Coronavirus Karnataka

ದೇಶದಲ್ಲಿ ಲಾಕ್‌ಡೌನ್‌ ಮುಂದುವರಿಕೆ ಖಚಿತ: ಎಲ್ಲ ರಾಜ್ಯಗಳ ಸಿಎಂಗಳ ಜೊತೆ ಪ್ರಧಾನಿ ಸಭೆ

Apr 8, 2020, 4:06 PM IST

ಬೆಂಗಳೂರು(ಏ.08): ಏಪ್ರಿಲ್ 14 ರ ಬಳಿಕ ರಾಷ್ಟ್ರದಲ್ಲಿ ಲಾಕ್‌ಡೌನ್‌ ಮುಂದುವರೆಸಬೇಕಾ ಅಥವಾ ಬೇಡ್ವಾ ಎಂಬುದರ ಬಗ್ಗೆ ಚರ್ಚಿಸಲು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಎಲ್ಲ ರಾಜ್ಯಗಳ ಸಿಎಂ ಜೊತೆ ಸಭೆ ನಡೆಸಲಿದ್ದಾರೆ. ಏ. 11 ರಂದು ನಡೆಯಲಿರುವ ವಿಡಿಯೋ ಕಾನ್ಫರೆನ್ಸ್‌ ಸಭೆಯಲ್ಲಿ ಎಲ್ಲ ರಾಜ್ಯಗಳ ಸಿಎಂಗಳ ಅಭಿಪ್ರಾಯವನ್ನ ಪ್ರಧಾನಿ ಮೋದಿ ಸಂಗ್ರಹಿಸಲಿದ್ದಾರೆ. 

ಇನ್ನೆರಡು ದಿನಗಳಲ್ಲಿ ರಾಜ್ಯದಲ್ಲಿ ಮತ್ತಷ್ಟು ಕೊರೋನಾ ಕೇಸಲ್ಲಿ ಹೆಚ್ಚಳ

ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಅಭಿಪ್ರಾಯಗಳನ್ನ ಸಂಗ್ರಹಿಸಿಕೊಂಡು ಪ್ರಧಾನಿ ಮೋದಿ ಲಾಕ್‌ಡೌನ್‌ ಬಗ್ಗೆ ನಿರ್ಧಾರ ಕೈಗೊಳ್ಳಲಿದ್ದಾರೆ. ಬಹುತೇಕ ಲಾಕ್‌ಡೌನ್‌ ಮುಂದುವರೆಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.