ಪ್ರೀತ್ಸೆ ಪ್ರೀತ್ಸೆ ಎಂದು ಹಿಂದೆ ಬಿದ್ದ ಪಾಗಲ್ ಪ್ರೇಮಿ, ಯುವತಿಯ ಪ್ರಾಣ ತೆಗೆಯಲು ಮುಂದಾದ..!

ಪ್ರೀತ್ಸೆ ಪ್ರೀತ್ಸೆ ಎಂದು ಹಿಂದೆ ಬಿದ್ದ ಪಾಗಲ್ ಪ್ರೇಮಿ, ಯುವತಿಯ ಪ್ರಾಣ ತೆಗೆಯಲು ಮುಂದಾದ..!

Published : Apr 29, 2022, 05:22 PM IST

ಪ್ರೀತಿ (Proposal) ನಿರಾಕರಿಸಿದಳು ಎಂಬ ಕಾರಣಕ್ಕೆ ಕೋಪಗೊಂಡು ಪಾಗಲ್ ಪ್ರೇಮಿಯೊಬ್ಬ 25 ವರ್ಷದ ಯುವತಿ ಮೇಲೆ ಆ್ಯಸಿಡ್‌ (Acid Attack) ಎರಚಿದ್ದಾನೆ.  ಖಾಸಗಿ ಕಂಪನಿ ಉದ್ಯೋಗಿಯಾಗಿರುವ ಬೆಂಗಳೂರಿನ (Bengluru)ಹೆಗ್ಗನಹಳ್ಳಿ ನಿವಾಸಿ ಯುವತಿ ದಾಳಿಗೊಳಗಾಗಿದ್ದು, ಶೇ.40 ರಷ್ಟು ಸುಟ್ಟ ಗಾಯಗಳಾಗಿವೆ. 

ಬೆಂಗಳೂರು (ಏ. 29): ಪ್ರೀತಿ (Proposal) ನಿರಾಕರಿಸಿದಳು ಎಂಬ ಕಾರಣಕ್ಕೆ ಕೋಪಗೊಂಡು ಪಾಗಲ್ ಪ್ರೇಮಿಯೊಬ್ಬ 25 ವರ್ಷದ ಯುವತಿ ಮೇಲೆ ಆ್ಯಸಿಡ್‌ (Acid Attack) ಎರಚಿದ್ದಾನೆ.  ಖಾಸಗಿ ಕಂಪನಿ ಉದ್ಯೋಗಿಯಾಗಿರುವ ಬೆಂಗಳೂರಿನ (Bengluru)ಹೆಗ್ಗನಹಳ್ಳಿ ನಿವಾಸಿ ಯುವತಿ ದಾಳಿಗೊಳಗಾಗಿದ್ದು, ಶೇ.40 ರಷ್ಟು ಸುಟ್ಟ ಗಾಯಗಳಾಗಿವೆ.

ಆಸ್ಪತ್ರೆಯಲ್ಲಿ ಸಂತ್ರಸ್ತೆ ಜೀವನ್ಮರಣ ಹೋರಾಟ ನಡೆಸುತ್ತಿದ್ದಾಳೆ. ಕೃತ್ಯ ಎಸಗಿ ಪರಾರಿಯಾಗಿರುವ ಅನ್ನಪೂರ್ಣೇಶ್ವರಿ ನಗರದ ಡಿ ಗ್ರೂಪ್‌ ಲೇಔಟ್‌ನ ನಿವಾಸಿ ಆರೋಪಿ ನಾಗೇಶ್‌ ಪತ್ತೆಗೆ ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಬಲೆ ಬೀಸಿದ್ದಾರೆ. 

ಹೆಗ್ಗನಹಳ್ಳಿಯ ಯುವತಿ ಎ.ಕಾಂ. ವ್ಯಾಸಂಗ ಮಾಡಿದ್ದು, ಸುಂಕದಕಟ್ಟೆಬಸ್‌ ನಿಲ್ದಾಣದಲ್ಲಿರುವ ಫೈನಾನ್ಸ್‌ ಕಂಪನಿಯಲ್ಲಿ (Finance Company) ಉದ್ಯೋಗದಲ್ಲಿದ್ದಳು. ಆನೇಕಲ್‌ ತಾಲೂಕಿನ ಸರ್ಜಾಪುರದ ನಾಗೇಶ್‌, ಕಾಮಾಕ್ಷಿಪಾಳ್ಯ ಸಮೀಪ ಸ್ವಂತ ಗಾರ್ಮೆಂಟ್ಸ್‌ ಘಟಕ ನಡೆಸುತ್ತಿದ್ದ. ಅನ್ನಪೂರ್ಣೇಶ್ವರಿ ನಗರದ ‘ಡಿ’ ಗ್ರೂಪ್‌ ಲೇಔಟ್‌ನಲ್ಲಿ ಆತ ನೆಲೆಸಿದ್ದ. ಏಳು ವರ್ಷಗಳ ಹಿಂದೆ ಸಂತ್ರಸ್ತೆಯ ದೊಡ್ಡಪ್ಪನ ಮನೆಯಲ್ಲಿ ಆರೋಪಿ ಬಾಡಿಗೆಗೆ ಇದ್ದ. ಆ ವೇಳೆ ಆತನಿಗೆ ಯುವತಿಯ ಪರಿಚಯವಾಗಿದೆ. ಅಂದಿನಿಂದಲೂ ತನ್ನನ್ನು ಪ್ರೀತಿಸುವಂತೆ ಸಂತ್ರಸ್ತೆಗೆ ಆತ ಕಾಟ ಕೊಡುತ್ತಿದ್ದ. ಈ ಪ್ರೇಮ ನಿವೇದನೆಯನ್ನು ಆಕೆ ನಿರಾಕರಿಸಿದ್ದಳು. ಹೀಗಿದ್ದರೂ ಬಿಡದೆ ಆಕೆಗೆ ಆರೋಪಿ ಕಾಡುತ್ತಿದ್. ಈ ಕಿರುಕುಳ ಸಹಿಸಲಾರದೆ ತನ್ನ ದೊಡ್ಡಪ್ಪನ ಮುಂದೆ ಸಂತ್ರಸ್ತೆ ಅಳಲು ತೋಡಿಕೊಂಡಿದ್ದಳು. ಇದರಿಂದ ಕೆರಳಿದ ಸಂತ್ರಸ್ತೆ ಕುಟುಂಬದವರು, ಆರೋಪಿಗೆ ಬೈದು ಮನೆ ಖಾಲಿ ಮಾಡಿಸಿದ್ದರು. ಇತ್ತೀಚಿಗೆ ಮತ್ತೆ ಕಾಣಿಸಿಕೊಂಡು ಕಿರುಕುಳ ಕೊಡಲು ಶುರು ಮಾಡಿದ್ದ. ನಂತರ ಏನಾಯ್ತು..? ನೋಡಿ FIR ನಲ್ಲಿ. 

 

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
Read more