ಜಿದ್ದಾಜಿದ್ದಿನ ಹೋರಾಟಕ್ಕೆ ರೆಡಿಯಾದ ಇಂಡೋ-ವಿಂಡೀಸ್

Dec 18, 2019, 1:23 PM IST

ವಿಶಾಖಪಟ್ಟಣಂ[ಡಿ.18]: ಟೀಂ ಇಂಡಿಯಾ ವೆಸ್ಟ್ ಇಂಡೀಸ್ ನಡುವಿನ ಎರಡನೇ ಏಕದಿನ ಪಂದ್ಯ ಜಿದ್ದಾಜಿದ್ದಿನ ಹೋರಾಟಕ್ಕೆ ಸಾಕ್ಷಿಯಾಗುವ ಸಾಧ್ಯತೆಯಿದೆ. ವಿಂಡೀಸ್ ಈ ಪಂದ್ಯವನ್ನು ಜಯಿಸುವ ಮೂಲಕ ಸರಣಿ ಕೈವಶ ಮಾಡಿಕೊಳ್ಳುವ ಲೆಕ್ಕಾಚಾರದಲ್ಲಿದ್ದರೆ, ವಿರಾಟ್ ಪಡೆ ಸರಣಿ ಜೀವಂತವಾಗಿರಿಸಿಕೊಳ್ಳಲು ಹೋರಾಡಲಿದೆ.

ಸರಣಿ ಉಳಿಸಿಕೊಳ್ಳುವ ಒತ್ತಡದಲ್ಲಿ ಟೀಂ ಇಂಡಿಯಾ

ಈಗಾಗಲೇ ಚೆನ್ನೈ ಪಂದ್ಯವನ್ನು ಸೋತಿರುವ ಟೀಂ ಇಂಡಿಯಾ ಗಾಯಗೊಂಡ ಹುಲಿಯಂತಾಗಿದೆ. ವಿರಾಟ್ ಕೊಹ್ಲಿ ವಿಶಾಖಪಟ್ಟಣಂನಲ್ಲಿ ಉತ್ತಮ ಟ್ರ್ಯಾಕ್ ರೆಕಾರ್ಡ್ ಹೊಂದಿದ್ದು ಮತ್ತೊಮ್ಮೆ ಅಬ್ಬರಿಸುವ ಸಾಧ್ಯತೆಯಿದೆ.

ಎರಡನೇ ಟಿ20 ಪಂದ್ಯ ಹೇಗಿರಲಿದೆ, ಗೆಲುವು ಯಾರ ಪಾಲಾಗಲಿದೆ ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ...