Military Information Leak: ಆರೋಪಿಯ ಮೊಬೈಲ್‌ನಲ್ಲಿ ಸಿಕ್ಕಿವೆ ಅಚ್ಚರಿಯ ಮಾಹಿತಿ!

Military Information Leak: ಆರೋಪಿಯ ಮೊಬೈಲ್‌ನಲ್ಲಿ ಸಿಕ್ಕಿವೆ ಅಚ್ಚರಿಯ ಮಾಹಿತಿ!

Published : Nov 27, 2021, 01:03 PM ISTUpdated : Nov 27, 2021, 01:45 PM IST

*ದೇಶದ ಮಿಲಿಟರಿ ಮಾಹಿತಿಯನ್ನು ವೈರಿಗಳಿಗೆ ಲೀಕ್
*ಸೆಪ್ಟೆಂಬರ್‌ನಲ್ಲಿ ರಾಜಸ್ಥಾನದ ಮೂಲದ ವ್ಯಕ್ತಿಯ ಬಂಧನ
*ಕಿರಾತಕ ಜೀತೇಂದ್ರ ರಾಥೋಡ್  ಮೋಬೈಲ್‌ ರಿಟ್ರೀವ್‌ ಮಾಡಿದ ATC
*ಮೋಬೈಲ್‌ನಲ್ಲಿ 50ಕ್ಕೂ ಹೆಚ್ಚು ಯುವತಿಯರ ಫೋಟೊ ಪತ್ತೆ

ಬೆಂಗಳೂರು(ನ.27): ದೇಶದ ಮಿಲಿಟರಿ ಮಾಹಿತಿಯನ್ನು (Military Information) ವೈರಿಗಳಿಗೆ ಲೀಕ್ ಮಾಡುತ್ತಿದ್ದ  ರಾಜಸ್ಥಾನ ಮೂಲದ ವ್ಯಕ್ತಿಯನ್ನು ಸೆಪ್ಟೆಂಬರ್‌ನಲ್ಲಿ ಬೆಂಗಳೂರಿನಲ್ಲಿ ಬಂಧಿಸಲಾಗಿತ್ತು.  ಕಿರಾತಕ ಜೀತೇಂದ್ರ ರಾಥೋಡ್ (Jitendra Rathore) ಸೇನಾ ಯುನಿಫಾರ್ಮ್ ಸಹ ಇಟ್ಟುಕೊಂಡಿದ್ದ. ಈತ  ರಾಜಸ್ಥಾನದ (Rajasthan) ಬಾರ್ಮರ್ ಹಳ್ಳಿಯವನಾಗಿದ್ದು, ಬೆಂಗಳೂರಿನಲ್ಲಿ ಗಾರ್ಮೆಂಟ್ಸ್ ನಲ್ಲಿ ಕೆಲಸ ಮಾಡುತ್ತಿದ್ದ ಎನ್ನಲಾಗಿತ್ತು. ಪಾಕಿಸ್ತಾನದ ಐಎಸ್ಐ (ISI) ಅಧಿಕಾರಿಗಳ ಜೊತೆ ನೇರ ಸಂಪರ್ಕ ಹೊಂದಿದ್ದು,  ವಾಟ್ಸಪ್ ಸಂದೇಶ, ಕಾಲ್ ಮೂಲಕ ಸೇನೆಯ ಸ್ಥಳ ಹಾಗೂ ಮಾಹಿತಿ ಕಳುಹಿಸಿದ್ದ. ಕಣ್ಣಿಗೆ ಕಾಣದ ಯುವತಿಯ ಮಾತಿಗೆ ಮರುಳಾಗಿ ಮಾಹಿತಿ ಕಳಿಸುತ್ತಿದ್ದ ಎಂಬ ಅಂಶವೂ ಬಹಿರಂಗವಾಗಿತ್ತು. ವೈರಿಗಳು ಯುವತಿ  ಹೆಸರಿನಲ್ಲಿ ಸೋಶಿಯಲ್ ಮೀಡಿಯಾ ಖಾತೆ ಸೃಷ್ಟಿ ಮಾಡಿಕೊಂಡು ಈತನನ್ನು ಸಂಪರ್ಕ ಮಾಡಿದ್ದರು. 

ಹಣಕ್ಕಾಗಿ ದೇಶದ ಸಬ್‌ಮರೀನ್‌ ಡೇಟಾ ಲೀಕ್ ಮಾಡಿದ ಕಮಾಂಡರ್‌ ಸೇರಿ ಐವರ ಬಂಧನ

ಈಗ ಈ ಪ್ರಕರಣಕ್ಕೆ ಟ್ವಿಸ್ಟ್‌ ಸಿಕ್ಕಿದ್ದು ಬೆಂಳೂರಿನ ಭಯೋತ್ಪಾದನೆ ನಿಗ್ರಹ ದಳ (Anti terrorist cell) ಇತನ ಮೋಬೈಲ್‌ ರಿಟ್ರೀವ್‌ (Retrieve) ಮಾಡಿದೆ. ಈ ವೇಳೆ ಮೋಬೈಲ್‌ನಲ್ಲಿ 50 ಕ್ಕೂ ಹೆಚ್ಚು ಯುವತಿಯರ ಫೋಟೋಗಳು ಪತ್ತೆಯಾಗಿವೆ.  ಇನ್ಸ್ಟಾಗ್ರಾಮ್‌ (Instagram) ಹಾಗೂ ಫೇಸ್‌ಬುಕ್‌ (Facebook) ಬಳಸಿ ಕಾರಾಚಿಯ ಮೂಲದ ಯುವತಿಯನ್ನು ಪರಿಚಯ ಮಾಡಿಕೊಳ್ಳುವುದರ ಮೂಲಕ ಪಾಕ್‌ ಇಂಟಲಿಜನ್ಸ್‌ಗೆ (Pakistan Intelligence) ಕೆಲವು ಫೋಟೋಗಳನ್ನು ರವಾನಿಸಿದ್ದ ಎಂಬ ಮಾಹಿತಿ ತಿಳಿದು ಬಂದಿದೆ.

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more