Coronavirus Karnataka
Apr 6, 2020, 3:22 PM IST
ಬೆಂಗಳೂರು(ಏ.06): ನಗರದಲ್ಲಿ ಮಹಾಮಾರಿ ಕೊರೋನಾ ವೈರಸ್ ಆತಂಕ ಹೆಚ್ಚಾಗುತ್ತಿದೆ. ನಗರದಲ್ಲಿ ಇದುವರೆಗೆ 57 ಮಂದಿಗೆ ಕೋವಿಡ್-19 ಪಾಸಿಟಿವ್ ಬಂದಿದೆ. ಹೀಗಾಗಿ ಬೆಂಗಳೂರಿನ ಜನರು ಭಯ ಪಡುವಂತ ವಾತಾವರಣ ನಿರ್ಮಾಣವಾಗಿದೆ.
ಕೊರೋನಾಗೆ ಮತ್ತೊಂದು ಹಾಟ್ಸ್ಪಾಟ್ ದಕ್ಷಿಣ ಕನ್ನಡ: ಜಿಲ್ಲಾದ್ಯಂತ ಕಟ್ಟೆಚ್ಚರ
ನಗರದಲ್ಲಿ ಡೆಡ್ಲಿ ವೈರಸ್ ಸೋಂಕು ಹರಡದಿರಲು ಜಿಲ್ಲಾಡಳಿತ ಕಟಗ್ಟುನಿಟ್ಟಿನ ನಿಗಾ ವಹಿಸಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಬೆಂಗಳೂರು ನಗರದಾದ್ಯಂತ ಜಿಲ್ಲಾಡಳಿತ, ಆರೋಗ್ಯ ಇಲಾಖೆ, ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ. ಸಾರ್ವಜನಿಕರು ಬೀದಿಗೆ ಇಳಿಯದಂತೆ ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದಾರೆ.