ಮಹಾರಾಷ್ಟ್ರ: ಗಾಂಜಾ ದಂಧೆಕೋರರಿಂದ ಕರ್ನಾಟಕ ಪೊಲೀಸ್‌ ಮೇಲೆ ಮಾರಣಾಂತಿಕ ಹಲ್ಲೆ

Sep 24, 2022, 6:15 PM IST

ಮಹಾರಾಷ್ಟ್ರ (ಸೆ. 2):  ಗಾಂಜಾ ದಂಧೆಕೋರರು ಪೊಲೀಸರ ಮೇಲೆ ದಾಳಿ ನಡೆಸಿದ್ದು ಸಿಪಿಐ ಶ್ರೀಮಂತ ಇಲ್ಲಾಳ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ್ದಾರೆ.  ಮಹಾರಾಷ್ಟ್ರದ ಉಮರ್ಗಾ ತಾಲ್ಲೂಕಿನ ತರೂರಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಸಿಪಿಐ ಶ್ರೀಮಂತ ಇಲ್ಲಾಳ ಸ್ಥಿತಿ ಗಂಭೀರವಾಗಿದ್ದು, ಕಲಬುರಗಿ ಖಾಸಗಿ ಆಸ್ಪತ್ರೆ ದಾಖಲು ಚಿಕಿತ್ಸೆ ನೀಡಲಾಗುತ್ತಿದೆ.  ಕಲಬುರಗಿ ಜಿಲ್ಲಾ ಗ್ರಾಮೀಣ ಠಾಣೆ ಸಿಪಿಐ ಶ್ರೀಮಂತ ಇಲ್ಲಾಳ ಅವರಿಗೆ ತಲೆ, ಮುಖ, ಹೊಟ್ಟೆ ಭಾಗದಲ್ಲಿ ಗಂಭೀರ ಗಾಯವಾಗಿದೆ. 

ಕಳೆದ ಎರಡ್ಮೂರು ದಿನಗಳ ಹಿಂದೆ ಗಾಂಜಾ ದಂಧೆಕೋರನನ್ನ ಪೊಲೀಸರು ಬಂಧಿಸಿದ್ದರು.  ಗಾಂಜಾ ದಂಧೆ ಕೇಸ್ ನಲ್ಲಿ ಕಾರ್ಯಾಚರಣೆಗೆ ಹೋಗಿದ್ದ ಸಿಪಿಐ ಇಲ್ಲಾಳ ನೇತೃತ್ವದ ಪೊಲೀಸ್ ತಂಡದ ಮೇಲೆ  ಕಟ್ಟಿಗೆಗಳಿಂದ  ಮಹಾರಾಣಾಂತಿಕ ದಾಳಿ ಮಾಡಲಾಗಿದೆ. ಸುಮಾರು 30-40 ಜನ ಗಾಂಜಾ ದಂಧೆಕೋರರು ರಾತ್ರಿ ಸುಮಾರು 9:30 ರ ವೇಳೆಗೆ ಪೊಲೀಸರ ಮೇಲೆ ಮಾರಣಾಂತಿಕ ದಾಳಿ ಮಾಡಿದ್ದಾರೆ. ದಾಳಿ ಮಾಡುತ್ತಿದ್ದಂತೆ ಸಿಪಿಐ ಶ್ರೀಮಂತ ಇಲ್ಲಾಳ ಗಾಳಿಯಲ್ಲಿ ಗುಂಡು ಹಾರಿಸಿದ್ದರು ಎನ್ನಲಾಗಿದೆ.  ಆದ್ರು ಗಾಂಜಾ ದಂಧೆಕೋರರು ಪೊಲೀಸರನ್ನೆ ಅಟ್ಟಾಡಿಸಿ ಹಲ್ಲೆ ಮಾಡಿದ್ದಾರೆ. 

ವಿಚಾರಣೆ ನೆಪದಲ್ಲಿ ಠಾಣೆಗೆ ಕರೆದೊಯ್ದು ಪೊಲೀಸರಿಂದ ಅಮಾಯಕ ಯುವಕರ ಮೇಲೆ ಹಲ್ಲೆ!