Military Information Leak: ಆರೋಪಿಯ ಮೊಬೈಲ್‌ನಲ್ಲಿ ಸಿಕ್ಕಿವೆ ಅಚ್ಚರಿಯ ಮಾಹಿತಿ!

Military Information Leak: ಆರೋಪಿಯ ಮೊಬೈಲ್‌ನಲ್ಲಿ ಸಿಕ್ಕಿವೆ ಅಚ್ಚರಿಯ ಮಾಹಿತಿ!

Suvarna News   | Asianet News
Published : Nov 27, 2021, 01:03 PM ISTUpdated : Nov 27, 2021, 01:45 PM IST

*ದೇಶದ ಮಿಲಿಟರಿ ಮಾಹಿತಿಯನ್ನು ವೈರಿಗಳಿಗೆ ಲೀಕ್
*ಸೆಪ್ಟೆಂಬರ್‌ನಲ್ಲಿ ರಾಜಸ್ಥಾನದ ಮೂಲದ ವ್ಯಕ್ತಿಯ ಬಂಧನ
*ಕಿರಾತಕ ಜೀತೇಂದ್ರ ರಾಥೋಡ್  ಮೋಬೈಲ್‌ ರಿಟ್ರೀವ್‌ ಮಾಡಿದ ATC
*ಮೋಬೈಲ್‌ನಲ್ಲಿ 50ಕ್ಕೂ ಹೆಚ್ಚು ಯುವತಿಯರ ಫೋಟೊ ಪತ್ತೆ

ಬೆಂಗಳೂರು(ನ.27): ದೇಶದ ಮಿಲಿಟರಿ ಮಾಹಿತಿಯನ್ನು (Military Information) ವೈರಿಗಳಿಗೆ ಲೀಕ್ ಮಾಡುತ್ತಿದ್ದ  ರಾಜಸ್ಥಾನ ಮೂಲದ ವ್ಯಕ್ತಿಯನ್ನು ಸೆಪ್ಟೆಂಬರ್‌ನಲ್ಲಿ ಬೆಂಗಳೂರಿನಲ್ಲಿ ಬಂಧಿಸಲಾಗಿತ್ತು.  ಕಿರಾತಕ ಜೀತೇಂದ್ರ ರಾಥೋಡ್ (Jitendra Rathore) ಸೇನಾ ಯುನಿಫಾರ್ಮ್ ಸಹ ಇಟ್ಟುಕೊಂಡಿದ್ದ. ಈತ  ರಾಜಸ್ಥಾನದ (Rajasthan) ಬಾರ್ಮರ್ ಹಳ್ಳಿಯವನಾಗಿದ್ದು, ಬೆಂಗಳೂರಿನಲ್ಲಿ ಗಾರ್ಮೆಂಟ್ಸ್ ನಲ್ಲಿ ಕೆಲಸ ಮಾಡುತ್ತಿದ್ದ ಎನ್ನಲಾಗಿತ್ತು. ಪಾಕಿಸ್ತಾನದ ಐಎಸ್ಐ (ISI) ಅಧಿಕಾರಿಗಳ ಜೊತೆ ನೇರ ಸಂಪರ್ಕ ಹೊಂದಿದ್ದು,  ವಾಟ್ಸಪ್ ಸಂದೇಶ, ಕಾಲ್ ಮೂಲಕ ಸೇನೆಯ ಸ್ಥಳ ಹಾಗೂ ಮಾಹಿತಿ ಕಳುಹಿಸಿದ್ದ. ಕಣ್ಣಿಗೆ ಕಾಣದ ಯುವತಿಯ ಮಾತಿಗೆ ಮರುಳಾಗಿ ಮಾಹಿತಿ ಕಳಿಸುತ್ತಿದ್ದ ಎಂಬ ಅಂಶವೂ ಬಹಿರಂಗವಾಗಿತ್ತು. ವೈರಿಗಳು ಯುವತಿ  ಹೆಸರಿನಲ್ಲಿ ಸೋಶಿಯಲ್ ಮೀಡಿಯಾ ಖಾತೆ ಸೃಷ್ಟಿ ಮಾಡಿಕೊಂಡು ಈತನನ್ನು ಸಂಪರ್ಕ ಮಾಡಿದ್ದರು. 

ಹಣಕ್ಕಾಗಿ ದೇಶದ ಸಬ್‌ಮರೀನ್‌ ಡೇಟಾ ಲೀಕ್ ಮಾಡಿದ ಕಮಾಂಡರ್‌ ಸೇರಿ ಐವರ ಬಂಧನ

ಈಗ ಈ ಪ್ರಕರಣಕ್ಕೆ ಟ್ವಿಸ್ಟ್‌ ಸಿಕ್ಕಿದ್ದು ಬೆಂಳೂರಿನ ಭಯೋತ್ಪಾದನೆ ನಿಗ್ರಹ ದಳ (Anti terrorist cell) ಇತನ ಮೋಬೈಲ್‌ ರಿಟ್ರೀವ್‌ (Retrieve) ಮಾಡಿದೆ. ಈ ವೇಳೆ ಮೋಬೈಲ್‌ನಲ್ಲಿ 50 ಕ್ಕೂ ಹೆಚ್ಚು ಯುವತಿಯರ ಫೋಟೋಗಳು ಪತ್ತೆಯಾಗಿವೆ.  ಇನ್ಸ್ಟಾಗ್ರಾಮ್‌ (Instagram) ಹಾಗೂ ಫೇಸ್‌ಬುಕ್‌ (Facebook) ಬಳಸಿ ಕಾರಾಚಿಯ ಮೂಲದ ಯುವತಿಯನ್ನು ಪರಿಚಯ ಮಾಡಿಕೊಳ್ಳುವುದರ ಮೂಲಕ ಪಾಕ್‌ ಇಂಟಲಿಜನ್ಸ್‌ಗೆ (Pakistan Intelligence) ಕೆಲವು ಫೋಟೋಗಳನ್ನು ರವಾನಿಸಿದ್ದ ಎಂಬ ಮಾಹಿತಿ ತಿಳಿದು ಬಂದಿದೆ.

23:12ಬೀದಿಗೆ ಬಂತು ಕನ್ನಡದ ಮತ್ತೊಬ್ಬ ಸೀರಿಯಲ್ ನಟಿಯ ಕುಟುಂಬ; ಮದುವೆಗೂ ಮುನ್ನವೇ ಬಳಸಿಕೊಂಡಿದ್ದ ಸುರೇಶ!
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
Read more