ಬಿಎಂಟಿಸಿ ಬಸ್ ಕಂಡಕ್ಟರ್ ಲುಕ್ಕಿಗೆ ಜಾರಿ ಬಿದ್ದ ಯುವತಿ: ಜೀವನದ ಸಾರಥಿಯಾಗ್ತೀನಿ ಎಂದವನ ಬಣ್ಣ ಬಯಲು!

ಬಿಎಂಟಿಸಿ ಬಸ್ ಕಂಡಕ್ಟರ್ ಲುಕ್ಕಿಗೆ ಜಾರಿ ಬಿದ್ದ ಯುವತಿ: ಜೀವನದ ಸಾರಥಿಯಾಗ್ತೀನಿ ಎಂದವನ ಬಣ್ಣ ಬಯಲು!

Published : Jan 15, 2025, 12:25 PM ISTUpdated : Jan 15, 2025, 03:52 PM IST

ದೂರು ಕೊಟ್ಟಾಕೆ ನನಗೆ ಗಂಡ ಬೇಕು, ಹೊಟ್ಟೆಯಲ್ಲಿರುವ ಮಗುವಿಗೆ ತಂದೆ ಬೇಕೆಂದು ಹಠ ಹಿಡಿದಿದ್ದಾಳೆ. ನ್ಯಾಯ ಕೊಡಿಸಿ ಎಂದು ಬೆಂಗಳೂರು ಪೊಲೀಸ್ ಕಮಿಷನರ್, ಈಶಾನ್ಯ ಡಿಸಿಪಿ, ಮಹಿಳಾ ಸಹಾಯವಾಣಿಗೆ ಅಂತಾ ಅಲೆದಾಡುತ್ತಿದ್ದಾಳೆ.

ಹುಬ್ಬಳ್ಳಿ(ಜ.15):  ಆಕೆ ಜೀವನದಲ್ಲಿ ತುಂಬಾನೇ ನೊಂದಿದ್ದಳು. ಕಟ್ಕೊಂಡ ಗಂಡ ತನಗಿಂತ 15 ವರ್ಷ ದೊಡ್ಡವನು ಎಂಬ ಕೊರಗು ಆಕೆಯನ್ನ ಸದಾಕಾಲ ಕಾಡುತ್ತಿತ್ತು. ಹೀಗಾಗಿ ಆ ಸಂಬಂಧಕ್ಕೆ ಪುಲ್ ಸ್ಟಾಪ್ ಇಟ್ಟು ಹೊಸ ಜೀವನ ಶುರು ಮಾಡಿದ್ಲು. ಆಗಲೇ ನೋಡಿ ನಿನ್ನ ಜೀವನಕ್ಕೆ ಸಾರಥಿಯಾಗ್ತೀನಿ ಅಂತ ಬಂದವನು ಬಿರುಗಾಳಿಯನ್ನೇ ಎಬ್ಬಿಸಿದ್ದ. 

ಹೀಗೆ ಕೈ ಕೈ ಹಿಡಿದು ರೀಲ್ಸ್ ಮಾಡಿದ್ದೇ ಮಾಡಿದ್ದು. ಆಕೆಯ ಜತೆ ಈತ ಫೋಸ್ ಕೊಟ್ಟಿದ್ದೇ ಕೊಟ್ಟಿದ್ದು. ಯುವತಿಯೂ ಇವನೇ ನನ್ನ ಮನ್ಮಥ ಎಂದು ಹಾಡಿದ್ದೇ ಹಾಡಿದ್ದು. ಹೀಗೆ, ಯುವತಿಯ ಜೊತೆ ಹೆಜ್ಜೆ ಹಾಕುತ್ತಿರುವ ಈತನ ಹೆಸರು ಮಂಜುನಾಥ್. ಬೆಂಗಳೂರು ಎಂ.ಎಸ್.ಪಾಳ್ಯ ಬಿಎಂಟಿಸಿ ಡಿಪೋವಿನ ಕಂಡಕ್ಟರ್ ಕಮ್ ಡ್ರೈವರ್. ಈತನಿಗೆ ಮದುವೆಯಾಗಿ ಇಬ್ಬರು ಮಕ್ಕಳು ಕೂಡ ಇದ್ದಾರೆ. ಆದ್ರೆ ಇದೆಲ್ಲವನ್ನೂ ಬಚ್ಚಿಟ್ಟು ಯುವತಿಯೊಬ್ಬಳಿಗೆ ಪ್ರೀತಿ ಪ್ರೇಮ ಅಂಥ ವಂಚಿಸಿದ್ದಾನೆ. ಪರಿಣಾಮ ಯುವತಿ ಈಗ ಮೂರು ತಿಂಗಳ ಗರ್ಭಿಣಿ.

2025ರ ಆರಂಭದಲ್ಲೇ ನಿಜವಾಗ್ತಿದ್ಯಾ ವಂಗಾ ಬಾಬಾ ಭವಿಷ್ಯ: ಡೇಂಜರ್ ಸಿಗ್ನಲ್, ಏನಿದು

ಮಂಜುನಾಥ್ ಬೆಂಗಳೂರಿನ ಎಂ.ಎಸ್.ಪಾಳ್ಯ ಟು ಯಲಹಂಕ ರೂಟ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ. ಈ ವೇಳೆ ಖಾಸಗಿ ಕಂಪನಿಯೊಂದರಲ್ಲಿ ರಿಸೆಪ್ಟಿನಿಸ್ಟ್ ಆಗಿದ್ದ ಯುವತಿಯೊಬ್ಬಳು ಪ್ರತಿ ದಿನ ಮಂಜುನಾಥ್ ಕರ್ತವ್ಯ ನಿರ್ವಹಿಸುತ್ತಿದ್ದ ಬಸ್ ಹತ್ತುತ್ತಿದ್ದಳು. ನಂಬರ್ ಕೇಳಿದ್ದಕ್ಕೆ ಯುವತಿ ಕೊಡೋದಿಲ್ಲ ಅಂದಿದ್ದಳು. ಆದ್ರೆ, ಇನ್ಸ್ ಟಾಗ್ರಾಂ ಐಡಿ ಪತ್ತೆ ಮಾಡಿ ಚಾಟ್ ಮಾಡಿದ್ದ. ನಂತರ ಯುವತಿಯನ್ನ ಪ್ರೀತಿಯ ಬಲೆಗೆ ಬೀಳಿಸಿದ್ದ.

AI ತಂತ್ರಜ್ಞಾನದಲ್ಲಿ ಮೂಡಿಬಂದ ದಿಗ್ಗಜರು: ಸಂಕ್ರಾಂತಿ ಹಬ್ಬಕ್ಕೆ ಬಂದ ಡಾ.ರಾಜ್,ವಿಷ್ಣು, ಅಂಬಿ!

ಪ್ರೀತಿಸೋದಕ್ಕೂ ಮುನ್ನವೇ ಯುವತಿ ತನಗೆ ವಿಚ್ಛೇಧನ ಆಗಿರುವ ವಿಚಾರವನ್ನು ಮಂಜುನಾಥ್ ಗೆ ಹೇಳಿದ್ದಳು. ಪರವಾಗಿಲ್ಲ ನಾನು ನಿನಗೆ ಬಾಳು ಕೊಡ್ತೀನಿ ಅಂತ ಪುಂಗಿ ಬಿಟ್ಟಿದ್ದ ಇವನು ಯುವತಿ ಜತೆ ಹಲವು ಕಡೆ ಸುತ್ತಾಡಿದ್ದ. ಸುತ್ತಾಡಿದ್ದಷ್ಟೇ ಅಲ್ಲ ಆಕೆಯ ಜತೆ ದೇವಾಲಯದಲ್ಲಿ ಮದುವೆ ಕೂಡ ಆಗಿದ್ದ. ನಂತರ ಯಲಹಂಕದಲ್ಲಿ ಮನೆ ಮಾಡಿ ಆಗಾಗ ಬಂದು ಹೋಗ್ತಿದ್ದ. ಇದಾದ ಕೆಲ ತಿಂಗಳಿನಲ್ಲಿ ಮಂಜುನಾಥ್ ನ ಮದುವೆ ವಿಷಯ ಈಕೆಗೆ ಗೊತ್ತಾಗಿದೆ. ಇದನ್ನ ಪ್ರಶ್ನೆ ಮಾಡಿದ್ದಕ್ಕೆ ನೀನ್ಯಾರು ನನಗೆ ಗೊತ್ತಿಲ್ಲ ಅಂತ ಅವೈಡ್ ಮಾಡೋಕೆ ಶುರು ಮಾಡಿದ್ದಾನೆ. ಹೀಗಾಗಿ ಯುವತಿ ಇದೀಗ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾಳೆ. 

ದೂರು ಕೊಟ್ಟಾಕೆ ನನಗೆ ಗಂಡ ಬೇಕು, ಹೊಟ್ಟೆಯಲ್ಲಿರುವ ಮಗುವಿಗೆ ತಂದೆ ಬೇಕೆಂದು ಹಠ ಹಿಡಿದಿದ್ದಾಳೆ. ನ್ಯಾಯ ಕೊಡಿಸಿ ಎಂದು ಬೆಂಗಳೂರು ಪೊಲೀಸ್ ಕಮಿಷನರ್, ಈಶಾನ್ಯ ಡಿಸಿಪಿ, ಮಹಿಳಾ ಸಹಾಯವಾಣಿಗೆ ಅಂತಾ ಅಲೆದಾಡುತ್ತಿದ್ದಾಳೆ.

24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
20:21ಎಪ್‌ಸ್ಟೀನ್ ಫೈಲ್ಸ್‌: ಟ್ರಂಪ್, ಬಿಲ್ ಗೇಟ್ಸ್ ರಾಸ*ಲೀಲೆ ರಹಸ್ಯ! 2000 ವಿಡಿಯೋ, ರಷ್ಯಾ ಚೆಲುವೆಯರ ವಿಡಿಯೋ ಬಟಾಬಯಲು!
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
25:56ಬೆಟ್ಟಿಂಗ್​​ ಚಟ, ಊರು ತುಂಬ ಸಾಲ! ಸ್ವಂತ ತಂಗಿಯ ಮೇಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್‌ವುಡ್ ನಟಿ! ಏನಿದು ಪ್ರಕರಣ?
21:04ಪಿಜಿಯಲ್ಲಿ ಪ್ರೇಯಸಿ ಜೊತೆ ಕುಚ್​-ಕುಚ್​​! ರೆಡ್ ​​ಹ್ಯಾಂಡಾಗಿ ಸಿಕ್ಕಿಬಿದ್ದ ಗಂಡ ಕೊಟ್ಟ ಕಾರಣವೇ ಬೇರೆ!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:37ಬೆಂಗಳೂರು: ತಾಯಿ ಮೇಲಿನ ದ್ವೇಷಕ್ಕೆ 6 ವರ್ಷದ ಬಾಲಕಿ ಹತ್ಯೆ; ಪಾಗಲ್ ಪ್ರೇಮಿ ಕಾಟಕ್ಕೆ ವಿದ್ಯಾರ್ಥಿನಿ ಬಲಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
Read more