ನಾನು ನಂದಿನಿ ಬೆಂಗಳೂರಿಗೆ ಬಂದೀನಿ.. ಗಂಡನ್ನ ಕೊಲೆ ಮಾಡಿ, ಜೈಲಿಗೆ ಹೋಗ್ತೀನಿ!

ನಾನು ನಂದಿನಿ ಬೆಂಗಳೂರಿಗೆ ಬಂದೀನಿ.. ಗಂಡನ್ನ ಕೊಲೆ ಮಾಡಿ, ಜೈಲಿಗೆ ಹೋಗ್ತೀನಿ!

Published : Jan 13, 2024, 02:35 PM IST

ಆಂಧ್ರದಿಂದ ಬಂದು ಬೆಂಗಳೂರಿನಲ್ಲಿ ನೆಲೆಸಿದ್ದ ನಂದಿನಿ ಗಂಡನಿಲ್ಲದ ವೇಳೆ ಪ್ರಿಯಕರನೊಂದಿಗೆ ರಾಸಲೀಲೆ ಆಡುವಾಗ ಸಿಕ್ಕಿಬಿದ್ದಿದ್ದು, ನೋಡಿದ ಗಂಡನನ್ನೇ ಕೊಲೆ ಮಾಡಿದ್ದಾಳೆ.

ಬೆಂಗಳೂರು (ಜ.12): ಆಂಧ್ರದಿಂದ ಬಂದು ಬೆಂಗಳೂರಿನಲ್ಲಿ ಗಂಡನೊಂದಿಗೆ ನೆಲೆಸಿದ್ದ ನಂದಿನಿ, ತನ್ನ ಪ್ರಿಯಕರನೊಂದಿಗೆ ರಾಸಲೀಲೆ ಆಡುವಾಗ ಸಿಕ್ಕಿಬಿದ್ದು ಪತಿಯನ್ನೇ ಕೊಲೆ ಮಾಡಿರುವ ದುರ್ಘಟನೆ ನಡೆದಿದೆ. ವೆಂಕಟರಾಮಣ (30) ಕೊಲೆಯಾದ ದುರ್ದೈವಿಯಾಗಿದ್ದಾನೆ. ಸ್ವತಃ ಈತನ ಹೆಂಡತಿ ನಂದಿನಿ ಪ್ರಿಯಕರನೊಂದಿಗೆ ಸೇರಿಕೊಂಡು ಗಂಡನ ಮೇಲೆ ಮೇಲೆ ಕಲ್ಲು ಎತ್ತು ಹಾಕಿ ಕೊಲೆ ಮಾಡಿದ್ದಾಳೆ. ನಂತರ ಹೃದಯಘಾತ ಅಂತ ಪೊಲೀಸ್‌ ಸಹಾಯವಾಣಿ 112 ಕರೆ ಮಾಡಿದ್ದಾಳೆ. 

ಗಂಡ ಮನೆಯಲ್ಲಿಲ್ಲ ನೀನು ಬೇಗ ಬಾ ಮಜಾ ಮಾಡೋಣ ಎಂದು ನಂದಿನಿ ಆಕೆಯ ಪ್ರಿಕಯಕರ ನಿತೇಶನನ್ನ  ಜನವರಿ‌ 6 ರಂದು  ಮನೆಗೆ ಕರೆಸಿಕೊಂಡಿದ್ದಳು. ಈ ವೇಳೆ  ಗಂಡ ವೆಂಕಟರಾಮಣ ದಿಡೀರ್ ಮನೆಗೆ ಬಂದಿದ್ದನು. ಈ ವೇಳೆ ಇಬ್ಬರು ರೂಮ್ ನಲ್ಲಿದ್ದನ್ನ ಕಂಡು ಗಂಡ ಶಾಕ್ ಆಗಿದ್ದನು. ಈ ವೇಳೆ ಇಬ್ಬರು ಸೇರಿ ವೆಂಕಟರಾಮಣ ತಲೆ ಮೇಲೆ ಕಲ್ಲು ಎತ್ತಾಕಿ ಕೊಲೆ ಮಾಡಿದ್ದಾರೆ. ಮೃತ ದೇಹವನ್ನು ಮನೆಯ ಹೊರಗೆ ಶೌಚಾಲಯದ ಬಳಿ ಇಟ್ಟು ಅಸಹಜ ಸಾವು ಎಂದು ಸೀನ್ ಕ್ರಿಯೇಟ್ ಮಾಡಿದ್ದರು. 

ಚೂಪಾದ ಕಲ್ಲು ಇಟ್ಟು ಕಲ್ಲಿನ ಮೇಲೆ ಬಿದ್ದಿದ್ದಾನೆ ಎಂದು ಸೀನ್ ಕ್ರೀಯೆಟ್ ಮಾಡಿದ್ದರು. ಬಳಿಕ ಬೆಳಗ್ಗೆ ಗಂಡ ಸಾವನ್ನಪ್ಪಿದ್ದಾನೆ ಎಂದು ನಂದಿನಿ ಪೊಲೀಸರಿಗೆ ಕರೆ ಮಾಡಿದ್ದಳು. ಸ್ಥಳಕ್ಕೆ ಬಂದ ಪೊಲೀಸರಿಗೆ  ಆರಂಭದಲ್ಲಿ ಅಸಹಜ ಸಾವು ಎಂದು ಪ್ರಕರಣ ದಾಖಲು ಮಾಡಿಕೊಂಡಿದ್ದರು. ಮೃತದೇಹವನ್ನು ಮರಣೋತ್ತರ ಪರೀಕ್ಷೆ ಮಾಡಿದಾಗ ಕೊಲೆ ಎಂಬುದು ಪತ್ತೆಯಾಗಿದೆ. ಪೊಲೀಸರಿಗೂ ಸ್ಥಳ ಪರಿಶೀಲನೆ ವೇಳೆ ಕೊಲೆ ಎಂಬುದಾಗಿ ಅನುಮಾನ ಬಂದಿತ್ತು. ಪೊಲೀಸರ ಪತ್ನಿ ನಂದಿನಿ ಮೇಲೆ ಅನುಮಾನ ವ್ಯಕ್ತಪಡಿಸಿ ನಿಗಾ ಇಟ್ಟಿದ್ದರು.

ಹಾವೇರಿಯಲ್ಲಿ ನಡೆದಿದ್ದು ನೈತಿಕ ಪೊಲೀಸ್‌ಗಿರಿಯಲ್ಲ, ಸಾಮೂಹಿಕ ಅತ್ಯಾಚಾರ; ಇಲ್ಲಿದ್ದಾರೆ ನೋಡಿ ಗ್ಯಾಂಗ್ ರೇಪಿಸ್ಟ್‌?

ಮರಣೋತ್ತರ ವರದಿ ಬಂದ ಬಳಿಕ ಪತ್ನಿ ನಂದಿನಿಯನ್ನ ವಿಚಾರಿಸಿದಾಗ ಗಂಡನನ್ನು ಕಳೆದಕೊಂಡು ದುಃಖದಲ್ಲಿರು ನನ್ನ ಮೇಲೆಯೇ ಅನುಮಾನ ಪಡ್ತೀರಾ ಅಂತ ನಾಟಕ ಮಾಡಿದ್ದಳು. ಪೊಲೀಸರ ತಮ್ಮ ಸ್ಟೈಲ್ ನಲ್ಲಿ‌ವಿಚಾರಣೆ ನಡೆಸಿದಾಗ ಅಸಲಿ ವಿಚಾರ ಬಯಲಿಗೆ ಬಂದಿದೆ. ಪ್ರಿಯಕರ ನಿತೀಶ್ ಕುಮಾರ್ ಜೊತೆ ಸೇರಿ ಕೊಲೆ ಮಾಡಿರುವುದಾಗಿ ಹೇಳಿದ್ದಾಳೆ. ನಿತೀಶ್ ಹಾಗೂ ನಂದಿನಿ ಇಬ್ಬರು ಆಂಧ್ರಪ್ರದೇಶ ಸತ್ಯ ಸಾಯಿ ತಾಲ್ಲೂಕಿನವರು. ಬಾಲ್ಯದಿಂದ ಸ್ನೇಹಿತರಾಗಿದ್ದವರು ಬಳಿಕ ಇಬ್ಬರು ಪ್ರೀತಿಸಿದ್ದರು. ಮದುವೆ ನಂತರ ನಂದಿನಿ ಕುಟುಂಬ ಬೆಂಗಳೂರಿಗೆ ಬಂದು ನೆಲೆಸಿತ್ತು. 

ಹಾಸನ: ಪ್ರೀತಿಸುವಂತೆ ಕಿರುಕುಳ, ಯುವಕನ ಕಾಟಕ್ಕೆ ಬೇಸತ್ತು ಯುವತಿ ಆತ್ಮಹತ್ಯೆ

ಮದುವೆಯಾಗಿ ದೂರದ ಬೆಂಗಳೂರಿಗೆ ಬಂದು ವಾಸವಾಗಿದ್ದರೂ ನಂದಿಗೆ ತನ್ನ ಹಳೆಯ ಪ್ರಿಯಕರನ ಸಹವಾಸ ಬಿಡುವ ಮನಸ್ಸಾಗಿರಲಿಲ್ಲ. ಆದ್ದರಿಂದ ಗಂಡ ವೆಂಕಟರಾಮಣ ಮನೆಯಲ್ಲಿ ಇಲ್ಲದಿರುವಾಗ ಪ್ರಿಯಕರನನ್ನು ಮನೆಗೆ ಕರೆಸಿಕೊಂಡು ಮಜಾ ಮಾಡುತ್ತಿದ್ದಳು. ಆರೋಪಿ ನಿತೀಶ್‌ ಪ್ರೇಯಸಿಗಾಗಿ ಆಂಧ್ರದಿಂದ ಬೆಂಗಳೂರಿನ ಹೆಚ್ಎಸ್ಆರ್ ಲೇಔಟ್ ಮನೆಗೆ ಬಂದು ಹೋಗುತ್ತಿದ್ದನು. ಈಗ ಸಿಕ್ಕಿ ಹಾಕಿಕೊಂಡಿದ್ದರಿಂದ ಗಂಡನನ್ನೇ ಕೊಲೆ ಮಾಡಿದ್ದಾರೆ. ಸದ್ಯ ಹೆಚ್ ಎಸ್ ಆರ್ ಲೇಔಟ್ ಪೊಲೀಸರು ಇಬ್ಬರನ್ನೂ ಬಂಧಿಸಿ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
20:21ಎಪ್‌ಸ್ಟೀನ್ ಫೈಲ್ಸ್‌: ಟ್ರಂಪ್, ಬಿಲ್ ಗೇಟ್ಸ್ ರಾಸ*ಲೀಲೆ ರಹಸ್ಯ! 2000 ವಿಡಿಯೋ, ರಷ್ಯಾ ಚೆಲುವೆಯರ ವಿಡಿಯೋ ಬಟಾಬಯಲು!
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
25:56ಬೆಟ್ಟಿಂಗ್​​ ಚಟ, ಊರು ತುಂಬ ಸಾಲ! ಸ್ವಂತ ತಂಗಿಯ ಮೇಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್‌ವುಡ್ ನಟಿ! ಏನಿದು ಪ್ರಕರಣ?
21:04ಪಿಜಿಯಲ್ಲಿ ಪ್ರೇಯಸಿ ಜೊತೆ ಕುಚ್​-ಕುಚ್​​! ರೆಡ್ ​​ಹ್ಯಾಂಡಾಗಿ ಸಿಕ್ಕಿಬಿದ್ದ ಗಂಡ ಕೊಟ್ಟ ಕಾರಣವೇ ಬೇರೆ!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
Read more