ಕ್ವಾರಂಟೈನ್ ಮೀರಿದ್ರೆ, ಜೈಲಿಗೆ ಹೋಗ್ತೀರಾ ಹುಷಾರ್: ಡಿಜಿ & ಐಜಿಪಿ ಪ್ರವೀಣ್ ಸೂದ್ ಖಡಕ್ ವಾರ್ನಿಂಗ್

ಕ್ವಾರಂಟೈನ್ ಮೀರಿದ್ರೆ, ಜೈಲಿಗೆ ಹೋಗ್ತೀರಾ ಹುಷಾರ್: ಡಿಜಿ & ಐಜಿಪಿ ಪ್ರವೀಣ್ ಸೂದ್ ಖಡಕ್ ವಾರ್ನಿಂಗ್

Suvarna News   | Asianet News
Published : Mar 29, 2020, 08:22 PM IST

ಕಳೆದ 5 ದಿನಗಳ ಹಿಂದೆ ದೇಶದ ಪ್ರಧಾನಿ ನರೇಂದ್ರ ಮೋದಿ 21 ದಿನಗಳ ಕಾಲ ಮನೆಯಲ್ಲೇ ಇರಿ ಎಂದು ಮನವಿ ಮಾಡಿಕೊಂಡಿದ್ದಾರೆ. ಜನರ ಹಿತದೃಷ್ಟಿಯಿಂದ ಪ್ರಧಾನಿ ಮನವಿ ಮಾಡಿಕೊಂಡಿದ್ದಾರೆ. ಎಲ್ಲ ಸಮುದಾಯದ ಜನರು ಬೆಂಬಲ ನೀಡುತ್ತಿದ್ದಾರೆ, ದೇಶದ ಜನರಿಗೆ ಧನ್ಯವಾದ ಅರ್ಪಿಸುತ್ತೇನೆ ಎಂದು ಪ್ರವೀಣ್ ಸೂದ್ ತಿಳಿಸಿದ್ದಾರೆ.

ಬೆಂಗಳೂರು(ಮಾ.29): ಕ್ವಾರಂಟೈನ್ ಮೀರಿದ್ರೆ, ಜೈಲಿಗೆ ಹೋಗ್ತೀರಾ ಹುಷಾರ್, ಆಟ ಆಡ್ಬೇಡಿ ಎಂದು ರಾಜ್ಯ ಡಿಜಿ ಮತ್ತು ಐಜಿಪಿ ಪ್ರವೀಣ್ ಸೂದ್ ಎಚ್ಚರಿಕೆ ರವಾನಿಸಿದ್ದಾರೆ. ಸುವರ್ಣ ನ್ಯೂಸ್‌ ಜತೆ ಎಕ್ಸ್‌ಕ್ಲೂಸಿವ್ ಆಗಿ ಮಾತನಾಡಿದ ಅವರು ಮನೆಯಲ್ಲಿದ್ದರೆ ಮಾತ್ರ ಸೇಫ್ ಎಂದು ಬೇಕಾಬಿಟ್ಟಿ ತಿರುಗುವವರಿಗೆ ಎಚ್ಚರಿಕೆ ರವಾನಿಸಿದ್ದಾರೆ.

ಕೊರೋನಾ ವೈರಸ್ ತಡೆಗಟ್ಟುವ ಮುನ್ನೆಚ್ಚರಿಕಾ ಕ್ರಮವಾಗಿ ಕಳೆದ 5 ದಿನಗಳ ಹಿಂದೆ ದೇಶದ ಪ್ರಧಾನಿ ನರೇಂದ್ರ ಮೋದಿ 21 ದಿನಗಳ ಕಾಲ ಮನೆಯಲ್ಲೇ ಇರಿ ಎಂದು ಮನವಿ ಮಾಡಿಕೊಂಡಿದ್ದಾರೆ. ಜನರ ಹಿತದೃಷ್ಟಿಯಿಂದ ಪ್ರಧಾನಿ ಮನವಿ ಮಾಡಿಕೊಂಡಿದ್ದಾರೆ. ಎಲ್ಲ ಸಮುದಾಯದ ಜನರು ಬೆಂಬಲ ನೀಡುತ್ತಿದ್ದಾರೆ, ದೇಶದ ಜನರಿಗೆ ಧನ್ಯವಾದ ಅರ್ಪಿಸುತ್ತೇನೆ ಎಂದು ಪ್ರವೀಣ್ ಸೂದ್ ತಿಳಿಸಿದ್ದಾರೆ.

ಇಷ್ಟು ದಿನ ಸ್ವಲ್ಪ ಜನ ಹೊಂದಿಕೊಳ್ಳಲಿ ಎಂದು ಫ್ರೀ ಬಿಟ್ಟಿದ್ದೆವು. ಇನ್ನು ಮುಂದೆ ಪೊಲೀಸರು ಕಠಿಣ ಕ್ರಮ ಕೈಗೊಳ್ಳಲಿದ್ದಾರೆ. ಲಾಕ್‌ಡೌನ್ ಉಲ್ಲಂಘಿಸಿದರೆ ಕ್ರಿಮಿನಲ್ ಕೇಸ್ ದಾಖಲಿಸುತ್ತೇವೆ. ವಾಹನಗಳಲ್ಲಿ ಓಡಾಡಿದರೆ, ವೆಹಿಕಲ್ ಸೀಜ್ ಮಾಡುತ್ತೇವೆ ಎಂದು ಪ್ರವೀಣ್ ಸೂದ್ ಖಡಕ್ ಎಚ್ಚರಿಕೆ ರವಾನಿಸಿದ್ದಾರೆ. 

ರಾಜ್ಯದ ಡಿಜಿ&ಐಜಿಪಿ ಏನಂದ್ರು, ಇಲ್ಲಿದೆ ನೋಡಿ ಕಂಪ್ಲೀಟ್ ಡೀಟೈಲ್ಸ್... 

19:14ಮತ್ತೆ ಭಯ ಬೀಳಿಸುತ್ತಿದ್ದಾನೆ ಕೊರೊನಾ ರಾಕ್ಷಸ: ಅನಿರೀಕ್ಷಿತ ಸಾವುಗಳ ಹಿಂದಿದೆ ಕೋವಿಡ್ ಕೈವಾಡ?
09:02ಜನವರಿ, ಫೆಬ್ರವರಿ ತಿಂಗಳಲ್ಲಿ ಕೊರೊನಾ ಹೆಚ್ಚಾಗಲಿದೆ: ಡಾ. ಸಿ ಎನ್ ಮಂಜುನಾಥ್
01:46ಕೊರೋನಾ ಹೆಚ್ಚಳ: ಸಂಸತ್ತಿನಲ್ಲಿ ಮಾಸ್ಕ್‌ ಧರಿಸಿ ಜಾಗೃತಿ ಸಂದೇಶ ಕೊಟ್ಟ ಪ್ರಧಾನಿ ಮೋದಿ!
03:19ಕರ್ನಾಟಕದಲ್ಲಿ ಕೊರೋನಾ 4ನೇ ಅಲೆ ರೂಲ್ಸ್, ಮತ್ತೆ ಮಾಸ್ಕ್, ಸಾಮಾಜಿಕ ಅಂತರ ಕಡ್ಡಾಯ
02:42Night Curfew ಸಮಯ ಬದಲಾವಣೆ ಮಾಡಿ: ಉದ್ಯಮಿಗಳಿಂದ ಸರ್ಕಾರಕ್ಕೆ ಮನವಿ ಸಲ್ಲಿಸಲು ನಿರ್ಧಾರ
03:11Covid 3rd Wave: ಬೇರೆ ರಾಜ್ಯಗಳಿಗಿಂತ ಕರ್ನಾಟಕದಲ್ಲಿ ಕೊರೋನಾ ಕೇಸ್ ಹೆಚ್ಚಳ
05:02Covid-19 Crisis: ಬಳ್ಳಾರಿ ಜಿಲ್ಲೆಯಲ್ಲಿ ಕೊರೋನಾ ಆರ್ಭಟ: ಶೇ.20 ಪಾಸಿಟಿವಿಟಿ!
07:20Covid-19 Crisis: 3ನೇ ಅಲೆಯಲ್ಲೇ ಗರಿಷ್ಠ: ಮೂವರಲ್ಲಿ ಒಬ್ಬರಿಗೆ ಕೊರೋನಾ
40:09News Hour ಹೋಟೆಲ್ ಮಾಲೀಕರ ಮತ್ತೊಂದು ಬೇಡಿಕೆ, ಕೊರೋನಾ, ಪಂಚರಾಜ್ಯ ಚುನಾವಣೆ
03:23Corona Song: 'ಕಾಣದ ಕಡಲಿಗೆ' ಹಾಡಿನ ದಾಟಿಗೆ ನ್ಯಾಯಾಧೀಶರಿಂದ ಕೊರೋನಾ ಹಾಡು