Apr 8, 2022, 5:13 PM IST
ಮಂಗಳೂರು, (ಏ.08): ಮಂಗಳೂರು ನಗರದ ಹಂಪನಕಟ್ಟೆ ಬಳಿ ಇಂದು(ಶುಕ್ರವಾರ) ಖಾಸಗಿ ಹೊತ್ತಿ ಉರಿದಿದೆ. ಬೈಕ್ಗೆ ಡಿಕ್ಕಿ ಹೊಡೆದಿದ್ದು, ಬೈಕ್ನ ಪೆಟ್ರೀಲ್ ಟ್ಯಾಂಕ್ ಸಿಡಿದು ಬಸ್ಗೆ ಬೆಂಕಿ ತಗುಲಿದೆ. ಬೆಂಕಿ ಇಡೀ ಬಸ್ಗೆ ಆವರಿಸಿಕೊಳ್ಳುತ್ತಿದ್ದಂತೆಯೇ ನಿರ್ವಾಹಕ ಪ್ರಯಾಣಿಕರನ್ನು ಕೆಳಗೆ ಇಳಿಸಿದ್ದಾರೆ.
ಬಳಿಕ ಬೆಂಕಿ ಹೊತ್ತಿಕೊಂಡಿದ್ದು , ತಕ್ಷಣ ಅಗ್ನಿಶಾಮಕ ದಳದ ತಂಡ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದೆ. ಇದರಿಂದ ದೊಡ್ಡ ಅನಾಹುತ ತಪ್ಪಿದಂತಾಗಿದೆ. ಇನ್ನು ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ರವಾನಿಸಲಾಗಿದೆ.