ಬಿಜೆಪಿ ಮುಖಂಡನ ಸಾವು, ಇಬ್ಬರು ಮಹಿಳೆಯರು, ಹತ್ತಾರು ಅನುಮಾನ

ಬಿಜೆಪಿ ಮುಖಂಡನ ಸಾವು, ಇಬ್ಬರು ಮಹಿಳೆಯರು, ಹತ್ತಾರು ಅನುಮಾನ

Published : May 20, 2022, 06:07 PM ISTUpdated : May 20, 2022, 06:20 PM IST

ಉತ್ತರ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅನಂತರಾಜ್‌, ತಮ್ಮ ಮನೆಯಲ್ಲಿ ಮೇ 12 ರಂದು ಆತ್ಮಹತ್ಯೆಗೆ ಶರಣಾಗಿದ್ದರು. ಆರಂಭದಲ್ಲಿ ಅನಾರೋಗ್ಯದಿಂದ ಬೇಸತ್ತು ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿತ್ತು. 

ಬೆಂಗಳೂರು (ಮೇ.20):  ಉತ್ತರ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅನಂತರಾಜ್‌, ತಮ್ಮ ಮನೆಯಲ್ಲಿ ಮೇ 12 ರಂದು ಆತ್ಮಹತ್ಯೆಗೆ ಶರಣಾಗಿದ್ದರು. ಆರಂಭದಲ್ಲಿ ಅನಾರೋಗ್ಯದಿಂದ ಬೇಸತ್ತು ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿತ್ತು. ಆದರೆ ಮೃತರ ಕೋಣೆಯಲ್ಲಿ ಪತ್ತೆಯಾದ ಡೆತ್‌ನೋಟ್‌ ಆಧರಿಸಿ ಅನಂತರಾಜ್‌ ಪತ್ನಿ ಸುಮಾ, ತನ್ನ ಪತಿಗೆ ಕೆ.ರ್‌.ಪುರದ ರೇಖಾ, ಆಕೆಯ ಪತಿ ವಿನೋದ್‌ ಹಾಗೂ ಸ್ನೇಹಿತೆ ಸ್ಪಂದನಾ ಕಿರುಕುಳ ಕೊಡುತ್ತಿದ್ದರು ಎಂದು ಆರೋಪಿಸಿದ್ದರು.

ಆರು ವರ್ಷಗಳ ಹಿಂದೆ ಫೇಸ್‌ಬುಕ್‌ನಲ್ಲಿ ಅನಂತರಾಜ್‌ಗೆ ರೇಖಾ ಪರಿಚಯವಾಗಿದ್ದಳು. ಬಳಿಕ ಪರಸ್ಪರ ಒಡನಾಟ ಬೆಳೆದಿತ್ತು. ತಮ್ಮ ಖಾಸಗಿ ಕ್ಷಣದ ಫೋಟೋ ಹಾಗೂ ವಿಡಿಯೋಗಳನ್ನು ಮುಂದಿಟ್ಟು ಅನಂತರಾಜ್‌ಗೆ ರೇಖಾ ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದಳು. ಇದರಿಂದ ಮನನೊಂದು ಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಸುಮಾ ದೂರಿದ್ದರು. ಅದರನ್ವಯ ಎಫ್‌ಐಆರ್‌ ದಾಖಲಿಸಿ ತನಿಖೆ ಕೈಗೆತ್ತಿಕೊಂಡ ಪೊಲೀಸರು, ರೇಖಾಳನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಆತ್ಮಹತ್ಯೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್‌ ಸಿಕ್ಕಿದ್ದು, ಕೌಟುಂಬಿಕ ಕಲಹದಿಂದ ಅನಂತರಾಜ್‌ ನೊಂದಿದ್ದರು ಎಂಬ ಆರೋಪ ಕೇಳಿ ಬಂದಿದೆ. ಈ ಪ್ರಕರಣದಲ್ಲಿ ಮೃತನ ಗೆಳತಿ ಬಂಧನವಾದ ಬೆನ್ನಲ್ಲೇ ಅನಂತರಾಜ್‌ ಪತ್ನಿ ಮತ್ತು ರೇಖಾ ನಡುವೆ ನಡೆದಿದೆ ಎನ್ನಲಾದ ಸಂಭಾಷಣೆಯ ಆಡಿಯೋವೊಂದು ಬಹಿರಂಗವಾಗಿದೆ.

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more