Apr 30, 2022, 8:41 PM IST
ಬೆಂಗಳೂರು(ಏ.30): ಯುವತಿ ಮೇಲೆ ನಡೆದ ಆ್ಯಸಿಡ್ ದಾಳಿ ಘಟನೆ ಬೆಂಗಳೂರು ಮಾತ್ರವಲ್ಲ ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ. ಯುವತಿ ಚಿಕಿತ್ಸೆಗೆ ಇಡೀ ಕರ್ನಾಟಕವೇ ಸ್ಪಂದಿಸಿದೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಯುವತಿ ಚೇತರಿಸಿಕೊಂಡಿದ್ದಾರೆ. ಇತ್ತ ಆರೋಪಿ ನಾಗೇಶ್ ಬಂಧನಕ್ಕೆ 7 ತಂಡಗಳನ್ನು ರಚಿಸಲಾಗಿದ್ದು, ಶೀಘ್ರದಲ್ಲೇ ಬಂಧಿಸುವುದಾಗಿ ಪೊಲೀಸರು ಭರವಸೆ ನೀಡಿದ್ದಾರೆ.