10 ವರ್ಷದಿಂದ ಒನ್ ವೇ ಲವ್, ಆ್ಯಸಿಡ್ ದಾಳಿಗೆ ಪ್ಲ್ಯಾನ್ ಮಾಡಿದ್ದೆ: ತಪ್ಪೊಪ್ಪಿಕೊಂಡ ಆ್ಯಸಿಡ್ ನಾಗ

Jun 8, 2022, 10:30 AM IST

ಬೆಂಗಳೂರು (ಜೂ. 08): ಪ್ರೀತಿ ನಿರಾಕರಿಸಿದಳು ಎಂಬ ಕಾರಣಕ್ಕೆ ಕೋಪಗೊಂಡ ಪಾಗಲ್ ಪ್ರೇಮಿ 25 ವರ್ಷದ ಯುವತಿ ಮೇಲೆ ಆ್ಯಸಿಡ್‌ ಎರಚಿದ ಅಮಾನುಷ ಘಟನೆ ಕಾಮಾಕ್ಷಿಪಾಳ್ಯದ ಹೆಗ್ಗನಹಳ್ಳಿಯಲ್ಲಿ ನಡೆದಿತ್ತು. ಈ ಘಟನೆ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿತ್ತು. 

ಕರ್ನಾಟಕ, ಕೇರಳ ಗಡಿಯಲ್ಲಿ ನಡೀತಾ ಇದೆಯಾ ಉಗ್ರರ ಖತರ್ನಾಕ್ ಕೃತ್ಯ..?

ತಮಿಳುನಾಡಿನ ಆಶ್ರಮವೊಂದರಲ್ಲಿ ಕಾವಿಧಾರಿ ವೇಷದಲ್ಲಿ ತಲೆಮರೆಸಿಕೊಂಡಿದ್ದ ಕಿಡಿಗೇಡಿ ಆ್ಯಸಿಡ್ ನಾಗನನ್ನು ಪೊಲೀಸರು ಸಿನಿಮೀಯ ಶೈಲಿಯಲ್ಲಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಈಗ ಪೊಲೀಸರ ಮುಂದೆ ಆ್ಯಸಿಡ್ ನಾಗ ತಪ್ಪೊಪ್ಪಿಕೊಂಡಿದ್ದಾನೆ. 2020 ರಲ್ಲೇ ಯುವತಿ ಮೇಲೆ ಆ್ಯಸಿಡ್ ಎರಚಲು ಪ್ಲ್ಯಾನ್ ಮಾಡಿದ್ದನಂತೆ. ಅದಕ್ಕಾಗಿ ಬರೋಬ್ಬರಿ 9 ಕೆಜಿ ಆ್ಯಸಿಡ್  ಖರೀದಿಸಿಟ್ಟಿದ್ದನಂತೆ. ಈ ಎಲ್ಲದರ ಬಗ್ಗೆ ಎಕ್ಸ್‌ಕ್ಲೂಸಿವ್ ವಿಚಾರ ಇಲ್ಲಿದೆ.