Asianet Suvarna FIR: ಡೆತ್ ನೋಟ್ ಬರೆದಿಟ್ಟು ಇಬ್ಬರು ಮಕ್ಕಳೊಂದಿಗೆ ನಾಲೆಗೆ ಹಾರಿದ ಮಹಿಳೆಯ ಹಿಂದಿನ ಕಥೆ

Asianet Suvarna FIR: ಡೆತ್ ನೋಟ್ ಬರೆದಿಟ್ಟು ಇಬ್ಬರು ಮಕ್ಕಳೊಂದಿಗೆ ನಾಲೆಗೆ ಹಾರಿದ ಮಹಿಳೆಯ ಹಿಂದಿನ ಕಥೆ

Suvarna News   | Asianet News
Published : Jan 22, 2022, 07:01 PM IST

ಅಶ್ಲೀಲ ಫೋಟೋ ಇಟ್ಟುಕೊಂಡು ಬ್ಲ್ಯಾಕ್ ಮೇಲ್
ಇಬ್ಬರು ಮಕ್ಕಳೊಂದಿಗೆ ಭದ್ರಾ ನಾಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಮಹಿಳೆ
ಶಿವಮೊಗ್ಗದ ಭದ್ರಾವತಿಯ ಯಡೇಹಳ್ಳಿಯಲ್ಲಿ ನಡೆದ ಘಟನೆ

ಶಿವಮೊಗ್ಗ (ಜ. 22): ನಂಬಿಕಸ್ತ ಎಂದು ಹತ್ತಿರ ಸೇರಿಸಿಕೊಂಡ ಪರಿಣಾಮದ ಕಥೆ ಇದು. ಕಷ್ಟ ಅಂದಾಗ ಏನನ್ನೂ ಯೋಚಿಸದೇ ಸಾಲ ಕೊಟ್ಟಿದ್ದು. ಆದರ ಆತ ಒಂದೇ ಒಂದು ಅಶ್ಲೀಲ ಫೋಟೋ ಇಟ್ಟುಕೊಂಡು ಬ್ಲ್ಯಾಕ್ ಮೇಲ್ ಮಾಡಲು ಆರಂಭಿಸಿದ್ದ. ಅವನ ಬ್ಲ್ಯಾಕ್ ಮೇಲ್ ಅಸ್ತ್ರಕ್ಕೆ ಬಲಿಯಾಗಿದ್ದು ಮೂರು ಜೀವಗಳು. ಆ ಮೂರು ಸಾವಿನ ಹಿಂದಿನ ಕಥೆ ಇಲ್ಲಿದೆ.

Crime News ಕೊಟ್ಟ ಸಾಲ ಕೇಳಿದ್ದಕ್ಕೆ ಅನೈತಿಕ ಸಂಬಂಧ ಪಟ್ಟ, ಮನನೊಂದು ತಾಯಿ-ಮಕ್ಕಳು ಆತ್ಮಹತ್ಯೆ
ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಯಡೇಹಳ್ಳಿಯಲ್ಲಿ ನಡೆದ ಅಪರಾಧ ಘಟನೆ. ವೀಣಾ ಹಾಗೂ ಸಂತೋಷ್ ದಂಪತಿಯು ಭದ್ರಾವತಿ ತಾಲೂಕಿನ ಅರಹತೋಳಲು ಗ್ರಾಮದ ಸಂತೋಷ್ ಹಾಗೂ ಆಶಾ ಎನ್ನುವವರಿಗೆ 8 ಲಕ್ಷ ರೂಪಾಯಿ ಸಾಲ ನೀಡಿದ್ದರು. ಆದರೆ, ಸಾಲ ವಾಪಸ್ ನೀಡುವಂತೆ ಹೇಳಿದಾಗ ಸಂತೋಷ್ ಹಾಗೂ ಆಶಾ, ವೀಣಾ ಆಕ್ರಮ ಸಂಬಂಧ ಹೊಂದಿದ್ದಾರೆ ಎಂದು ಆರೋಪ ಹೊರಿಸಿದ್ದರು. ಇದರಿಂದ ಬೇಸತ್ತ ವೀಣಾ ತನ್ನ 7 ವರ್ಷದ ಮಗಳಾದ ಜಾಹ್ಞವಿ ಹಾಗೂ ಒಂದು ವರ್ಷದ ಮಗಳು ದೈವಿಕಾರೊಂದಿಗೆ ಹೆಂಚಿನ ಸಿದ್ಧಾಪುರ ಗ್ರಾಮದ ಭದ್ರಾ ನಾಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಸಾಯುವ ಮುನ್ನ ವೀಣಾ ಡೆತ್ ನೋಟ್ ಬರೆದಿಟ್ಟಿದ್ದು, ನಾಲೆಯ ದಡದ ಬಳಿ ಇರುವ ದೇವಸ್ಥಾನದಲ್ಲಿ ಇಟ್ಟಿದ್ದ ಬ್ಯಾಗ್ ನಲ್ಲಿ ಅದನ್ನು ಇರಿಸಿದ್ದರು.

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
Read more