ರಾಮಾಯಣದ ಬಗ್ಗೆ ಮೊದಲ ಭಾರಿಗೆ ಬಾಯ್ಬಿಟ್ಟ ಯಶ್! ಭಾರತೀಯ ಸಂಸ್ಕೃತಿ ಜಗತ್ತಿಗೆ ತಿಳಿಸಲು ಈ ಸಿನಿಮಾಗೆ ಬಂದ್ರಂತೆ ನಟ!

ರಾಮಾಯಣದ ಬಗ್ಗೆ ಮೊದಲ ಭಾರಿಗೆ ಬಾಯ್ಬಿಟ್ಟ ಯಶ್! ಭಾರತೀಯ ಸಂಸ್ಕೃತಿ ಜಗತ್ತಿಗೆ ತಿಳಿಸಲು ಈ ಸಿನಿಮಾಗೆ ಬಂದ್ರಂತೆ ನಟ!

Published : Apr 26, 2024, 09:57 AM IST

ಭಾರತೀಯ ಚಿತ್ರ ಜಗತ್ತನ್ನ ಒಂದು ರೌಂಡ್ ಹಾಕಿದ್ರೆ ಈಗ ಮೊದಲ ಮಾತು ಶುರುವಾಗೋದು ನಿತೀಶ್ ತಿವಾರಿ ನಿರ್ದೇಶನದ ರಾಮಾಯಣ ಸಿನಿಮಾದಿಂದ. ಈ ರಾಮಾಯಣದಲ್ಲಿ ರಣ್ಬೀರ್ ಕಪೂರ್ ರಾಮ, ರಾಕಿಂಗ್ ಸ್ಟಾರ್ ಯಶ್ ರಾವಣ ಅಂದಾಗ್ಲೇ ದೊಡ್ಡ ಹೈಪ್ ಸೃಷ್ಟಿಯಾಗಿತ್ತು. ಇದಕ್ಕೆ ತುಪ್ಪ ಸುರಿದಂತೆ ರಾಮಾಯಣ ಸಿನಿಮಾ ನಿರ್ಮಾಣದಲ್ಲಿ ಯಶ್ ಪಾಲುದಾರ ಅನ್ನೋ ಸುದ್ದಿ ಹೊರ ಬರುತ್ತಿದ್ದಂತೆ ಯಶ್ ಅಭಿಮಾನಿಗಳು ಬೆರಗು ಕಣ್ಣಿನಿಂದ ನೋಡೋ ಹಾಗಾಯ್ತು.

ಬಾಲಿವುಡ್‌ನಲ್ಲಿ ತಯಾರಾಗುತ್ತಿರುವ ರಾಮಾಯಣ ಸಿನಿಮಾದಲ್ಲಿ(Ramayana Movie) ಯಶ್ ಪಾರ್ಟ್ ಆಗಿದ್ದಕ್ಕೆ ಕಾರಣ ಬಿಚ್ಚಿಟ್ಟಿದ್ದಾರೆ ರಾಕಿಂಗ್ ಸ್ಟಾರ್. ಅಂತಾರಾಷ್ಟ್ರೀಯ ಪತ್ರಿಕೆಯೊಂದರ ಜೊತೆ ಮಾತನಾಡಿರೋ ಯಶ್(Yash), ಭಾರತೀಯ ಸಿನಿಮಾವನ್ನು ಜಾಗತಿಕ ಮಟ್ಟದಲ್ಲಿ ಪ್ರರ್ದಶಿಸುವುದು ನನ್ನ ಬಹುದಿನಗಳ ಕನಸು. ಅದರ ಹುಡುಗಾಟದಲ್ಲಿ ನಾನು ಅತ್ಯುತ್ತಮ VFC ಸ್ಟುಡಿಯೋ ಕಂಡುಕೊಂಡಿದ್ದೇನೆ. ಅದರ ಹಿಂದಿನ ಪ್ರೇರಕ ಶಕ್ತಿ ಭಾರತೀಯ ನಮಿತ್. ಭಾರತೀಯ ಸಿನಿಮಾದ ದೃಷ್ಟಿಯಲ್ಲಿ ನನ್ನ ಮತ್ತು ನಮಿತ್ ಆಲೋಚನೆಗಳು ಹೊಂದುತ್ತವೆ. ನಾವು ವಿವಿಧ ಯೋಜನೆಗಳ ಬಗ್ಗೆ ಚರ್ಚೆ ಮಾಡಿದೆವು. ಆಗ ರಾಮಾಯಣದ ವಿಷಯವೂ ಬಂದಿತು. ನನ್ನ ಮನಸ್ಸಿನಲ್ಲಿ ಅದರ ಬಗ್ಗೆ ಒಂದು ಆಲೋಚನೆ ಇತ್ತು. ಹೀಗಾಗಿ ನಾನು ಸಹ ನಿರ್ಮಾಪಕನಾದೆ ಎಂದಿದ್ದಾರೆ ಯಶ್. ರಾಮಾಯಣ ನಿರ್ಮಾಪಕರಲ್ಲಿ ಯಶ್ ಕೂಡ ಒಬ್ರು. ನಮಿತ್ ಮಲ್ಹೋತ್ರಾ ಅವರು ‘ರಾಮಾಯಣ’ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಇವರ ಜೊತೆ ನಿರ್ಮಾಣದಲ್ಲಿ ಯಶ್ ಕೂಡ ಕೈ ಜೋಡಿಸಿದ್ದಾರೆ. ಈ ಸಿನಿಮಾದಲ್ಲಿ ಯಶ್ ರಾವಣನ ರೋಲ್ ಕೂಡ ಮಾಡುತ್ತಿದ್ದಾರೆ. ಆದ್ರೆ ಅದರ ಬಗ್ಗೆ ತುಟಿ ಬಿಚ್ಚದ ರಾಕಿ ರಾಮಾಯಣ ನಿರ್ಮಾಣ ಮಾಡುತ್ತಿರೋದಕ್ಕೆ ಕಾರಣ ಮಾತ್ರ ತಿಳಿಸಿದ್ದಾರೆ. ಈ ರಾಮಾಯಣ ಮೂರು ಪಾರ್ಟ್ನಲ್ಲಿ ಪ್ಯಾನ್ ವರ್ಲ್ಡ್ ಸಿನಿಮಾ ಆಗಿ ಸಿದ್ಧವಾಗುತ್ತಿದೆ. ಸಿನಿಮಾದ ಶೂಟಿಂಗ್ ಕೂಡ ಈಗಾಗ್ಲೆ ಆರಂಭ ಆಗಿದೆ. 

ಇದನ್ನೂ ವೀಕ್ಷಿಸಿ:  ನಮ್ಮ ಒಂದೊಂದು ವೋಟು ಒಂದೊಂದು ಇಟ್ಟಿಗೆ ಇದ್ದಂತೆ! ಸುವರ್ಣನ್ಯೂಸ್ ಜತೆ ನಟ ರಮೇಶ್ ಅರವಿಂದ್ ಮಾತು!

02:16ಬೇರೆಯದೇ ಸಂದೇಶ ಕೊಡುತ್ತಿರೋ 'ದಿ ಡೆವಿಲ್’ ಟ್ರೈಲರ್; ದರ್ಶನ್ ಫ್ಯಾನ್ಸ್‌ ಮುಖದಲ್ಲಿ ಮೂಡ್ತಿದೆ ಮಂದಹಾಸ!
04:08ಸದ್ಗುರು 'ಲಿಂಗ ಭೈರವಿ' ದೇವಿ ಸನ್ನಿಧಿಯಲ್ಲಿಯೇ ಯಾಕೆ ಸಮಂತಾ ಮದುವೆ ಆಗಿದ್ದು? ಇಲ್ಲಿದೆ ಸೀಕ್ರೆಟ್.. !
05:43ರಾಜಮೌಳಿಗೆ ಕಿಚ್ಚನ ಮೇಲೆ ಕಣ್ಣು: ಸುದೀಪ್​​ಗೆ ಜಕ್ಕಣ ಮತ್ತೆ ಗಾಳ, ಏನಿದು ಹೊಸ ಮೆಗಾ ಪ್ಲ್ಯಾನ್?
04:29ಅಂದರ್ ಆಗಿರೋ ದರ್ಶನ್ ಮೂಲಕ ಖೈದಿಗಳ ಕಳ್ಳಾಟಗಳೆಲ್ಲಾ ಬಾಹರ್! ನಟನ ಸ್ನೇಹಿತನಿಂದ ಜೈಲ್ ವಿಡಿಯೋ ವೈರಲ್?
06:03ತಮಿಳು ನಟರಿಗೆ ಭಾರೀ ಶಾಕ್! ರಜನಿಕಾಂತ್ ಸೇರಿದಂತೆ ಎಲ್ಲರಿಗೂ 100 ಕೋಟಿ ಸಂಭಾವನೆಗೆ ಬ್ರೇಕ್?
02:42ಕ್ರಿಸ್‌ಮಸ್‌ಗೆ ನಂದಕಿಶೋರ್- ಮೋಹನ್ ಲಾಲ್ ಜೋಡಿಯ ವೃಷಭ ರಿಲೀಸ್: ರಾಗಿಣಿ ಪಾತ್ರವೇನು?
05:18ದಾಸನ ಪತ್ನಿಗೆ ಬರ್ತ್​ ಡೇ... ಆ ಸಂಭ್ರಮವೇ ದರ್ಶನ್ ಬಾಳಲ್ಲಿ ಬಿರುಗಾಳಿ ಎಬ್ಬಿಸಿತೇ?
04:48ಮಾಜಿ ಬಾಯ್‌ಫ್ರೆಂಡ್ ಗರ್ವಿಷ್ಟ, ಟಾಕ್ಸಿಕ್ ಮ್ಯಾನ್; 'ಇದು ನಂದೇ ಕಥೆ' ಅಂದ್ರಾ -ಗರ್ಲ್‌ಫ್ರೆಂಡ್- ರಶ್ಮಿಕಾ ಮಂದಣ್ಣ?
04:07ಮಾರ್ಕ್ ಮೇನಿಯಾ ಶುರು: ಕಿಚ್ಚನ 'ಮಾರ್ಕ್' ಕ್ರಿಸ್​ಮಸ್ ಟೈಂಗೆ ಬರೋದು ಫಿಕ್ಸ್ !
02:38ಕತ್ರಿನಾ ಕೈಫ್-ವಿಕ್ಕಿ ಜೋಡಿಯ ;ಸಂತಾನ ಭಾಗ್ಯ'ಕ್ಕೆ ಕರ್ನಾಟಕದ ಶ್ರೀ ಕ್ಷೇತ್ರ ಕುಕ್ಕೆ ಸುಬ್ರಮಣ್ಯದ ನಂಟು!
Read more