Crime News: ಕರ್ನಾಟಕದಲ್ಲೂ ಶುರುವಾಯಿತಾ ಹೊಡಿಬಡಿ ಪಾಲಿಟಿಕ್ಸ್‌..! ಬೆಂಗಳೂರು ಗ್ರಾಮಾಂತರದಲ್ಲಿ ಟಾರ್ಗೆಟ್ ಅಟ್ಯಾಕ್..!

Crime News: ಕರ್ನಾಟಕದಲ್ಲೂ ಶುರುವಾಯಿತಾ ಹೊಡಿಬಡಿ ಪಾಲಿಟಿಕ್ಸ್‌..! ಬೆಂಗಳೂರು ಗ್ರಾಮಾಂತರದಲ್ಲಿ ಟಾರ್ಗೆಟ್ ಅಟ್ಯಾಕ್..!

Published : Apr 12, 2024, 06:30 PM IST

ಬೆಂಗಳೂರು ಗ್ರಾಮಾಂತರದಲ್ಲಿ ಟಾರ್ಗೆಟ್ ಅಟ್ಯಾಕ್..!
ಕಾರ್ಯಕರ್ತರನ್ನ ಪಕ್ಷಕ್ಕೆ ಕರೆತಂದಿದ್ದೇ ತಪ್ಪಾಯ್ತು..!
ಶುರುವಾಯ್ತಾ ಪಶ್ಚಿಮ ಬಂಗಾಳ ಮಾದರಿ ರಾಜಕೀಯ..!

ದೇಶದಲ್ಲಿ ಪ್ರಜಾಪ್ರಭುತ್ವದ ಹಬ್ಬ ಜೋರಾಗಿ ನಡೆಯುತ್ತಿದೆ. ಕರ್ನಾಟಕದಲ್ಲೂ(Karnataka) ಮೂರು ಪಕ್ಷಗಳು ಮತಬೇಟೆಗೆ ಇಳಿದಿವೆ. ಆದ್ರೆ ನಮ್ಮ ರಾಜ್ಯದಲ್ಲಿ ಅತೀ ಹೆಚ್ಚು ಕ್ರೇಜ್ ಹುಟ್ಟಿಸಿರೋದು ಬೆಂಗಳೂರು ಗ್ರಾಮಾಂತರ(Bengaluru rural) ಕ್ಷೇತ್ರ. ಘಟಾನುಘಟಿಗಳೇ ಈ ಕ್ಷೇತ್ರದಲ್ಲಿ ಅಭ್ಯರ್ಥಿಗಳಾಗಿದ್ದಾರೆ. ಹೈವೋಲ್ಟೇಜ್ ಕ್ಷೇತ್ರವೆನ್ನಿಸಿಕೊಂಡಿರೋ ಈ ಬೆಂಗಳೂರು ಗ್ರಾಮಾಂತರದಲ್ಲಿ ಈಗ ಗೂಂಡಾ ಪಾಲಿಟಿಕ್ಸ್ ಶುರುವಾಗಿದೆ ಅನಿಸ್ತಿದೆ. ಕಾರಣ ಇದೇ ಕ್ಷೇತ್ರದಲ್ಲಿ ಕಾರ್ಯಕರ್ತರುಗಳ ಮೇಲೆ ಆಗುತ್ತಿರುವ ಹಲ್ಲೆಗಳು. ಇನ್ನೂ ಎಲೆಕ್ಷನ್ ಹೊತ್ತಲ್ಲಿ, ಹೈವೋಲ್ಟೇಜ್ ಕ್ಷೇತ್ರದಲ್ಲಿ ಗೂಂಡಾ ಪೊಲಿಟಿಕ್ಸ್‌ ನಡೆಯುತ್ತಿದೆ. ಎದುರಾಳಿಗಳ ಪರ ಪ್ರಚಾರ ಮಾಡಿದ ಅನ್ನೋ ಒಂದೇ ಕಾರಣಕ್ಕೆ ಕಾಂಗ್ರೆಸ್(Congress) ಕಾರ್ಯಕರ್ತ ಜೆಡಿಎಸ್(JDS) ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಿದ್ದಾನೆ. ಇನ್ನೂ ಇದೇ ರೀತಿ ಇದೇ ಕ್ಷೇತ್ರದಲ್ಲಿ ಮತ್ತೊಬ್ಬ ಜೆಡಿಎಸ್ ಕಾರ್ಯಕರ್ತನ ಮೇಲೆ ಪುಂಡರು ದಾಳಿ ಮಾಡಿದ್ದಾರೆ. ಬೆಂಗಳೂರು ಗ್ರಾಮಾಂತರ ಲೋಕಸಭಾ(Loksabha) ಕ್ಷೇತ್ರದಲ್ಲಿ ಹೊಡಿ ಬಡಿ ರಾಜಕಾರಣ ನಿಲ್ಲೋ ಲಕ್ಷಣ ಕಾಣ್ತಿಲ್ಲ. ಮೊನ್ನೆ ಮಂಜುನಾಥನ ಮೇಲೆ ಅಟ್ಯಾಕ್ ಮಾಡಿದ್ರೆ ನಿನ್ನೆ ಮತ್ತೊಬ್ಬ ಜೆಡಿಎಸ್ ಕಾರ್ಯಕರ್ತನ ಮೇಲೆ ಅಟ್ಯಾಕ್ ಆಗಿದೆ. ಕಾಂಗ್ರೆಸ್ ನಿಂದ ಜೆಡಿಎಸ್ ಗೆ ಕಾರ್ಯಕರ್ತರನ್ನ ವಾಪಸ್ ಕರೆತಂದಿದ್ದಕ್ಕೆ ಜೆಡಿಎಸ್ ಮುಖಂಡ ಮೇಲೆ ಮನಸೋ ಇಚ್ಛೆ ಥಳಿಸಲಾಗಿದೆ. ಸದ್ಯ ಹಲ್ಲೆ ಮಾಡಿದವರ ಮೇಲೆ ಎಫ್.ಐ.ಆರ್ ದಾಖಲಾಗಿದೆ. ಆದ್ರೆ  ದೂರು ದಾಖಲಾಗ್ತಿದ್ದಂತೆ ಅವರೆಲ್ಲಾ ಎಸ್ಕೇಪ್ ಆಗಿದ್ದಾರೆ. ಅದ್ರೆ ಇವತ್ತಲ್ಲ ನಾಳೆ ಅವರು ಜೈಲಿಗೆ ಹೋಗ್ತಾರೆ. ಇನ್ನೂ ಇವರುಗಳ ಈ ಶ್ರಮದಿಂದ ಗೆಲುವು ಸಾಧಿಸುವವರು ಗೆದ್ದು ಡೆಲ್ಲಿಗೆ ಹೋಗ್ತಾರೆ. ಆದ್ರೆ ಕೋರ್ಟು ಕೇಸು ಅಂತ ಅನುಭವಿಸುವವರು ಕಾರ್ಯಕರ್ತರೇ.

ಇದನ್ನೂ ವೀಕ್ಷಿಸಿ:  BK Hariprasad: ಏನೇ ಭಿನ್ನಾಭಿಪ್ರಾಯ ಇದ್ರೂ ಪೆನ್‌ಡ್ರೈವ್‌ನಲ್ಲಿಟ್ಟು ಚುನಾವಣೆ ಬಳಿಕ ಹೇಳ್ತೀನಿ: ಬಿ.ಕೆ. ಹರಿಪ್ರಸಾದ್

23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
Read more