ಮುಂದುವರಿದ ಏಷ್ಯಾ ಕಪ್‌ ಟ್ರೋಫಿ ಹಸ್ತಾಂತರ ರಗಳೆ! ಕ್ಷಮೆ ಕೇಳಿದ ನಖ್ವಿ ಹೊಸ ಕ್ಯಾತೆ

ಮುಂದುವರಿದ ಏಷ್ಯಾ ಕಪ್‌ ಟ್ರೋಫಿ ಹಸ್ತಾಂತರ ರಗಳೆ! ಕ್ಷಮೆ ಕೇಳಿದ ನಖ್ವಿ ಹೊಸ ಕ್ಯಾತೆ

Published : Oct 01, 2025, 06:48 PM IST
ಏಷ್ಯಾಕಪ್ ಫೈನಲ್‌ನಲ್ಲಿ ಪಾಕಿಸ್ತಾನವನ್ನು ಸೋಲಿಸಿ ಭಾರತ ಚಾಂಪಿಯನ್ ಆಯಿತು. ಆದರೆ, ಪಾಕಿಸ್ತಾನದ ಗೃಹ ಸಚಿವ ಮೊಹ್ಸಿನ್ ನಖ್ವಿ ಅವರಿಂದ ಟ್ರೋಫಿ ಸ್ವೀಕರಿಸಲು ನಿರಾಕರಿಸಿದ್ದರಿಂದ ವಿವಾದ ಸೃಷ್ಟಿಯಾಗಿದೆ. ಇದೀಗ ಟ್ರೋಫಿ ಸ್ವೀಕರಿಸಲು ನಖ್ವಿ ಹೊಸ ಷರತ್ತು ವಿಧಿಸಿದ್ದಾರೆ.

ಏಷ್ಯಾಕಪ್ ಟೂರ್ನಿ ಮುಗಿದು ಮೂರು ದಿನ ಕಳೆದಿದೆ. ಹೀಗಿದ್ದೂ ಚಾಂಪಿಯನ್ ಭಾರತಕ್ಕೆ ಇನ್ನೂ ಟ್ರೋಫಿ ಸಿಕ್ಕಿಲ್ಲ. ಏಷ್ಯಾಕಪ್ ಫೈನಲ್‌ನಲ್ಲಿ ಬದ್ದ ಎದುರಾಳಿ ಪಾಕಿಸ್ತಾವನ್ನು ಮಣಿಸಿದ ಟೀಂ ಇಂಡಿಯಾ ಒಂಬತ್ತನೇ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿತು. ಆದ್ರೆ ಪಾಕಿಸ್ತಾನದ ಗೃಹ ಸಚಿವ ಹಾಗೆ ಏಷ್ಯನ್ ಕ್ರಿಕೆಟ್ ಕೌನ್ಸಿಲ್‌ ಅಧ್ಯಕ್ಷ ಮೊಹ್ಸಿನ್ ನಖ್ವಿ ಅವರಿಂದ ಟ್ರೋಫಿ ಸ್ವೀಕರಿಸಲು ಟೀಂ ಇಂಡಿಯಾ ನಿರಾಕರಿಸಿದ್ದು ನಿಮಗೆಲ್ಲಾ ಗೊತ್ತೇ ಇದೆ.

ಟ್ರೋಪಿ ನಾನೇ ನೀಡಬೇಕು ಎಂದು ಹಠಕ್ಕೆ ಬಿದ್ದಂತೆ ವರ್ತಿಸಿದ ಮೊಹ್ಸಿನ್ ನಖ್ವಿಗೆ ಕೊನೆಗೂ ದುಬೈ ಸ್ಟೇಡಿಯಂನಲ್ಲಿ ಮುಖಭಂಗವಾಯಿತು. ಇದಾದ ಮೇಲೆ ಟ್ರೋಫಿ ಹಾಗೂ ಮೆಡಲ್ ಸಮೇತ ನಖ್ವಿ ಮೈದಾನ ತೊರೆದು ಹೊಟೆಲ್‌ಗೆ ಹೋಗಿದ್ದರು. ಇದಾದ ಮೇಲೆ ಭಾರತ ಟ್ರೋಪಿ ಇಲ್ಲದೇ ಸಂಭ್ರಮಾಚರಣೆ ಮಾಡಿತ್ತು. ಇನ್ನು ನಖ್ವಿಯ ಹಠಮಾರಿ ನಡೆಯನ್ನು ಟೀಂ ಇಂಡಿಯಾ ಆಟಗಾರರು ಹಾಗೂ ಬಿಸಿಸಿಐ ಖಂಡಿಸಿತ್ತು.

ಇದೆಲ್ಲದರ ಹೊರತಾಗಿಯೂ ತಮ್ಮ ಮೊಂಡು ವಾದ ಮುಂದುವರೆಸಿರುವ ನಖ್ವಿ, ದುಬೈನಲ್ಲಿರುವ ಏಷ್ಯನ್ ಕ್ರಿಕೆಟ್‌ ಕೌನ್ಸಿಲ್‌ಗೆ ಸೂರ್ಯಕುಮಾರ್ ಯಾದವ್ ಬಂದು 2025ರ ಏಷ್ಯಾಕಪ್ ಟ್ರೋಫಿ ಹಾಗೂ ಮೆಡಲ್‌ಗಳನ್ನು ಸ್ವೀಕರಿಸಲಿ ಎಂದು ಹೇಳಿದ್ದಾರೆ.

03:21ಐಪಿಎಲ್ ಕಪ್‌ ಗೆಲ್ಲಲೇ ಬೇಕು! ಆರ್‌ಸಿಬಿ ಜೆನ್‌ಝಿ, ಜೆನ್‌ ಆಲ್ಫಾಗೆ ಭಾರೀ ನಿರೀಕ್ಷೆ!
03:09ಆರ್‌ಸಿಬಿ ಈ ಬಾರಿಯೂ ಕಪ್‌ ಗೆಲ್ಲುತ್ತಾ? ಜೆನ್‌ಝಿ, ಜೆನ್‌ ಆಲ್ಫಾ ಫ್ಯಾನ್ಸ್ ಹೇಳೋದೇನು?
01:50ಟ್ರೋಫಿ ಕೊಡಲು ಹಟ ಹಿಡಿದ ನಖ್ವಿಗೆ ಶಾಕ್ ಕೊಡಲು ಬಿಸಿಸಿಐ ಮಾಸ್ಟರ್ ಪ್ಲಾನ್
01:58ಮುಂದುವರಿದ ಏಷ್ಯಾ ಕಪ್‌ ಟ್ರೋಫಿ ಹಸ್ತಾಂತರ ರಗಳೆ! ಕ್ಷಮೆ ಕೇಳಿದ ನಖ್ವಿ ಹೊಸ ಕ್ಯಾತೆ
02:08ಪಾಕ್‌ಗೆ ಏಷ್ಯಾಕಪ್‌ನಲ್ಲಿ ಭಾರೀ ಮುಖಭಂಗ! ಐಸಿಸಿ ವಾರ್ನಿಂಗ್‌ಗೆ ಪಾಕ್ ಕಂಗಾಲು
02:18ದುಬೈನಲ್ಲಿಂದು ಪಾಕ್ ಮೇಲೆ ಸೇಡು ತೀರಿಸಿಕೊಳ್ಳುತ್ತಾ ಟೀಂ ಇಂಡಿಯಾ?
02:04Asia Cup 2025: ಎಂಟು ತಂಡಗಳ ಪೈಕಿ ಮೂವರು ಟೀಂ ಔಟ್, ಸೂಪರ್ 4 ಹಂತಕ್ಕೇರೋರು ಯಾರು?
03:08Asia Cup 2025: ಹಲವು ಗಾಸಿಪ್‌ಗೆ ಬ್ರೇಕ್ ಹಾಕಿದ ಸೂರ್ಯಕುಮಾರ್ ಯಾದವ್!
03:12ಯುಎಇ ಎದುರಿನ ಪಂದ್ಯಕ್ಕೆ ಟೀಂ ಇಂಡಿಯಾ ವಿಕೆಟ್ ಕೀಪರ್ ಬ್ಯಾಟರ್ ಯಾರು?
Read more