ದೇವರ ದರ್ಶನಕ್ಕೆ ಬಂದ ಜೆಡಿಎಸ್‌ ಕಾರ್ಯಕರ್ತನ ಮೇಲೆ ಅಟ್ಯಾಕ್: ಮಚ್ಚು ಬೀಸೋ ಮುಂಚೆ ಕಾನ್ಸಟೇಬಲ್‌ ಹಾಜರ್..!

ದೇವರ ದರ್ಶನಕ್ಕೆ ಬಂದ ಜೆಡಿಎಸ್‌ ಕಾರ್ಯಕರ್ತನ ಮೇಲೆ ಅಟ್ಯಾಕ್: ಮಚ್ಚು ಬೀಸೋ ಮುಂಚೆ ಕಾನ್ಸಟೇಬಲ್‌ ಹಾಜರ್..!

Published : Aug 15, 2023, 01:00 PM IST

ಸ್ನೇಹಿತರಾಗಿದ್ದವರು ದುಡ್ಡಿಗಾಗಿ ವೈರಿಗಳಾದರು..!
ಅಟ್ಯಾಕ್ ಪ್ಲಾನ್ ಮಾಡಿದವನು ಸ್ನೇಹಿತನೇ..!
ಅವನ ಪ್ರಾಣ ಉಳಿಸಿದ್ದು ಪೊಲೀಸ್ ಪೇದೆ..!

ಆತ ಜೆಡಿಎಸ್ ಕಾರ್ಯಕರ್ತ, ಹೆಂಡತಿ ಪುರಸಭೆ ಸದಸ್ಯೆಯಾಗಿದ್ದಳು. ರಾಜಕೀಯ ಮೂಲಕ ಜನರ ಸೇವೆ ಮಾಡಿಕೊಂಡಿದ್ದ ಆತನ ಮೇಲೆ ಆವತ್ತೊಂದು ದಿನ ಡೆಡ್ಲಿ ಅಟ್ಯಾಕ್ ನಡೆದುಬಿಟ್ಟಿತ್ತು. ದೇವಸ್ಥಾನಕ್ಕೆ ಹೋಗಿ ಕೈ ಮುಗಿದು ಹೊರ ಬರ್ತಿದಂತೆ ಅವನ ಮೇಲೆ ಹಂತಕರ ಪಡೆ ಅಟ್ಯಾಕ್(Attack) ಮಾಡಿತ್ತು. ದೇವರಿಗೆ ಕೈ ಮುಗಿದ ಪರಿಣಾಮನೋ ಏನೋ ಆತ ಬದುಕುಳಿದುಬಿಟ್ಟ. ಇನ್ನೂ ಆತನ ಪ್ರಾಣ ಉಳಿಸಿದ್ದು ಒಬ್ಬ ಪೊಲೀಸ್ ಪೇದೆ. ನಂತರ ಹಲ್ಲೆಯ ತನಿಖೆ ನಡೆದ ಪೊಲೀಸರಿಗೆ ಅವನ ಬ್ಯುಸಿನೆಸ್ ಬಗ್ಗೆ ಒಂದೊಂದೇ ಮಾಹಿತಿಗಳು ಗೊತ್ತಾಗ್ತಾ ಹೊಯ್ತು. ಅಷ್ಟೇ ಅಲ್ಲ ಆತನ ಮೇಲೆ ಅಟ್ಯಾಕ್ ಮಾಡಿದ ಕಿರಾತಕ ಯಾರು ಅನ್ನೋದು ಗೊತ್ತಾಗಿಹೊಯ್ತು. ಇಷ್ಟೆಲ್ಲಾ ಆಸೆ ಇಟ್ಟುಕೊಂಡವನಿಗೆ ಶತ್ರುಗಳಿರೋದಿಲ್ವಾ..? ಅಂದಹಾಗೆ ಮೊನ್ನೆ ಆಂಜನೇಯನ ಎದುರು ಅಪ್ಪು ಗೌಡರ(Appugowda) ಮೇಲೆ ಅಟ್ಯಾಕ್ ಮಾಡಿದವರು ಆತನನ್ನ ಕೊಲ್ಲದೇ ಎಸ್ಕೇಪ್ ಆಗಿದ್ರು. ಕಾರಣ ಅದೇ ದೇವಸ್ಥಾನಕ್ಕೆ(Temple) ಅದೇ ಟೈಂನಲ್ಲಿ ಬಂದಿದ್ದ ಒಬ್ಬ ಪೇದೆ. ತನ್ನ ಪ್ರಾಣದ ಹಂಗನ್ನೂ ಬಿಟ್ಟು ಆ ಪೇದೆ ಅಪ್ಪು ಗೌಡರನ್ನ ಉಳಿಸಲು ಹೋರಾಡಿದ್ದ. ಅಷ್ಟೇ ಅಲ್ಲ ಹಂತಕರು ಎಸ್ಕೇಪ್ ಆಗುವಾಗ ಅವರನ್ನೇ ಫಾಲೋ ಮಾಡಿದ ಆತ 20 ಕಿಲೋ ಮೀಟರ್ ಚೇಸ್ ಮಾಡಿ ಅವರನ್ನ ಲಾಕ್ ಮಾಡಿದ್ದ. ಕುಮಾರಸ್ವಾಮಿಯಂಥವರು ಒಬ್ಬರು ಪ್ರತೀ ಠಾಣೆಯಲ್ಲೂ ಇದ್ದುಬಿಟ್ಟರೆ ಸಾಕು ಅಲ್ವಾ..? ಇನ್ನೂ ಹಂತಕರನ್ನ ಚೇಸ್ ಮಾಡಿ ಹಿಡಿದ ನಂತರ ಅವರನ್ನ ವಿಚಾರಣೆಗೆ ಒಳಪಡಿಸಲಾಯ್ತು. ಆದ್ರೆ ಅವರು ಹೇಳಿದ ಒಂದು ಹೆಸರು ಕೇಳಿ ಪೊಲೀಸರೇ ದಂಗಾಗಿಹೋಗಿದ್ರು. ಕಾರಣ ಅಪ್ಪು ಗೌಡ ಮೇಲೆ ಅಟ್ಯಾಕ್ ಮಾಡುವಂತೆ ಹೆಳಿದ್ದು ಅಪ್ಪುಗೌಡನ ಸ್ನೇಹಿತನೇ ಆಗಿದ್ದ.

ಇದನ್ನೂ ವೀಕ್ಷಿಸಿ:  ಬುಡಕಟ್ಟು ಸಮುದಾಯದ ಯುವತಿಯಿಂದ ಧ್ವಜಾರೋಹಣ ಮಾಡಿಸಿದ ಎಸ್‌ಪಿ !

29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
Read more