Coronavirus Karnataka
Apr 7, 2020, 1:04 PM IST
ಬೆಂಗಳೂರು (ಏ. 07): ಕೇರಳ - ಕರ್ನಾಟಕ ಗಡಿ ಬಂದ್ ವಿಚಾರವಾಗಿ ಇಂದು ಸುಪ್ರೀಂಕೋರ್ಟ್ನಲ್ಲಿ ಅರ್ಜಿ ವಿಚಾರಣೆ ನಡೆಯಲಿದೆ. ಕೇರಳದಿಂದ ಕರ್ನಾಟಕಕ್ಕೆ ಸೋಂಕು ಹರಡುತ್ತಿರುವುದು ಹೆಚ್ಚಾಗುತ್ತಿದೆ ಎಂದು ರಾಜ್ಯ ಸರ್ಕಾರ ಕಾಸರಗೋಡು ಸಂಪರ್ಕಿಸುವ ರಸ್ತೆಯನ್ನು ಬಂದ್ ಮಾಡಿಸಿತ್ತು.
ಟ್ರಂಪ್ ಪ್ರತೀಕಾರದ ಮಾತು: 24 ಔಷಧಗಳ ರಫ್ತು ನಿಷೇಧ ಹಿಂಪಡೆದ ಭಾರತ!
ಈ ಬಗ್ಗೆ ವಿಚಾರಣೆ ನಡೆಸಿದ ಕೇರಳ ಹೈಕೋರ್ಟ್ ಅಗತ್ಯ ವಸ್ತುಗಳ ವಸ್ತುಗಳು ಹಾಗೂ ವೈದ್ಯಕೀಯ ಸೇವೆಗಾದರೂ ಅನುವು ಮಾಡಿಕೊಡಬೇಕೆಂದು ಹೇಳಿತ್ತು. ಆದರೆ ಇದಕ್ಕೆ ಒಪ್ಪದ ರಾಜ್ಯ ಸರ್ಕಾರ ಸುಪ್ರೀಂ ಮೆಟ್ಟಿಲೇರಿತ್ತು. ಇಂದು ಈ ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್ ನಡೆಸಲಿದೆ.