ರಾಮಾಯಣದ ಬಗ್ಗೆ ಮೊದಲ ಭಾರಿಗೆ ಬಾಯ್ಬಿಟ್ಟ ಯಶ್! ಭಾರತೀಯ ಸಂಸ್ಕೃತಿ ಜಗತ್ತಿಗೆ ತಿಳಿಸಲು ಈ ಸಿನಿಮಾಗೆ ಬಂದ್ರಂತೆ ನಟ!

ರಾಮಾಯಣದ ಬಗ್ಗೆ ಮೊದಲ ಭಾರಿಗೆ ಬಾಯ್ಬಿಟ್ಟ ಯಶ್! ಭಾರತೀಯ ಸಂಸ್ಕೃತಿ ಜಗತ್ತಿಗೆ ತಿಳಿಸಲು ಈ ಸಿನಿಮಾಗೆ ಬಂದ್ರಂತೆ ನಟ!

Published : Apr 26, 2024, 09:57 AM IST

ಭಾರತೀಯ ಚಿತ್ರ ಜಗತ್ತನ್ನ ಒಂದು ರೌಂಡ್ ಹಾಕಿದ್ರೆ ಈಗ ಮೊದಲ ಮಾತು ಶುರುವಾಗೋದು ನಿತೀಶ್ ತಿವಾರಿ ನಿರ್ದೇಶನದ ರಾಮಾಯಣ ಸಿನಿಮಾದಿಂದ. ಈ ರಾಮಾಯಣದಲ್ಲಿ ರಣ್ಬೀರ್ ಕಪೂರ್ ರಾಮ, ರಾಕಿಂಗ್ ಸ್ಟಾರ್ ಯಶ್ ರಾವಣ ಅಂದಾಗ್ಲೇ ದೊಡ್ಡ ಹೈಪ್ ಸೃಷ್ಟಿಯಾಗಿತ್ತು. ಇದಕ್ಕೆ ತುಪ್ಪ ಸುರಿದಂತೆ ರಾಮಾಯಣ ಸಿನಿಮಾ ನಿರ್ಮಾಣದಲ್ಲಿ ಯಶ್ ಪಾಲುದಾರ ಅನ್ನೋ ಸುದ್ದಿ ಹೊರ ಬರುತ್ತಿದ್ದಂತೆ ಯಶ್ ಅಭಿಮಾನಿಗಳು ಬೆರಗು ಕಣ್ಣಿನಿಂದ ನೋಡೋ ಹಾಗಾಯ್ತು.

ಬಾಲಿವುಡ್‌ನಲ್ಲಿ ತಯಾರಾಗುತ್ತಿರುವ ರಾಮಾಯಣ ಸಿನಿಮಾದಲ್ಲಿ(Ramayana Movie) ಯಶ್ ಪಾರ್ಟ್ ಆಗಿದ್ದಕ್ಕೆ ಕಾರಣ ಬಿಚ್ಚಿಟ್ಟಿದ್ದಾರೆ ರಾಕಿಂಗ್ ಸ್ಟಾರ್. ಅಂತಾರಾಷ್ಟ್ರೀಯ ಪತ್ರಿಕೆಯೊಂದರ ಜೊತೆ ಮಾತನಾಡಿರೋ ಯಶ್(Yash), ಭಾರತೀಯ ಸಿನಿಮಾವನ್ನು ಜಾಗತಿಕ ಮಟ್ಟದಲ್ಲಿ ಪ್ರರ್ದಶಿಸುವುದು ನನ್ನ ಬಹುದಿನಗಳ ಕನಸು. ಅದರ ಹುಡುಗಾಟದಲ್ಲಿ ನಾನು ಅತ್ಯುತ್ತಮ VFC ಸ್ಟುಡಿಯೋ ಕಂಡುಕೊಂಡಿದ್ದೇನೆ. ಅದರ ಹಿಂದಿನ ಪ್ರೇರಕ ಶಕ್ತಿ ಭಾರತೀಯ ನಮಿತ್. ಭಾರತೀಯ ಸಿನಿಮಾದ ದೃಷ್ಟಿಯಲ್ಲಿ ನನ್ನ ಮತ್ತು ನಮಿತ್ ಆಲೋಚನೆಗಳು ಹೊಂದುತ್ತವೆ. ನಾವು ವಿವಿಧ ಯೋಜನೆಗಳ ಬಗ್ಗೆ ಚರ್ಚೆ ಮಾಡಿದೆವು. ಆಗ ರಾಮಾಯಣದ ವಿಷಯವೂ ಬಂದಿತು. ನನ್ನ ಮನಸ್ಸಿನಲ್ಲಿ ಅದರ ಬಗ್ಗೆ ಒಂದು ಆಲೋಚನೆ ಇತ್ತು. ಹೀಗಾಗಿ ನಾನು ಸಹ ನಿರ್ಮಾಪಕನಾದೆ ಎಂದಿದ್ದಾರೆ ಯಶ್. ರಾಮಾಯಣ ನಿರ್ಮಾಪಕರಲ್ಲಿ ಯಶ್ ಕೂಡ ಒಬ್ರು. ನಮಿತ್ ಮಲ್ಹೋತ್ರಾ ಅವರು ‘ರಾಮಾಯಣ’ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಇವರ ಜೊತೆ ನಿರ್ಮಾಣದಲ್ಲಿ ಯಶ್ ಕೂಡ ಕೈ ಜೋಡಿಸಿದ್ದಾರೆ. ಈ ಸಿನಿಮಾದಲ್ಲಿ ಯಶ್ ರಾವಣನ ರೋಲ್ ಕೂಡ ಮಾಡುತ್ತಿದ್ದಾರೆ. ಆದ್ರೆ ಅದರ ಬಗ್ಗೆ ತುಟಿ ಬಿಚ್ಚದ ರಾಕಿ ರಾಮಾಯಣ ನಿರ್ಮಾಣ ಮಾಡುತ್ತಿರೋದಕ್ಕೆ ಕಾರಣ ಮಾತ್ರ ತಿಳಿಸಿದ್ದಾರೆ. ಈ ರಾಮಾಯಣ ಮೂರು ಪಾರ್ಟ್ನಲ್ಲಿ ಪ್ಯಾನ್ ವರ್ಲ್ಡ್ ಸಿನಿಮಾ ಆಗಿ ಸಿದ್ಧವಾಗುತ್ತಿದೆ. ಸಿನಿಮಾದ ಶೂಟಿಂಗ್ ಕೂಡ ಈಗಾಗ್ಲೆ ಆರಂಭ ಆಗಿದೆ. 

ಇದನ್ನೂ ವೀಕ್ಷಿಸಿ:  ನಮ್ಮ ಒಂದೊಂದು ವೋಟು ಒಂದೊಂದು ಇಟ್ಟಿಗೆ ಇದ್ದಂತೆ! ಸುವರ್ಣನ್ಯೂಸ್ ಜತೆ ನಟ ರಮೇಶ್ ಅರವಿಂದ್ ಮಾತು!

05:21ಕಿರಿಕ್ ಪಾರ್ಟಿ ಮರೆತಳಾ ರಶ್ಮಿಕಾ? ರಿಷಬ್–ರಕ್ಷಿತ್ ಹೆಸರಿಲ್ಲದ ಪೋಸ್ಟ್‌ಗೆ ಕನ್ನಡ ಫ್ಯಾನ್ಸ್ ಗರಂ
04:15ದೈವಗಳ ಟೈಮ್ ಮುಗಿತು.. ದೆವ್ವಗಳ ಸಮಯ ಶುರು.! ದೆವ್ವಗಳ ಆರ್ಭಟ.. ಬಾಹುಬಲಿ ಪ್ರಭಾಸ್​ ಧಗಧಗ..!
06:55ಕಾಟೇರನಂತೆಯೇ ಆಯ್ತು ದರ್ಶನ್ ಬದುಕು! ಕಂಬಿ ಹಿಂದೆ ಇನ್ನೆಷ್ಟು ಕಾಲ ಇರಬೇಕು ದಾಸ?
03:13Video: ರಕ್ಕಸಪುರದಲ್ಲಿ Raj B Shetty; ಮೊದಲ ಬಾರಿಗೆ ಖಾಕಿ ತೊಟ್ಟ ನಟ!
03:18ರಣಚಂಡಿ ರಶ್ಮಿಕಾ ಮಂದಣ್ಣ: ರಗಡ್‌ ಲುಕ್‌ನಲ್ಲಿ ಎಂಟ್ರಿಕೊಟ್ಟ ನ್ಯಾಷನಲ್‌ ಕ್ರಶ್‌!
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
04:19ಸಕ್ಕರೆಗೆ ಇರುವೆ ಮುತ್ತಿದಂತೆ ಸ್ಯಾಮ್​ಗೆ ಮುಗಿಬಿದ್ದ ಜನ: ಅಭಿಮಾನಿಗಳ ವರ್ತನೆಗೆ ಸಮಂತಾ ಹೈರಾಣು!
03:0445, ಮಾರ್ಕ್ ಜೊತೆ ಮತ್ತೊಂದು ಪ್ಯಾನ್ ಇಂಡಿಯಾ ಚಿತ್ರ: ಡಿ.25ಕ್ಕೆ ಮೋಹನ್ ಲಾಲ್ 'ವೃಷಭ' ತೆರೆಗೆ
05:19ಕಾಲಿವುಡ್ ಬ್ಯೂಟಿ ನಿವೇತಾ ಥಾಮಸ್‌ರ ಆ ಫೋಟೋ ವೈರಲ್: 'ನಾನವಳಲ್ಲ' ಎಂದ ಚತುರ್ಭಾಷಾ ನಟಿ
02:50ಅವತಾರ್​ 3 ವರ್ಲ್ಡ್​​ವೈಡ್ ಮೆಗಾ ಓಪನಿಂಗ್: ಬೆಂಗಳೂರಿನಲ್ಲಿಂದು ಬಿಗ್ಗೆಸ್ಟ್ ಮ್ಯೂಸಿಕಲ್ ನೈಟ್
Read more