ್’ ಟ್ರೈಲರ್; ದರ್ಶನ್ ಫ್ಯಾನ್ಸ್‌ ಮುಖದಲ್ಲಿ ಮೂಡ್ತಿದೆ ಮಂದಹಾಸ!
04:08ಸದ್ಗುರು 'ಲಿಂಗ ಭೈರವಿ' ದೇವಿ ಸನ್ನಿಧಿಯಲ್ಲಿಯೇ ಯಾಕೆ ಸಮಂತಾ ಮದುವೆ ಆಗಿದ್ದು? ಇಲ್ಲಿದೆ ಸೀಕ್ರೆಟ್.. !
05:43ರಾಜಮೌಳಿಗೆ ಕಿಚ್ಚನ ಮೇಲೆ ಕಣ್ಣು: ಸುದೀಪ್​​ಗೆ ಜಕ್ಕಣ ಮತ್ತೆ ಗಾಳ, ಏನಿದು ಹೊಸ ಮೆಗಾ ಪ್ಲ್ಯಾನ್?
04:29ಅಂದರ್ ಆಗಿರೋ ದರ್ಶನ್ ಮೂಲಕ ಖೈದಿಗಳ ಕಳ್ಳಾಟಗಳೆಲ್ಲಾ ಬಾಹರ್! ನಟನ ಸ್ನೇಹಿತನಿಂದ ಜೈಲ್ ವಿಡಿಯೋ ವೈರಲ್?
06:03ತಮಿಳು ನಟರಿಗೆ ಭಾರೀ ಶಾಕ್! ರಜನಿಕಾಂತ್ ಸೇರಿದಂತೆ ಎಲ್ಲರಿಗೂ 100 ಕೋಟಿ ಸಂಭಾವನೆಗೆ ಬ್ರೇಕ್?
02:42ಕ್ರಿಸ್‌ಮಸ್‌ಗೆ ನಂದಕಿಶೋರ್- ಮೋಹನ್ ಲಾಲ್ ಜೋಡಿಯ ವೃಷಭ ರಿಲೀಸ್: ರಾಗಿಣಿ ಪಾತ್ರವೇನು?
05:18ದಾಸನ ಪತ್ನಿಗೆ ಬರ್ತ್​ ಡೇ... ಆ ಸಂಭ್ರಮವೇ ದರ್ಶನ್ ಬಾಳಲ್ಲಿ ಬಿರುಗಾಳಿ ಎಬ್ಬಿಸಿತೇ?
04:48ಮಾಜಿ ಬಾಯ್‌ಫ್ರೆಂಡ್ ಗರ್ವಿಷ್ಟ, ಟಾಕ್ಸಿಕ್ ಮ್ಯಾನ್; 'ಇದು ನಂದೇ ಕಥೆ' ಅಂದ್ರಾ -ಗರ್ಲ್‌ಫ್ರೆಂಡ್- ರಶ್ಮಿಕಾ ಮಂದಣ್ಣ?
04:07ಮಾರ್ಕ್ ಮೇನಿಯಾ ಶುರು: ಕಿಚ್ಚನ 'ಮಾರ್ಕ್' ಕ್ರಿಸ್​ಮಸ್ ಟೈಂಗೆ ಬರೋದು ಫಿಕ್ಸ್ !
02:38ಕತ್ರಿನಾ ಕೈಫ್-ವಿಕ್ಕಿ ಜೋಡಿಯ ;ಸಂತಾನ ಭಾಗ್ಯ'ಕ್ಕೆ ಕರ್ನಾಟಕದ ಶ್ರೀ ಕ್ಷೇತ್ರ ಕುಕ್ಕೆ ಸುಬ್ರಮಣ್ಯದ ನಂಟು!
Read more