ಇನ್ನೆರಡು ವಾರ ಮನೆಯಲ್ಲಿರೋಣ, ರಾಜ್ಯದ ಜನತೆಗೆ ಜಾವಗಲ್ ಶ್ರೀನಾಥ್ ಮನವಿ

ಇನ್ನೆರಡು ವಾರ ಮನೆಯಲ್ಲಿರೋಣ, ರಾಜ್ಯದ ಜನತೆಗೆ ಜಾವಗಲ್ ಶ್ರೀನಾಥ್ ಮನವಿ

Suvarna News   | Asianet News
Published : Apr 11, 2020, 12:44 PM IST

ಈಗಾಗಲೇ ಹಲವು ಕ್ರೀಡಾ ತಾರೆಯರು, ಚಲನಚಿತ್ರ ನಟ-ನಟಿಯರು ಕೊರೋನಾ ಜಾಗೃತಿ ಮೂಡಿಸುವಲ್ಲಿ ಮುಂಚೂಣಿಯಲ್ಲಿದ್ದಾರೆ, ಜತೆಗೆ ಎಲ್ಲರೂ ಮನೆಯಲ್ಲೇ ಇರುವುದರ ಮೂಲಕ ಕೊರೋನಾದಿಂದ ಬಚಾವಾಗೋಣ ಎನ್ನುವ ಸಂದೇಶವನ್ನು ನೀಡಿದ್ದಾರೆ. ಖ್ಯಾತ ಸ್ಪಿನ್ನರ್ ಅನಿಲ್ ಕುಂಬ್ಳೆ ಸಹ ಕೊರೋನಾ ಜಾಗೃತಿ ಮೂಡಿಸಿದ್ದರು. ಇದೀಗ ಮತ್ತೋರ್ವ ಕನ್ನಡಿಗ ಜಾವಗಲ್ ಶ್ರೀನಾಥ್ ಕರ್ನಾಟಕದ ಜನತೆಗೆ ಕೈಮುಗಿದು ಮನವಿ ಮಾಡಿಕೊಂಡಿದ್ದಾರೆ.

ಬೆಂಗಳೂರು(ಏ.11): ಕೊರೋನಾ ವೈರಸ್ ಭೀತಿಯಿಂದಾಗಿ ಈಗಾಗಲೇ ದೇಶಾದ್ಯಂತ ಲಾಕ್‌ಡೌನ್ ಜಾರಿಯಲ್ಲಿದೆ. ಮದ್ದಿಲ್ಲದ ಮಹಾಮಾರಿಯಾಗಿ ಪರಿಣಮಿಸಿರುವ ಕೊರೋನಾ ವೈರಸ್ ಹರಡದಂತೆ ತಡೆಯಲು ಪ್ರಧಾನಿ ನರೇಂದ್ರ ಮೋದಿ 21 ದಿನಗಳ ಕಾಲ ಭಾರತ ಲಾಕ್‌ಡೌನ್ ಘೋಷಿಸಿದ್ದಾರೆ.

ಈಗಾಗಲೇ ಹಲವು ಕ್ರೀಡಾ ತಾರೆಯರು, ಚಲನಚಿತ್ರ ನಟ-ನಟಿಯರು ಕೊರೋನಾ ಜಾಗೃತಿ ಮೂಡಿಸುವಲ್ಲಿ ಮುಂಚೂಣಿಯಲ್ಲಿದ್ದಾರೆ, ಜತೆಗೆ ಎಲ್ಲರೂ ಮನೆಯಲ್ಲೇ ಇರುವುದರ ಮೂಲಕ ಕೊರೋನಾದಿಂದ ಬಚಾವಾಗೋಣ ಎನ್ನುವ ಸಂದೇಶವನ್ನು ನೀಡಿದ್ದಾರೆ. ಖ್ಯಾತ ಸ್ಪಿನ್ನರ್ ಅನಿಲ್ ಕುಂಬ್ಳೆ ಸಹ ಕೊರೋನಾ ಜಾಗೃತಿ ಮೂಡಿಸಿದ್ದರು.

ಇದೀಗ ಮೈಸೂರ್ ಎಕ್ಸ್‌ಪ್ರೆಸ್ ಖ್ಯಾತಿಯ ಜಾವಗಲ್ ಶ್ರೀನಾಥ್, ಎಲ್ಲರೂ ಮನೆಯಲ್ಲಿ ಇರಿ ಎಂದು ಕೈ ಮುಗಿದು ಕೇಳಿಕೊಂಡಿದ್ದಾರೆ. ಜತೆಗೆ ಕೊರೋನಾ ವಾರಿಯರ್ಸ್‌ಗಳಾದ ಪೊಲೀಸರಿಗೆ, ಪೌರ ಕಾರ್ಮಿಕರಿಗೆ, ವೈದ್ಯ ಸಿಬ್ಬಂದಿಗಳಿಗೆ ಶ್ರೀನಾಥ್ ಧನ್ಯವಾದ ಅರ್ಪಿಸಿದ್ದಾರೆ. ಜಾವಗಲ್ ಶ್ರೀನಾಥ್ ಮಾತುಗಳನ್ನು ಕೇಳಿದ ಬಳಿಕವಾದರೂ ಬೇಕಾಬಿಟ್ಟಿ ಓಡಾಡದೇ ಮನೆಯಲ್ಲಿರಿ. 

02:35ಬೆಳ್ಳಿತೆರೆ ಮೇಲೆ ಲಾರ್ಡ್ಸ್ ಅಂಗಳದ ಅಧಿಪತಿ, ‘ದಾದಾ’ಗಿರಿಯ ದಿನಗಳು! Sourav Ganguly ಬಯೋಪಿಕ್‌ ಫಸ್ಟ್ ಲುಕ್ ಔಟ್
03:05ಚಿನ್ನಸ್ವಾಮಿಯಲ್ಲಿ ಐಪಿಎಲ್‌ ಪಂದ್ಯ: ಹೇಗಿದೆ ಪಾರ್ಕಿಂಗ್ ವ್ಯವಸ್ಥೆ? ಏನೆಲ್ಲಾ ಸೌಲಭ್ಯ?
03:21ಐಪಿಎಲ್ ಕಪ್‌ ಗೆಲ್ಲಲೇ ಬೇಕು! ಆರ್‌ಸಿಬಿ ಜೆನ್‌ಝಿ, ಜೆನ್‌ ಆಲ್ಫಾಗೆ ಭಾರೀ ನಿರೀಕ್ಷೆ!
03:09ಆರ್‌ಸಿಬಿ ಈ ಬಾರಿಯೂ ಕಪ್‌ ಗೆಲ್ಲುತ್ತಾ? ಜೆನ್‌ಝಿ, ಜೆನ್‌ ಆಲ್ಫಾ ಫ್ಯಾನ್ಸ್ ಹೇಳೋದೇನು?
01:50ಟ್ರೋಫಿ ಕೊಡಲು ಹಟ ಹಿಡಿದ ನಖ್ವಿಗೆ ಶಾಕ್ ಕೊಡಲು ಬಿಸಿಸಿಐ ಮಾಸ್ಟರ್ ಪ್ಲಾನ್
01:58ಮುಂದುವರಿದ ಏಷ್ಯಾ ಕಪ್‌ ಟ್ರೋಫಿ ಹಸ್ತಾಂತರ ರಗಳೆ! ಕ್ಷಮೆ ಕೇಳಿದ ನಖ್ವಿ ಹೊಸ ಕ್ಯಾತೆ
02:08ಪಾಕ್‌ಗೆ ಏಷ್ಯಾಕಪ್‌ನಲ್ಲಿ ಭಾರೀ ಮುಖಭಂಗ! ಐಸಿಸಿ ವಾರ್ನಿಂಗ್‌ಗೆ ಪಾಕ್ ಕಂಗಾಲು
02:18ದುಬೈನಲ್ಲಿಂದು ಪಾಕ್ ಮೇಲೆ ಸೇಡು ತೀರಿಸಿಕೊಳ್ಳುತ್ತಾ ಟೀಂ ಇಂಡಿಯಾ?
02:04Asia Cup 2025: ಎಂಟು ತಂಡಗಳ ಪೈಕಿ ಮೂವರು ಟೀಂ ಔಟ್, ಸೂಪರ್ 4 ಹಂತಕ್ಕೇರೋರು ಯಾರು?
03:08Asia Cup 2025: ಹಲವು ಗಾಸಿಪ್‌ಗೆ ಬ್ರೇಕ್ ಹಾಕಿದ ಸೂರ್ಯಕುಮಾರ್ ಯಾದವ್!