ಹೆಂಡತಿ ಮೇಲೆ ಕಣ್ಣಾಕಿದ 10 ವರ್ಷದ ಗಟ್ಟಿ ಸ್ನೇಹಿತ; ಆತನಿಗಾಗಿ ಗಂಡನ ಉಸಿರನ್ನೇ ನಿಲ್ಲಿಸಿದಳು ಹೆಂಡತಿ!

ಹೆಂಡತಿ ಮೇಲೆ ಕಣ್ಣಾಕಿದ 10 ವರ್ಷದ ಗಟ್ಟಿ ಸ್ನೇಹಿತ; ಆತನಿಗಾಗಿ ಗಂಡನ ಉಸಿರನ್ನೇ ನಿಲ್ಲಿಸಿದಳು ಹೆಂಡತಿ!

Published : Aug 13, 2025, 04:31 PM IST
ಬೆಂಗಳೂರಿನಲ್ಲಿ ದಶಕಗಳ ಸ್ನೇಹಕ್ಕೆ ಅಕ್ರಮ ಸಂಬಂಧ ಬೆಂಕಿ ಹಚ್ಚಿದೆ. ಪತ್ನಿ ಮತ್ತು ಆಪ್ತ ಸ್ನೇಹಿತನ ನಡುವಿನ ಅಕ್ರಮ ಸಂಬಂಧ ಗಂಡನ ಕೊಲೆಯಲ್ಲಿ ಅಂತ್ಯಗೊಂಡಿದೆ. ಪೊಲೀಸರು ಪತ್ನಿ ಮತ್ತು ಪ್ರಿಯಕರನ ವಿರುದ್ಧ ತನಿಖೆ ನಡೆಸುತ್ತಿದ್ದಾರೆ.

ಬೆಂಗಳೂರು (ಆ.13): ದಶಕಗಳ ಸ್ನೇಹ, ಬದುಕು ಮತ್ತು ಕುಟುಂಬವನ್ನು ಅಕ್ರಮ ಸಂಬಂಧವೊಂದು ಬೀದಿ ಪಾಲು ಮಾಡಿರುವ ಘಟನೆಯೊಂದು ಬೆಂಗಳೂರಿನ ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸ್ನೇಹಿತನ ಪತ್ನಿಯ ಜೊತೆಗಿನ ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಗಂಡನೊಬ್ಬನನ್ನು ಆಕೆಯ ಪತ್ನಿಯೇ ಹತ್ಯೆ ಮಾಡಿಸಿದ ಆರೋಪ ಎದುರಿಸುತ್ತಿದ್ದಾರೆ.

ಬೆಂಗಳೂರಿನ ನಿವಾಸಿಗಳಾದ ವಿಜಯ್ ಕುಮಾರ್ ಮತ್ತು ಜಯಂತ್ ಕಳೆದ 30 ವರ್ಷಗಳಿಂದ ಆಪ್ತ ಸ್ನೇಹಿತರಾಗಿದ್ದರು. ಇಬ್ಬರೂ ಆಟೋ ಚಾಲನೆ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು. ವಿಜಯ್‌ಗೆ ಪತ್ನಿ ಆಶಾ ಮತ್ತು ಇಬ್ಬರು ಮಕ್ಕಳು ಇದ್ದರು. ಆದರೆ, ಈ ಸ್ನೇಹದ ಸಂಬಂಧ ದುರಂತಕ್ಕೆ ಕಾರಣವಾಗಿದೆ. ವಿಜಯ್ ಪತ್ನಿ ಆಶಾ ಮತ್ತು ಆತನ ಸ್ನೇಹಿತ ಜಯಂತ್ ನಡುವೆ ಅಕ್ರಮ ಸಂಬಂಧ ಬೆಳೆದಿತ್ತು.

ಸ್ಥಳಾಂತರ ಮಾಡಿದರೂ ತಪ್ಪದ ಗಲಾಟೆ: ಪತ್ನಿ ಮತ್ತು ಸ್ನೇಹಿತನ ಸಂಬಂಧದ ಬಗ್ಗೆ ತಿಳಿದ ವಿಜಯ್, ಕುಟುಂಬದ ಶಾಂತಿಗಾಗಿ ಕಾಮಾಕ್ಷಿಪಾಳ್ಯದ ಮನೆಯನ್ನು ಬಿಟ್ಟು ಕಡಬಗೆರೆಯ ಮಾಚೋಹಳ್ಳಿ ಬಡಾವಣೆಗೆ ಸ್ಥಳಾಂತರಗೊಂಡಿದ್ದರು. ಆದರೆ, ಆಶಾ ಮತ್ತು ಜಯಂತ್‌ರ ಅಕ್ರಮ ಸಂಬಂಧ ಮುಂದುವರಿದಿತ್ತು. ಈ ವಿಚಾರವಾಗಿ ಗಂಡ-ಹೆಂಡತಿ ನಡುವೆ ನಿರಂತರ ಗಲಾಟೆ ನಡೆಯುತ್ತಿತ್ತು. ಇದರಿಂದ ಬೇಸತ್ತಿದ್ದ ವಿಜಯ್ ಕೊಲೆಗೆ ಇದು ಕಾರಣವಾಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

ಪತ್ನಿಯಿಂದಲೇ ಹತ್ಯೆ ಸ್ಕೆಚ್?
ಮೊನ್ನೆ ಸಂಜೆ 7:30 ರ ಸುಮಾರಿಗೆ ಸ್ನೇಹಿತರೊಂದಿಗೆ ಪಾರ್ಟಿಗೆ ಹೋಗುವುದಾಗಿ ಪತ್ನಿ ಆಶಾಗೆ ಹೇಳಿ ವಿಜಯ್ ಮನೆಯಿಂದ ಹೊರಟಿದ್ದ. ಮನೆಯಿಂದ ಕೇವಲ 500 ಮೀಟರ್ ದೂರದಲ್ಲಿ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ಈ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ವಿಜಯ್‌ನನ್ನು ಆತನ ಪತ್ನಿ ಆಶಾ ಮತ್ತು ಆಕೆಯ ಪ್ರಿಯಕರ ಜಯಂತ್ ಸೇರಿ ಹತ್ಯೆ ಮಾಡಿಸಿರಬಹುದು ಎಂದು ಪೊಲೀಸರು ತಿಳಿಸಿದ್ದಾರೆ.

ಬೆಂಗಳೂರು ಗ್ರಾಮಾಂತರ ಎಸ್.ಪಿ ಸಿ.ಕೆ. ಬಾಬಾ ಅವರು ಮಾಧ್ಯಮಗಳಿಗೆ ನೀಡಿರುವ ಹೇಳಿಕೆಯ ಪ್ರಕಾರ, ಹತ್ಯೆಯಾದ ವಿಜಯ್ ಕುಮಾರ್‌ರ ಪತ್ನಿ ಆಶಾಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಘಟನೆ ನಡೆದ ನಂತರ ನಾಪತ್ತೆಯಾಗಿರುವ ಪ್ರಿಯಕರ ಜಯಂತ್‌ಗಾಗಿ ಪೊಲೀಸರು ತೀವ್ರ ಹುಡುಕಾಟ ನಡೆಸುತ್ತಿದ್ದಾರೆ. ಒಂದು ಅಕ್ರಮ ಸಂಬಂಧ ಒಂದು ದಶಕಗಳ ಸ್ನೇಹವನ್ನು, ಒಂದು ಕುಟುಂಬವನ್ನು ಮತ್ತು ಒಂದು ಜೀವವನ್ನು ಬಲಿ ತೆಗೆದುಕೊಂಡಿದೆ.

04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
Read more