ಇಂಗ್ಲೆಂಡ್ ವಿರುದ್ಧದ 2ನೇ ಟಿ20 ಪಂದ್ಯಕ್ಕೂ ಮುನ್ನ ಭಾರತ ಮಹಿಳಾ ತಂಡದ ಉಪನಾಯಕಿ ಸ್ಮೃತಿ ಮಂದನಾ ಸುದ್ದಿಗೋಷ್ಠಿ ನಡೆಸಿದ್ದಾರೆ. ಸ್ಮೃತಿ ಮಂದನಾ ಹೇಳಿದ್ದೇನು?
ಇಂಗ್ಲೆಂಡ್ ಪ್ರವಾಸದಲ್ಲಿ ಮೊದಲ ಪಂದ್ಯದಲ್ಲಿ ಮುಗ್ಗರಿಸಿದ ಭಾರತ ಮಹಿಳಾ ತಂಡ ಇದೀಗ ಎರಡನೇ ಪಂದ್ಯದತ್ತ ಚಿತ್ತ ನೆಟ್ಟಿದೆ. ಸೆ.13 ರಂದು ಡರ್ಬಿಯಲ್ಲಿ ಎರಡನೇ ಪಂದ್ಯ ನಡೆಯಲಿದೆ. ಇದಕ್ಕೂ ಮುನ್ನ ಮಹಿಳಾ ತಂಡದ ಉಪನಾಯಕಿ ಸುದ್ದಿಗೋಷ್ಠಿ ನಡೆಸಿದರು. ಈ ವೇಳೆ ಮೊದಲ ಪಂದ್ಯದಲ್ಲಿನ ಕೆಲ ತಪ್ಪುಗಳನ್ನು ಮರುಕಳಿಸುವುದಿಲ್ಲ. ದ್ವಿತೀಯ ಪಂದ್ಯದಲ್ಲಿ ಭಾರತ ಕಮ್ಬ್ಯಾಕ್ ಮಾಡಲಿದೆ ಎಂದು ಸ್ಮತಿ ಮಂದನಾ ಹೇಳಿದ್ದಾರೆ. ಮುಂಬರುವ ಸರಣಿಗೆ ತಯಾರಿ ಮಾಡಿಕೊಳ್ಳುತ್ತಿರುವ ಭಾರತ ಮಹಿಳಾ ತಂಡಕ್ಕೆ ಇದು ಅತ್ಯಂತ ಮಹತ್ವದ ಸರಣಿ ಎಂದು ಮಂದನಾ ಹೇಳಿದ್ದಾರೆ.