ಪ್ರೀತ್ಸೆ ಪ್ರೀತ್ಸೆ ಎಂದು ಹಿಂದೆ ಬಿದ್ದ ಪಾಗಲ್ ಪ್ರೇಮಿ, ಯುವತಿಯ ಪ್ರಾಣ ತೆಗೆಯಲು ಮುಂದಾದ..!

ಪ್ರೀತ್ಸೆ ಪ್ರೀತ್ಸೆ ಎಂದು ಹಿಂದೆ ಬಿದ್ದ ಪಾಗಲ್ ಪ್ರೇಮಿ, ಯುವತಿಯ ಪ್ರಾಣ ತೆಗೆಯಲು ಮುಂದಾದ..!

Published : Apr 29, 2022, 05:22 PM IST

ಪ್ರೀತಿ (Proposal) ನಿರಾಕರಿಸಿದಳು ಎಂಬ ಕಾರಣಕ್ಕೆ ಕೋಪಗೊಂಡು ಪಾಗಲ್ ಪ್ರೇಮಿಯೊಬ್ಬ 25 ವರ್ಷದ ಯುವತಿ ಮೇಲೆ ಆ್ಯಸಿಡ್‌ (Acid Attack) ಎರಚಿದ್ದಾನೆ.  ಖಾಸಗಿ ಕಂಪನಿ ಉದ್ಯೋಗಿಯಾಗಿರುವ ಬೆಂಗಳೂರಿನ (Bengluru)ಹೆಗ್ಗನಹಳ್ಳಿ ನಿವಾಸಿ ಯುವತಿ ದಾಳಿಗೊಳಗಾಗಿದ್ದು, ಶೇ.40 ರಷ್ಟು ಸುಟ್ಟ ಗಾಯಗಳಾಗಿವೆ. 

ಬೆಂಗಳೂರು (ಏ. 29): ಪ್ರೀತಿ (Proposal) ನಿರಾಕರಿಸಿದಳು ಎಂಬ ಕಾರಣಕ್ಕೆ ಕೋಪಗೊಂಡು ಪಾಗಲ್ ಪ್ರೇಮಿಯೊಬ್ಬ 25 ವರ್ಷದ ಯುವತಿ ಮೇಲೆ ಆ್ಯಸಿಡ್‌ (Acid Attack) ಎರಚಿದ್ದಾನೆ.  ಖಾಸಗಿ ಕಂಪನಿ ಉದ್ಯೋಗಿಯಾಗಿರುವ ಬೆಂಗಳೂರಿನ (Bengluru)ಹೆಗ್ಗನಹಳ್ಳಿ ನಿವಾಸಿ ಯುವತಿ ದಾಳಿಗೊಳಗಾಗಿದ್ದು, ಶೇ.40 ರಷ್ಟು ಸುಟ್ಟ ಗಾಯಗಳಾಗಿವೆ.

ಆಸ್ಪತ್ರೆಯಲ್ಲಿ ಸಂತ್ರಸ್ತೆ ಜೀವನ್ಮರಣ ಹೋರಾಟ ನಡೆಸುತ್ತಿದ್ದಾಳೆ. ಕೃತ್ಯ ಎಸಗಿ ಪರಾರಿಯಾಗಿರುವ ಅನ್ನಪೂರ್ಣೇಶ್ವರಿ ನಗರದ ಡಿ ಗ್ರೂಪ್‌ ಲೇಔಟ್‌ನ ನಿವಾಸಿ ಆರೋಪಿ ನಾಗೇಶ್‌ ಪತ್ತೆಗೆ ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಬಲೆ ಬೀಸಿದ್ದಾರೆ. 

ಹೆಗ್ಗನಹಳ್ಳಿಯ ಯುವತಿ ಎ.ಕಾಂ. ವ್ಯಾಸಂಗ ಮಾಡಿದ್ದು, ಸುಂಕದಕಟ್ಟೆಬಸ್‌ ನಿಲ್ದಾಣದಲ್ಲಿರುವ ಫೈನಾನ್ಸ್‌ ಕಂಪನಿಯಲ್ಲಿ (Finance Company) ಉದ್ಯೋಗದಲ್ಲಿದ್ದಳು. ಆನೇಕಲ್‌ ತಾಲೂಕಿನ ಸರ್ಜಾಪುರದ ನಾಗೇಶ್‌, ಕಾಮಾಕ್ಷಿಪಾಳ್ಯ ಸಮೀಪ ಸ್ವಂತ ಗಾರ್ಮೆಂಟ್ಸ್‌ ಘಟಕ ನಡೆಸುತ್ತಿದ್ದ. ಅನ್ನಪೂರ್ಣೇಶ್ವರಿ ನಗರದ ‘ಡಿ’ ಗ್ರೂಪ್‌ ಲೇಔಟ್‌ನಲ್ಲಿ ಆತ ನೆಲೆಸಿದ್ದ. ಏಳು ವರ್ಷಗಳ ಹಿಂದೆ ಸಂತ್ರಸ್ತೆಯ ದೊಡ್ಡಪ್ಪನ ಮನೆಯಲ್ಲಿ ಆರೋಪಿ ಬಾಡಿಗೆಗೆ ಇದ್ದ. ಆ ವೇಳೆ ಆತನಿಗೆ ಯುವತಿಯ ಪರಿಚಯವಾಗಿದೆ. ಅಂದಿನಿಂದಲೂ ತನ್ನನ್ನು ಪ್ರೀತಿಸುವಂತೆ ಸಂತ್ರಸ್ತೆಗೆ ಆತ ಕಾಟ ಕೊಡುತ್ತಿದ್ದ. ಈ ಪ್ರೇಮ ನಿವೇದನೆಯನ್ನು ಆಕೆ ನಿರಾಕರಿಸಿದ್ದಳು. ಹೀಗಿದ್ದರೂ ಬಿಡದೆ ಆಕೆಗೆ ಆರೋಪಿ ಕಾಡುತ್ತಿದ್. ಈ ಕಿರುಕುಳ ಸಹಿಸಲಾರದೆ ತನ್ನ ದೊಡ್ಡಪ್ಪನ ಮುಂದೆ ಸಂತ್ರಸ್ತೆ ಅಳಲು ತೋಡಿಕೊಂಡಿದ್ದಳು. ಇದರಿಂದ ಕೆರಳಿದ ಸಂತ್ರಸ್ತೆ ಕುಟುಂಬದವರು, ಆರೋಪಿಗೆ ಬೈದು ಮನೆ ಖಾಲಿ ಮಾಡಿಸಿದ್ದರು. ಇತ್ತೀಚಿಗೆ ಮತ್ತೆ ಕಾಣಿಸಿಕೊಂಡು ಕಿರುಕುಳ ಕೊಡಲು ಶುರು ಮಾಡಿದ್ದ. ನಂತರ ಏನಾಯ್ತು..? ನೋಡಿ FIR ನಲ್ಲಿ. 

 

23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
Read more