Crime News: ಕರ್ನಾಟಕದಲ್ಲೂ ಶುರುವಾಯಿತಾ ಹೊಡಿಬಡಿ ಪಾಲಿಟಿಕ್ಸ್‌..! ಬೆಂಗಳೂರು ಗ್ರಾಮಾಂತರದಲ್ಲಿ ಟಾರ್ಗೆಟ್ ಅಟ್ಯಾಕ್..!

Crime News: ಕರ್ನಾಟಕದಲ್ಲೂ ಶುರುವಾಯಿತಾ ಹೊಡಿಬಡಿ ಪಾಲಿಟಿಕ್ಸ್‌..! ಬೆಂಗಳೂರು ಗ್ರಾಮಾಂತರದಲ್ಲಿ ಟಾರ್ಗೆಟ್ ಅಟ್ಯಾಕ್..!

Published : Apr 12, 2024, 06:30 PM IST

ಬೆಂಗಳೂರು ಗ್ರಾಮಾಂತರದಲ್ಲಿ ಟಾರ್ಗೆಟ್ ಅಟ್ಯಾಕ್..!
ಕಾರ್ಯಕರ್ತರನ್ನ ಪಕ್ಷಕ್ಕೆ ಕರೆತಂದಿದ್ದೇ ತಪ್ಪಾಯ್ತು..!
ಶುರುವಾಯ್ತಾ ಪಶ್ಚಿಮ ಬಂಗಾಳ ಮಾದರಿ ರಾಜಕೀಯ..!

ದೇಶದಲ್ಲಿ ಪ್ರಜಾಪ್ರಭುತ್ವದ ಹಬ್ಬ ಜೋರಾಗಿ ನಡೆಯುತ್ತಿದೆ. ಕರ್ನಾಟಕದಲ್ಲೂ(Karnataka) ಮೂರು ಪಕ್ಷಗಳು ಮತಬೇಟೆಗೆ ಇಳಿದಿವೆ. ಆದ್ರೆ ನಮ್ಮ ರಾಜ್ಯದಲ್ಲಿ ಅತೀ ಹೆಚ್ಚು ಕ್ರೇಜ್ ಹುಟ್ಟಿಸಿರೋದು ಬೆಂಗಳೂರು ಗ್ರಾಮಾಂತರ(Bengaluru rural) ಕ್ಷೇತ್ರ. ಘಟಾನುಘಟಿಗಳೇ ಈ ಕ್ಷೇತ್ರದಲ್ಲಿ ಅಭ್ಯರ್ಥಿಗಳಾಗಿದ್ದಾರೆ. ಹೈವೋಲ್ಟೇಜ್ ಕ್ಷೇತ್ರವೆನ್ನಿಸಿಕೊಂಡಿರೋ ಈ ಬೆಂಗಳೂರು ಗ್ರಾಮಾಂತರದಲ್ಲಿ ಈಗ ಗೂಂಡಾ ಪಾಲಿಟಿಕ್ಸ್ ಶುರುವಾಗಿದೆ ಅನಿಸ್ತಿದೆ. ಕಾರಣ ಇದೇ ಕ್ಷೇತ್ರದಲ್ಲಿ ಕಾರ್ಯಕರ್ತರುಗಳ ಮೇಲೆ ಆಗುತ್ತಿರುವ ಹಲ್ಲೆಗಳು. ಇನ್ನೂ ಎಲೆಕ್ಷನ್ ಹೊತ್ತಲ್ಲಿ, ಹೈವೋಲ್ಟೇಜ್ ಕ್ಷೇತ್ರದಲ್ಲಿ ಗೂಂಡಾ ಪೊಲಿಟಿಕ್ಸ್‌ ನಡೆಯುತ್ತಿದೆ. ಎದುರಾಳಿಗಳ ಪರ ಪ್ರಚಾರ ಮಾಡಿದ ಅನ್ನೋ ಒಂದೇ ಕಾರಣಕ್ಕೆ ಕಾಂಗ್ರೆಸ್(Congress) ಕಾರ್ಯಕರ್ತ ಜೆಡಿಎಸ್(JDS) ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಿದ್ದಾನೆ. ಇನ್ನೂ ಇದೇ ರೀತಿ ಇದೇ ಕ್ಷೇತ್ರದಲ್ಲಿ ಮತ್ತೊಬ್ಬ ಜೆಡಿಎಸ್ ಕಾರ್ಯಕರ್ತನ ಮೇಲೆ ಪುಂಡರು ದಾಳಿ ಮಾಡಿದ್ದಾರೆ. ಬೆಂಗಳೂರು ಗ್ರಾಮಾಂತರ ಲೋಕಸಭಾ(Loksabha) ಕ್ಷೇತ್ರದಲ್ಲಿ ಹೊಡಿ ಬಡಿ ರಾಜಕಾರಣ ನಿಲ್ಲೋ ಲಕ್ಷಣ ಕಾಣ್ತಿಲ್ಲ. ಮೊನ್ನೆ ಮಂಜುನಾಥನ ಮೇಲೆ ಅಟ್ಯಾಕ್ ಮಾಡಿದ್ರೆ ನಿನ್ನೆ ಮತ್ತೊಬ್ಬ ಜೆಡಿಎಸ್ ಕಾರ್ಯಕರ್ತನ ಮೇಲೆ ಅಟ್ಯಾಕ್ ಆಗಿದೆ. ಕಾಂಗ್ರೆಸ್ ನಿಂದ ಜೆಡಿಎಸ್ ಗೆ ಕಾರ್ಯಕರ್ತರನ್ನ ವಾಪಸ್ ಕರೆತಂದಿದ್ದಕ್ಕೆ ಜೆಡಿಎಸ್ ಮುಖಂಡ ಮೇಲೆ ಮನಸೋ ಇಚ್ಛೆ ಥಳಿಸಲಾಗಿದೆ. ಸದ್ಯ ಹಲ್ಲೆ ಮಾಡಿದವರ ಮೇಲೆ ಎಫ್.ಐ.ಆರ್ ದಾಖಲಾಗಿದೆ. ಆದ್ರೆ  ದೂರು ದಾಖಲಾಗ್ತಿದ್ದಂತೆ ಅವರೆಲ್ಲಾ ಎಸ್ಕೇಪ್ ಆಗಿದ್ದಾರೆ. ಅದ್ರೆ ಇವತ್ತಲ್ಲ ನಾಳೆ ಅವರು ಜೈಲಿಗೆ ಹೋಗ್ತಾರೆ. ಇನ್ನೂ ಇವರುಗಳ ಈ ಶ್ರಮದಿಂದ ಗೆಲುವು ಸಾಧಿಸುವವರು ಗೆದ್ದು ಡೆಲ್ಲಿಗೆ ಹೋಗ್ತಾರೆ. ಆದ್ರೆ ಕೋರ್ಟು ಕೇಸು ಅಂತ ಅನುಭವಿಸುವವರು ಕಾರ್ಯಕರ್ತರೇ.

ಇದನ್ನೂ ವೀಕ್ಷಿಸಿ:  BK Hariprasad: ಏನೇ ಭಿನ್ನಾಭಿಪ್ರಾಯ ಇದ್ರೂ ಪೆನ್‌ಡ್ರೈವ್‌ನಲ್ಲಿಟ್ಟು ಚುನಾವಣೆ ಬಳಿಕ ಹೇಳ್ತೀನಿ: ಬಿ.ಕೆ. ಹರಿಪ್ರಸಾದ್

22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
24:33ಪರ ಪುರುಷನ ಸಹವಾಸಕ್ಕೆ ಪತಿ ಪರಮೇಶಿಯನ್ನೇ ಪರಲೋಕಕ್ಕೆ ಕಳಿಸಿದ ಪತ್ನಿ! ಹೆಣ ಹೊರತೆಗೆದಾಗ ಸತ್ಯವೂ ಹೊರಬಿತ್ತು!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
Read more