ಸೂತಕದ ಸಂಡೆ ಮಾಡಿದ ರಸ್ತೆ ಅಪಘಾತಗಳು..! ಬೆಳ್ಳಂಬೆಳಿಗ್ಗೆ ಅಮಾಯಕರ ಬಲಿ ಪಡೆದ ಜವರಾಯ..!

ಸೂತಕದ ಸಂಡೆ ಮಾಡಿದ ರಸ್ತೆ ಅಪಘಾತಗಳು..! ಬೆಳ್ಳಂಬೆಳಿಗ್ಗೆ ಅಮಾಯಕರ ಬಲಿ ಪಡೆದ ಜವರಾಯ..!

Published : May 27, 2024, 09:56 AM IST

ಕಾರು- ಕಂಟೈನರ್ ನಡುವೆ ಡಿಕ್ಕಿ ಮುಂದೆ ಆಗಿದ್ದೇನು..? 
ಚಿಕ್ಕೋಡಿಯಲ್ಲೂ ಭಯಂಕರ ಬೈಕ್-ಲಾರಿ ಅಪಘಾತ..!
ಗಾಯಗೊಂಡ ಬೈಕ್ ಸವಾರರು ಪರಿಸ್ಥಿತಿ ಚಿಂತಾಜನಕ..!

ಲಾರಿ-ಕಾರು ಬೈಕ್ ನಡುವೆ ಅಪಘಾತ(Accident). ಕಾರು (Car) ಟ್ರಕ್ ನಡುವೆ ಅಪಘಾತ. ಬಸ್‌ಗೆ(Bus) ಡಿಕ್ಕಿ ಹೊಡೆದ ಬೈಕ್, ಬೆಳ್ಳಂಬೆಳಿಗ್ಗೆ ಒಂದಾದ ಮೇಲೆ ಒಂದು ಅಪಘಾತದ ಸುದ್ದಿ. ನಿಜಕ್ಕೂ ಎಂಥವರು ಕೂಡ ಬೆಚ್ಚಿಬೀಳುವ ಸುದ್ದಿ ಇದು. ಸಾಮಾನ್ಯವಾಗಿ ಒಂದೋ ಎರಡೋ ರಸ್ತೆ ಅಪಘಾತದ ಸುದ್ದಿ ಕೇಳಿ ಜನ ಶಾಕ್ ಆಗ್ತಾರೆ. ಆದರೆ ಈ ಸಂಡೆ ಬೆಳಗ್ಗೆಯಿಂದ ಒಂದಾದ ಮೇಲೆ ಒಂದು ರಸ್ತೆ ಅಪಘಾತದ ಸುದ್ದಿ ಬರ್ತಾನೆ ಇತ್ತು. ಅದು ಕೂಡ ಚಿಕ್ಕ ಪುಟ್ಟ ಅಪಘಾತದ ಸುದ್ದಿಗಳಲ್ಲ. ಒಂದಕ್ಕಿಂತ ಒಂದು ಭೀಕರ ಅಪಘಾತದ ಸುದ್ದಿ. ಇದನ್ನು ಕೇಳಿದವರೆಲ್ಲರೂ, ಇದು ಹ್ಯಾಪಿ ಸಂಡೇ(Sunday) ಅಲ್ಲ ಸೂತಕದ ಸಂಡೇ ಅಂತ ಹೇಳ್ಬಿಟ್ರು. ರಾಜ್ಯದ ಅನೇಕ ಕಡೆಗಳಲ್ಲಿ ರಸ್ತೆ ಅಪಘಾತಗಳು ಸಂಭವಿಸಿದೆ. ಹಾಸನದಲ್ಲಿ(Hassan) ರಸ್ತೆ ಅಪಘಾತ, ಚಿಕ್ಕೋಡಿಯಲ್ಲಿ ರಸ್ತೆ ಅಪಘಾತ. ಚಿಕ್ಕಮಗಳೂರಿನಲ್ಲಿ ರಸ್ತೆ ಅಪಘಾತ. ಹೀಗೆ ಇನ್ನೂ ಅನೇಕ ಕಡೆಗಳಲ್ಲಿ ರಸ್ತೆಗಳು ರಕ್ತ ಸಿಕ್ತ ಆಗ್ಹೋಗಿದೆ. ಅದಕ್ಕೆ ಕಾರಣ ಭೀಕರ ರೋಡ್ ಆ್ಯಕ್ಸಿಡೆಂಟ್. ಅದರಲ್ಲೂ ಹಾಸನದಲ್ಲಿ ನಡೆದಿರುವ ರಸ್ತೆ ಅಪಘಾತದ ದೃಶ್ಯ ನೋಡ್ತಿದ್ರೆ ಖುದ್ದು ಜವರಾಯನೂ ಕೂಡ ಸಣ್ಣಗೆ ನಡಗ್ಬಿಟ್ಟಿರ್ತಾನೋ ಏನೋ.ಅತ್ತ ಹಾಸನದಲ್ಲಿ ನಡೆದ ಭೀಕರ ರಸ್ತೆ ಅಪಘಾತಕ್ಕೆ ಕಪ್ಪು ರಸ್ತೆ ರಕ್ತ ಸಿಕ್ತ ಆಗ್ಹೋಗಿದ್ರೆ. ಇತ್ತ ಬೆಳಗಾವಿ ಜಿಲ್ಲೆ ಪಟ್ಟಣದ ಹೊರವಲಯದ ಮಾಹಲಿಂಗಪುರ-ನಿಪ್ಪಾಣಿ ರಾಜ್ಯ ಹೆದ್ದಾರಿಯಲ್ಲೂ ಭೀಕರ ಅಪಘಾತ ಸಂಭವಿಸಿದೆ.

ಇದನ್ನೂ ವೀಕ್ಷಿಸಿ:  ಕೇರಳದಲ್ಲಿ ಕಣಗಿಲೆ ಹೂ ಬ್ಯಾನ್..ಪೂಜೆಗೆ ಬಳಸುವಂತಿಲ್ಲ..! ಏನಿದು ವಿಷಕಾರಿ ಹೂವಿನ ಸಾವಿನ ಸೀಕ್ರೆಟ್..?

25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
Read more