ಕಾಂಟ್ರವರ್ಸಿಗಳ ಕಿಂಗ್ ದರ್ಶನ್ ಅಂಡ್ ಗ್ಯಾಂಗ್; ರೇಣುಕಾಸ್ವಾಮಿ ಕೊಲೆ ಮಾಡಿ ಖಾಕಿ ಪಡೆಗೆ ಸರೆಂಡರ್!

ಕಾಂಟ್ರವರ್ಸಿಗಳ ಕಿಂಗ್ ದರ್ಶನ್ ಅಂಡ್ ಗ್ಯಾಂಗ್; ರೇಣುಕಾಸ್ವಾಮಿ ಕೊಲೆ ಮಾಡಿ ಖಾಕಿ ಪಡೆಗೆ ಸರೆಂಡರ್!

Published : Jun 12, 2024, 02:57 PM ISTUpdated : Jun 12, 2024, 03:11 PM IST

ಆತ ಸ್ಯಾಂಡಲ್‌ವುಡ್‌ನ ಚಾಲೆಂಜಿಂಗ್​​ ಸ್ಟಾರ್​​.. ಅಭಿಮಾನಿಗಳ ಡಿ ಬಾಸ್​​​​... ಕಾಂಟ್ರವರ್ಸಿಗಳೇ ಆತನ ಮನೆ ದೇವರು.. ಪದೇ ಪದೇ ಪೊಲೀಸ್​​ ಠಾಣೆ ಮೆಟ್ಟಿಲ್ಲೇರುತ್ತಿದ್ದವನು ಇವತ್ತೂ ಕೂಡ ಪೊಲೀಸರ ಅತಿಥಿಯಾಗಿದ್ದಾನೆ..

ಬೆಂಗಳೂರು (ಜೂ.12): ಆತ ಸ್ಯಾಂಡಲ್‌ವುಡ್‌ನ ಚಾಲೆಂಜಿಂಗ್​​ ಸ್ಟಾರ್​​.. ಅಭಿಮಾನಿಗಳ ಡಿ ಬಾಸ್​​​​... ಕಾಂಟ್ರವರ್ಸಿಗಳೇ ಆತನ ಮನೆ ದೇವರು.. ಪದೇ ಪದೇ ಪೊಲೀಸ್​​ ಠಾಣೆ ಮೆಟ್ಟಿಲ್ಲೇರುತ್ತಿದ್ದವನು ಇವತ್ತೂ ಕೂಡ ಪೊಲೀಸರ ಅತಿಥಿಯಾಗಿದ್ದಾನೆ.. ಆದ್ರೆ ಈ ಬಾರಿ ಸರಿಯಾಗಿ ಲಾಕ್​ ಆಗಿದ್ದಾನೆ.. ಅಮಾಯಕ ಯುವಕನ್ನೊಬ್ಬನನ್ನ ಕೊಲೆ ಮಾಡಿದ ಆರೋಪದಡಿ ಇವತ್ತು ದರ್ಶನ್​ ಆ್ಯಂಡ್​​ ಗ್ಯಾಂಗ್​​​ ಅಂದರ್​​ ಆಗಿದ್ದಾರೆ... ಹಾಗಾದ್ರೆ ದರ್ಶನ್​ ಅರೆಸ್ಟ್​​ ಆಗಿದ್ದೇಕೆ..? ಯಾರನ್ನ ಈತ ಕೊಲೆ ಮಾಡಿದ್ದು..? ಇಡೀ ರಾಜ್ಯವನ್ನೇ ಶಾಕ್​ ಆಗುವಂತೆ ಮಾಡಿದ್ದ ಸೆಲಬ್ರಿಟಿಯೊಬ್ಬನ ಬಂಧನದ ಕಥೆಯಾಗಿದೆ. 

ಕಾನೂನು ಎಲ್ಲರಿಗೂ ಒಂದೇ ಅಂತ ಸುಮ್ಮನೇ ಹೇಳ್ತಾರಾ.. ಅದು ಡಿ ಬಾಸ್​​ ಆಗಲಿ.. ಚಾಲೆಂಜಿಂಗ್​ ಸ್ಟಾರ್​​ ಆಗಿರಲಿ.. ಇವತ್ತು ಮಾಡಿದ ತಪ್ಪಿಗೆ ಗಂಡ ಹೆಂಡತಿ ಇಬ್ಬರೂ ಪೊಲೀಸ್​​ ಠಾಣೆಯಲ್ಲಿ ಕೂತಿದ್ದಾರೆ.. ಆದ್ರೆ ಇವರು ಮಾಡಿದ ಆ ಕೊಲೆ ಇದ್ಯಲ್ಲ ನಿಜಕ್ಕೂ ಬ್ರೂಟಲ್​​... ಒಬ್ಬ ಅಮಾಯಕ ಸಿಕ್ಕಿದ ಅಂತ ಅವನಿಗೆ ಇನ್ನಿಲದಂತೆ ಹಿಂಸೆ ಕೊಟ್ಟು ಕೊಂದು ಬಿಟ್ಟಿದ್ದಾರೆ.. ಅಷ್ಟಕ್ಕೂ ಕೊಲೆಯಾದವನು ಯಾರು..? ಅವನನ್ನ ಇವರೆಲ್ಲಾ ಕೊಂದಿದ್ದೇಕೆ..?

ನಟ ದರ್ಶನ್ ಭಾವಚಿತ್ರಕ್ಕೆ ಚಪ್ಪಲಿಯಿಂದ ಹೊಡೆದ ಕೊಲೆಯಾದ ರೇಣುಕಾಸ್ವಾಮಿ ಬೆಂಬಲಿಗರು

ಆತ ಮೆಡಿಕಲ್​ ಶಾಪ್​ನಲ್ಲಿ ಕೆಲಸ ಮಾಡಿಕೊಂಡು ಜೀವನ ಮಾಡ್ತಿದ್ದವನು.. ಹೆಂಡತಿ ಮೂರು ತಿಂಗಳ ಗರ್ಭಿಣಿ.. ಪ್ರತೀ ನಿತ್ಯೆ ಕೆಸಲಕ್ಕೆ ಹೋಗಿ ಬರ್ತಿದ್ದವನು ಆವತ್ತು ಮನೆಗೆ ವಾಪಸ್​ ಆಗೋದೇ ಇಲ್ಲ.. ಮನೆಯವರು ಮಿಸ್ಸಿಂಗ್​ ಕೇಸ್​​ ದಾಖಲಿಸುತ್ತಾರೆ.. ಆದ್ರೆ ಮಿಸ್ಸಿಂಗ್​ ಆಗಿ ಮಾರನೇ ದಿನವೇ ಆತ ಕೊಲೆಯಾಗಿರೋ ಸುದ್ದಿ ಬರುತ್ತೆ.. ಇನ್ನೂ ಅದೇ ಕೊಲೆ ಕೇಸ್​ನ ತನಿಖೆ ನಡೆಸಿದ ಪೊಲೀಸರು ಇವತ್ತು ದರ್ಶನ್​ ಮತ್ತು ಆತನ ಸಹಚರರನ್ನ ಬಂಧಿಸಿದ್ದಾರೆ.. ದರ್ಶನ್​ ಪತ್ನಿ ಪವಿತ್ರಾ ಗೌಡಳಿಗೆ ಅಶ್ಲೀಲವಾಗಿ ಮೆಸೆಜ್​ ಮಾಡಿದ ಅನ್ನೋ ಕಾರಣಕ್ಕೆ ಅವನನ್ನ ಕಿಡ್​ನ್ಯಾಪ್​ ಮಾಡಿ ಶೆಡ್​ವೊಂದರಲ್ಲಿ ಇನ್ನಿಲ್ಲದಂತೆ ಹಲ್ಲೆ ಮಾಡಿ ನಂತರ ಅವನು ಅವರ ಏಟು ತಾಳಲಾರದೇ ಪ್ರಾಣ ಬಿಟ್ಟಾಗ ಅವನ ಶವವನ್ನ ಮೋರಿಯ ಬಳಿ ಎಸೆದು ಬಂದಿದ್ದರು.

ನಟ ದರ್ಶನ್ ಆಗಲಿ ಯಾರೇ ಆಗಿರಲಿ, ಎಲ್ಲರಿಗೂ ಒಂದೇ ಕಾನೂನು; ಗೃಹ ಸಚಿವ ಡಾ.ಜಿ. ಪರಮೇಶ್ವರ

ಸದ್ಯ ಎಲ್ಲಾ 13 ಆರೋಪಿಗಳ ಬಂಧನವಾಗಿದೆ... 6 ದಿನ ಪೊಲೀಸರ ಕಸ್ಟಡಿಗೂ ನೀಡಲಾಗಿದೆ.. ಈ ಆರು ದಿನಗಳ ವಿಚಾರಣೆಯಲ್ಲಿ ಈ ಡಿ ಗ್ಯಾಂಗ್​ ಪೊಲೀಸರೆದುರು ಏನೇನು ಹೇಳ್ತಾರೋ ಕಾದು ನೋಡೋಣ ಅಂತ ಹೇಳ್ತಾ ಇವತ್ತಿನ ಎಪಿಸೋಡ್​ ಮುಗಿಸುತ್ತಿದ್ದೇನೆ.

22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
24:33ಪರ ಪುರುಷನ ಸಹವಾಸಕ್ಕೆ ಪತಿ ಪರಮೇಶಿಯನ್ನೇ ಪರಲೋಕಕ್ಕೆ ಕಳಿಸಿದ ಪತ್ನಿ! ಹೆಣ ಹೊರತೆಗೆದಾಗ ಸತ್ಯವೂ ಹೊರಬಿತ್ತು!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ