ಪ್ರವೀಣ್ ಹತ್ಯೆ ಕೇಸ್‌ಗೆ ಬಿಗ್ ಟ್ವಿಸ್ಟ್, ಸ್ಫೋಟಕ ಹೇಳಿಕೆ ಕೊಟ್ಟ ಬಂಧಿತ ಆರೋಪಿ ತಂದೆ

Jul 28, 2022, 4:49 PM IST

ಮಂಗಳೂರು (ಜು. 28): ಬೆಳ್ಳಾರೆಯಲ್ಲಿ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧಿಸಿದಂತೆ ಇಬ್ಬರು ಪ್ರಮುಖ ಆರೋಪಿಗಳನ್ನು ಬೆಳ್ಳಾರೆ ‌ಪೊಲೀಸರು ಬಂಧಿಸಿದ್ದಾರೆ. ಸವಣೂರಿನ ಝಾಕೀರ್ ಮತ್ತು ಬೆಳ್ಳಾರೆಯ ಶಫೀಕ್ ಬಂಧಿತರು. 

ಹತ್ಯೆಯಾದ ಪ್ರವೀಣ್ ಕುಟುಂಬಕ್ಕೆ ವೈಯಕ್ತಿಕ 10 ಲಕ್ಷ ರೂ. ನೆರವು ಘೋಷಿಸಿದ ಅಶ್ವತ್ಥ ನಾರಾಯಣ

ಈ ಇಬ್ಬರು ಆರೋಪಿಗಳನ್ನು ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು  ದಕ್ಷಿಣ ಕನ್ನಡ ಎಸ್ಪಿ ಹೃಷಿಕೇಶ್ ಸೋನಾವಣೆ ಹೇಳಿದ್ದಾರೆ.  ಇನ್ನು ಬಂಧಿತ ಆರೋಪಿ  ಶಫೀಕ್ ತಂದೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು, ಪ್ರವೀಣ್ ನಮ್ಮ ಕುಟುಂಬ ಸ್ನೇಹಿತರು, ನಾವು ಅಣ್ಣತಮ್ಮ ಇದ್ದ ಹಾಗೆ: ಶಫೀಕ್ ತಂದೆ ಸ್ಫೋಟಕ ಹೇಳಿಕೆ ನೀಡಿದ್ದಾರೆ.