Bengaluru: ತಡರಾತ್ರಿ ಪಿಸ್ತೂಲ್ ಹಿಡಿದು ಬೆದರಿಸಿ ಅಟ್ಟಹಾಸಗೈದ ಬಿಲ್ಡರ್..!

Nov 7, 2022, 12:06 PM IST

ಸರ್ಕಾರಿ ಜಮೀನು ಮಾರಾಟಕ್ಕೆ ರೌಡಿಶೀಟರ್‌ ಮುಂದಾಗಿದ್ದು, ಇದನ್ನು ಪ್ರಶ್ನಿಸಿದ್ದಕ್ಕೆ ದೂರುದಾರನ ಮೇಲೆ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ. ಸರ್ಕಾರಿ ಜಮೀನು ಮಾರಾಟಕ್ಕೆ ಬಿಲ್ಡರ್‌ ಕಾರ್ತಿಕ್‌ ರೆಡ್ಡಿ ಯತ್ನ ನಡೆಸಿದ್ದಾರೆ ಎಂದು ತಿಳಿದುಬಂದಿದ್ದು, ಬೆಂಗಳೂರಿನ ಕೆ.ಆರ್‌. ಪುರಂನ ಚಿಕ್ಕಬಸವನಪುರದಲ್ಲಿ ಈ ಘಟನೆ ನಡೆದಿದೆ. ಅಕ್ಟೋಬರ್‌ 28 ರಂದು ಪಿಸ್ತೂಲ್‌ ಹಿಡಿದು ಬಿಲ್ಡರ್‌ ಅಟ್ಟಹಾಸಗೈದಿದ್ದಾರೆ ಎಂದು ಹೇಳಲಾಗಿದೆ. ಬಿಲ್ಡರ್‌ ಕಾರ್ತಿಕ್‌ ರೆಡ್ಡಿ ಅಂಡ್‌ ಗ್ಯಾಂ ದಾಂಧಲೆ ಮಾಡಿರುವ ಆರೋಪ ಕೇಳಿಬಂದಿದ್ದು, ಮನೆ ಮುಂದಿದ್ದ ಕಾರಿಗೆ ಗುದ್ದಿ ಜಖಂಗೊಳಿಸಿ ಎಚ್ಚರಿಕೆ ನೀಡಿದ್ದಾರೆ ಎಂದೂ ತಿಳಿದುಬಂದಿದೆ. ಈ ಹಿನ್ನೆಲೆ ಆರೋಪಿ ವಿರುದ್ಧ ಹಲವು ಸೆಕ್ಷನ್‌ಗಳಡಿ ಎಫ್‌ಐಆರ್‌ ದಾಖಲಿಸಲಾಗಿದೆ.