Feb 27, 2019, 5:24 PM IST
ಭಾರತ-ಆಸ್ಟ್ರೇಲಿಯಾ ನಡುವಿನ ಎರಡನೇ ಹಾಗೂ ಕೊನೆಯ ಟಿ20 ಪಂದ್ಯಕ್ಕೆ ಬೆಂಗಳೂರಿನ ಎಂ. ಚಿನ್ನಸ್ವಾಮಿ ಮೈದಾನ ಆತಿಥ್ಯ ವಹಿಸಿದೆ.
ಇನ್ನೇನು ಕೆಲವೇ ಗಂಟೆಗಳಲ್ಲಿ ಆರಂಭಗೊಳ್ಳಲಿರುವ ಪಂದ್ಯಕ್ಕೆ ಚಿನ್ನಸ್ವಾಮಿ ಮೈದಾನ ಮದುವಣಗಿತ್ತಿಯಂತೆ ಶೃಂಗಾರಗೊಂಡಿದೆ. ಈ ಟಿ20 ಪಂದ್ಯಕ್ಕೆ ಮೆಟ್ರೋ ಸಂಚಾರ ಅವಧಿಯನ್ನು 12 ಗಂಟೆ ವರೆಗೆ ವಿಸ್ತರಿಸಲಾಗಿದ್ದು ಇದರ ಅನುಕೂಲ ಪಡೆಯಬಹುದಾಗಿದೆ. ಇನ್ನು ಮೈದಾನಕ್ಕೆ ಬರುವ ಪ್ರೇಕ್ಷಕರು ಕೆಲವೊಂದು ವಸ್ತುಗಳನ್ನು ತರಲು ನಿಷೇಧ ಹೇರಿದೆ.