Crime News: ಕರ್ನಾಟಕದಲ್ಲೂ ಶುರುವಾಯಿತಾ ಹೊಡಿಬಡಿ ಪಾಲಿಟಿಕ್ಸ್‌..! ಬೆಂಗಳೂರು ಗ್ರಾಮಾಂತರದಲ್ಲಿ ಟಾರ್ಗೆಟ್ ಅಟ್ಯಾಕ್..!

Apr 12, 2024, 6:30 PM IST

ದೇಶದಲ್ಲಿ ಪ್ರಜಾಪ್ರಭುತ್ವದ ಹಬ್ಬ ಜೋರಾಗಿ ನಡೆಯುತ್ತಿದೆ. ಕರ್ನಾಟಕದಲ್ಲೂ(Karnataka) ಮೂರು ಪಕ್ಷಗಳು ಮತಬೇಟೆಗೆ ಇಳಿದಿವೆ. ಆದ್ರೆ ನಮ್ಮ ರಾಜ್ಯದಲ್ಲಿ ಅತೀ ಹೆಚ್ಚು ಕ್ರೇಜ್ ಹುಟ್ಟಿಸಿರೋದು ಬೆಂಗಳೂರು ಗ್ರಾಮಾಂತರ(Bengaluru rural) ಕ್ಷೇತ್ರ. ಘಟಾನುಘಟಿಗಳೇ ಈ ಕ್ಷೇತ್ರದಲ್ಲಿ ಅಭ್ಯರ್ಥಿಗಳಾಗಿದ್ದಾರೆ. ಹೈವೋಲ್ಟೇಜ್ ಕ್ಷೇತ್ರವೆನ್ನಿಸಿಕೊಂಡಿರೋ ಈ ಬೆಂಗಳೂರು ಗ್ರಾಮಾಂತರದಲ್ಲಿ ಈಗ ಗೂಂಡಾ ಪಾಲಿಟಿಕ್ಸ್ ಶುರುವಾಗಿದೆ ಅನಿಸ್ತಿದೆ. ಕಾರಣ ಇದೇ ಕ್ಷೇತ್ರದಲ್ಲಿ ಕಾರ್ಯಕರ್ತರುಗಳ ಮೇಲೆ ಆಗುತ್ತಿರುವ ಹಲ್ಲೆಗಳು. ಇನ್ನೂ ಎಲೆಕ್ಷನ್ ಹೊತ್ತಲ್ಲಿ, ಹೈವೋಲ್ಟೇಜ್ ಕ್ಷೇತ್ರದಲ್ಲಿ ಗೂಂಡಾ ಪೊಲಿಟಿಕ್ಸ್‌ ನಡೆಯುತ್ತಿದೆ. ಎದುರಾಳಿಗಳ ಪರ ಪ್ರಚಾರ ಮಾಡಿದ ಅನ್ನೋ ಒಂದೇ ಕಾರಣಕ್ಕೆ ಕಾಂಗ್ರೆಸ್(Congress) ಕಾರ್ಯಕರ್ತ ಜೆಡಿಎಸ್(JDS) ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಿದ್ದಾನೆ. ಇನ್ನೂ ಇದೇ ರೀತಿ ಇದೇ ಕ್ಷೇತ್ರದಲ್ಲಿ ಮತ್ತೊಬ್ಬ ಜೆಡಿಎಸ್ ಕಾರ್ಯಕರ್ತನ ಮೇಲೆ ಪುಂಡರು ದಾಳಿ ಮಾಡಿದ್ದಾರೆ. ಬೆಂಗಳೂರು ಗ್ರಾಮಾಂತರ ಲೋಕಸಭಾ(Loksabha) ಕ್ಷೇತ್ರದಲ್ಲಿ ಹೊಡಿ ಬಡಿ ರಾಜಕಾರಣ ನಿಲ್ಲೋ ಲಕ್ಷಣ ಕಾಣ್ತಿಲ್ಲ. ಮೊನ್ನೆ ಮಂಜುನಾಥನ ಮೇಲೆ ಅಟ್ಯಾಕ್ ಮಾಡಿದ್ರೆ ನಿನ್ನೆ ಮತ್ತೊಬ್ಬ ಜೆಡಿಎಸ್ ಕಾರ್ಯಕರ್ತನ ಮೇಲೆ ಅಟ್ಯಾಕ್ ಆಗಿದೆ. ಕಾಂಗ್ರೆಸ್ ನಿಂದ ಜೆಡಿಎಸ್ ಗೆ ಕಾರ್ಯಕರ್ತರನ್ನ ವಾಪಸ್ ಕರೆತಂದಿದ್ದಕ್ಕೆ ಜೆಡಿಎಸ್ ಮುಖಂಡ ಮೇಲೆ ಮನಸೋ ಇಚ್ಛೆ ಥಳಿಸಲಾಗಿದೆ. ಸದ್ಯ ಹಲ್ಲೆ ಮಾಡಿದವರ ಮೇಲೆ ಎಫ್.ಐ.ಆರ್ ದಾಖಲಾಗಿದೆ. ಆದ್ರೆ  ದೂರು ದಾಖಲಾಗ್ತಿದ್ದಂತೆ ಅವರೆಲ್ಲಾ ಎಸ್ಕೇಪ್ ಆಗಿದ್ದಾರೆ. ಅದ್ರೆ ಇವತ್ತಲ್ಲ ನಾಳೆ ಅವರು ಜೈಲಿಗೆ ಹೋಗ್ತಾರೆ. ಇನ್ನೂ ಇವರುಗಳ ಈ ಶ್ರಮದಿಂದ ಗೆಲುವು ಸಾಧಿಸುವವರು ಗೆದ್ದು ಡೆಲ್ಲಿಗೆ ಹೋಗ್ತಾರೆ. ಆದ್ರೆ ಕೋರ್ಟು ಕೇಸು ಅಂತ ಅನುಭವಿಸುವವರು ಕಾರ್ಯಕರ್ತರೇ.

ಇದನ್ನೂ ವೀಕ್ಷಿಸಿ:  BK Hariprasad: ಏನೇ ಭಿನ್ನಾಭಿಪ್ರಾಯ ಇದ್ರೂ ಪೆನ್‌ಡ್ರೈವ್‌ನಲ್ಲಿಟ್ಟು ಚುನಾವಣೆ ಬಳಿಕ ಹೇಳ್ತೀನಿ: ಬಿ.ಕೆ. ಹರಿಪ್ರಸಾದ್