Coronavirus Karnataka

ಬೀದರ್‌ನ 11 ಜನರಿಗೆ COVID-19 ದೃಢ: ಸಚಿವ ಪ್ರಭು ಚವ್ಹಾಣ್

Apr 2, 2020, 2:40 PM IST

ಬೀದರ್(ಏ.02): ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದ ಧಾರ್ಮಿಕ ಸಭೆಯಲ್ಲಿ ಪಾಲ್ಗೊಂಡು ಜಿಲ್ಲೆಗೆ ಮರಳಿದ್ದ 28 ಜನರ ಪೈಕಿ 11 ಮಂದಿಗೆ ಕೊರೋನಾ ವೈರಸ್‌ ದೃಡಪಟ್ಟಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ್ ಸ್ಪಷ್ಟ ಪಡಿಸಿದ್ದಾರೆ. 

ನಿಜಾಮುದ್ದೀನ್ ಸಭೆಯಲ್ಲಿ ಭಾಗವಹಿಸಿದ್ದ ತಬ್ಲೀಗಿ ಮಂದಿಗೆ ಶೋಧ

ಸುವರ್ಣ ನ್ಯೂಸ್‌ ಜೊತೆ ಮಾತನಾಡಿದ ಅವರು, ಈ ಸಂಬಂಧ ಜಿಲ್ಲಾಧಿಕಾರಿ ಮಹಾದೇವ್‌ ಅವರ ಜೊತೆ ಮಾತನಾಡಿದ್ದೇನೆ, ಜಿಲ್ಲೆಯಿಂದ ಧಾರ್ಮಿಕ ಸಭೆಯಲ್ಲಿ ಪಾಲ್ಗೊಂಡ ಎಲ್ಲ 28 ಜನರು ಹಾಗೂ ಅವರ ಸಂಪರ್ಕದಲ್ಲಿ ಯಾರ್ಯಾರು ಇದ್ದಾರೆ ಎಂಬುದನ್ನ ಪತ್ತೆ ಹಚ್ಚಿ ಅಂತ ಸೂಚನೆ ನೀಡಿದ್ದೇನೆ ಎಂದು ತಿಳಿಸಿದ್ದಾರೆ.

"