ಬಿಜೆಪಿ ಮುಖಂಡನ ಸಾವು, ಇಬ್ಬರು ಮಹಿಳೆಯರು, ಹತ್ತಾರು ಅನುಮಾನ

ಬಿಜೆಪಿ ಮುಖಂಡನ ಸಾವು, ಇಬ್ಬರು ಮಹಿಳೆಯರು, ಹತ್ತಾರು ಅನುಮಾನ

Published : May 20, 2022, 06:07 PM ISTUpdated : May 20, 2022, 06:20 PM IST

ಉತ್ತರ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅನಂತರಾಜ್‌, ತಮ್ಮ ಮನೆಯಲ್ಲಿ ಮೇ 12 ರಂದು ಆತ್ಮಹತ್ಯೆಗೆ ಶರಣಾಗಿದ್ದರು. ಆರಂಭದಲ್ಲಿ ಅನಾರೋಗ್ಯದಿಂದ ಬೇಸತ್ತು ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿತ್ತು. 

ಬೆಂಗಳೂರು (ಮೇ.20):  ಉತ್ತರ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅನಂತರಾಜ್‌, ತಮ್ಮ ಮನೆಯಲ್ಲಿ ಮೇ 12 ರಂದು ಆತ್ಮಹತ್ಯೆಗೆ ಶರಣಾಗಿದ್ದರು. ಆರಂಭದಲ್ಲಿ ಅನಾರೋಗ್ಯದಿಂದ ಬೇಸತ್ತು ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿತ್ತು. ಆದರೆ ಮೃತರ ಕೋಣೆಯಲ್ಲಿ ಪತ್ತೆಯಾದ ಡೆತ್‌ನೋಟ್‌ ಆಧರಿಸಿ ಅನಂತರಾಜ್‌ ಪತ್ನಿ ಸುಮಾ, ತನ್ನ ಪತಿಗೆ ಕೆ.ರ್‌.ಪುರದ ರೇಖಾ, ಆಕೆಯ ಪತಿ ವಿನೋದ್‌ ಹಾಗೂ ಸ್ನೇಹಿತೆ ಸ್ಪಂದನಾ ಕಿರುಕುಳ ಕೊಡುತ್ತಿದ್ದರು ಎಂದು ಆರೋಪಿಸಿದ್ದರು.

ಆರು ವರ್ಷಗಳ ಹಿಂದೆ ಫೇಸ್‌ಬುಕ್‌ನಲ್ಲಿ ಅನಂತರಾಜ್‌ಗೆ ರೇಖಾ ಪರಿಚಯವಾಗಿದ್ದಳು. ಬಳಿಕ ಪರಸ್ಪರ ಒಡನಾಟ ಬೆಳೆದಿತ್ತು. ತಮ್ಮ ಖಾಸಗಿ ಕ್ಷಣದ ಫೋಟೋ ಹಾಗೂ ವಿಡಿಯೋಗಳನ್ನು ಮುಂದಿಟ್ಟು ಅನಂತರಾಜ್‌ಗೆ ರೇಖಾ ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದಳು. ಇದರಿಂದ ಮನನೊಂದು ಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಸುಮಾ ದೂರಿದ್ದರು. ಅದರನ್ವಯ ಎಫ್‌ಐಆರ್‌ ದಾಖಲಿಸಿ ತನಿಖೆ ಕೈಗೆತ್ತಿಕೊಂಡ ಪೊಲೀಸರು, ರೇಖಾಳನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಆತ್ಮಹತ್ಯೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್‌ ಸಿಕ್ಕಿದ್ದು, ಕೌಟುಂಬಿಕ ಕಲಹದಿಂದ ಅನಂತರಾಜ್‌ ನೊಂದಿದ್ದರು ಎಂಬ ಆರೋಪ ಕೇಳಿ ಬಂದಿದೆ. ಈ ಪ್ರಕರಣದಲ್ಲಿ ಮೃತನ ಗೆಳತಿ ಬಂಧನವಾದ ಬೆನ್ನಲ್ಲೇ ಅನಂತರಾಜ್‌ ಪತ್ನಿ ಮತ್ತು ರೇಖಾ ನಡುವೆ ನಡೆದಿದೆ ಎನ್ನಲಾದ ಸಂಭಾಷಣೆಯ ಆಡಿಯೋವೊಂದು ಬಹಿರಂಗವಾಗಿದೆ.

25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
Read more