Chaddi gang : ಮಳೆಗಾಲ ಬರ್ತಿದ್ದಂತೆ ಆ್ಯಕ್ಟೀವ್ ಚಡ್ಡಿ ಗ್ಯಾಂಗ್ ! ರಾಬರಿ ಗ್ಯಾಂಗ್‌ನ ಭರ್ಜರಿ ಬೇಟೆ ಹೇಗಿತ್ತು ಗೊತ್ತಾ?

Chaddi gang : ಮಳೆಗಾಲ ಬರ್ತಿದ್ದಂತೆ ಆ್ಯಕ್ಟೀವ್ ಚಡ್ಡಿ ಗ್ಯಾಂಗ್ ! ರಾಬರಿ ಗ್ಯಾಂಗ್‌ನ ಭರ್ಜರಿ ಬೇಟೆ ಹೇಗಿತ್ತು ಗೊತ್ತಾ?

Published : Jul 13, 2024, 04:33 PM IST

ಸತತ ವಿಫಲ ಯತ್ನಗಳ ಬಳಿಕ ಆಪರೇಷನ್ ಸಕ್ಸಸ್..!
ಮನೆಗಳ್ಳತನ ಮಾಡಿದವರು ಕಾರನ್ನೂ ಕದ್ದೊಯ್ದಿದ್ರು..!
ಕೇವಲ ಐದೇ ಗಂಟೆಯಲ್ಲಿ ಚಡ್ಡಿ ಗ್ಯಾಂಗ್ ಅಂದರ್..!
 

ಅದೊಂದು ನಟೋರಿಯಸ್ ಗ್ಯಾಂಗ್.ಬಟ್ಟೆ ಬಿಚ್ಚಿ, ಚಡ್ಡಿ ಹಾಕೊಂಡು ಅಖಾಡಕ್ಕೆ ಇಳಿದ್ರೆ ಮುಗಿದೇ ಹೊಯ್ತು. ಅಲ್ಲೊಂದು ಮನೆ ಧರೋಡೆ ಫಿಕ್ಸ್. ಅಷ್ಟೇ ಅಲ್ಲ ರಕ್ತ ಹರಿಯೋದೂ ಕೂಡ ಗ್ಯಾರೆಂಟಿ. ಆದ್ರೆ ಈ ಗ್ಯಾಂಗ್‌ನ ಮೇನ್ ಟಾರ್ಗೆಟ್ ನಮ್ಮ ಕರಾವಳಿ. ಮಳೆಗಾಲವನ್ನೇ (Rainy season) ಬಂಡವಾಳ ಮಾಡಿಕೊಳ್ಳೋ ಈ ಕಿರಾತಕರು ಸೀದಾ ಮನೆಗೆ ನುಗ್ಗಿ ಅಲ್ಲಿದ್ದವರ ಮೇಲೆ ಹಲ್ಲೆ ಮಾಡಿ ನಂತರ ಮನೆಯನ್ನ ದೋಚಿ ಎಸ್ಕೇಪ್ ಆಗಿಬಿಡ್ತಾರೆ. ಹೀಗೆ ಕಳೆದ ಕೆಲ ವರ್ಷಗಳಿಂದ ತಮ್ಮದೇ ಸ್ಟೈಲ್‌ನಲ್ಲಿ ದರೋಡೆ (Robbery)ಮಾಡಿ ಪೊಲೀಸರಿಗೆ ಛಳ್ಳೆಹಣ್ಣು ತನ್ನಿಸುತ್ತಿದ್ದ ನಟೋರಿಯಸ್ ಚಡ್ಡಿ ಗ್ಯಾಂಗ್(Chaddi gang) ಕೊನೆಗೂ ತಗ್ಲಾಕಿಕೊಂಡಿದೆ. ಲಕ್ಷಾಂತರ ರೂಪಾಯಿ ಚಿನ್ನಾಭರಣ ದೋಚಿ ಪರಾರಿಯಾಗುತ್ತಿದ್ದವರನ್ನ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಮಳೆಗಾಲ ಬರ್ತಿದ್ದಂತೆ ಕರಾವಳಿಗೆ ಎಂಟ್ರಿ ಕೊಡೋ ಈ ಚಡ್ಡಿ ಗ್ಯಾಂಗ್ ಮಾಡಿದ್ದೆಲ್ಲಾ ಬರೀ ವಿಫಲ ಯತ್ನಗಳೇ. ಆದ್ರೆ ಇವತ್ತು ಅವರಿಗೆ ಜಾಕ್‌ಪಾಟ್ ಹೊಡೆದಿತ್ತು. ಮಂಗಳೂರಿನ ಮನೆಯಲ್ಲಿ ಲಕ್ಷ ಲಕ್ಷ ಹಣ ಕದ್ದು ಎಸ್ಕೇಪ್ ಆಗಿತ್ತು. ಆದ್ರೆ ಹೀಗೆ ಎಸ್ಕೇಪ್ ಆದ ಕಳ್ಳರು ಐದೇ ಗಂಟೆಯಲ್ಲಿ ತಗ್ಲಾಕಿಕೊಂಡಿದ್ರು. ಕದ್ದ ಮನೆಯ ಕಾರನ್ನೇ ತೆಗೆದುಕೊಂಡು ಎಸ್ಕೇಪ್ ಆಗಿದ್ದ ಕಳ್ಳರು(Theives) ಅದೇ ಕಾರಿನಿಂದ ಸಿಕ್ಕಿಹಾಕಿಕೊಂಡಿದ್ರು. ಸತತ ಪ್ರಯತ್ನಗಳನ್ನ ಮಾಡಿ ವಿಫಲವಾಗಿದ್ದ ಚಡ್ಡಿ ಗ್ಯಾಂಗ್ ಆವತ್ತು ಭರ್ಜರಿ ಬೇಟೆಗೆ ಇಳಿದಿತ್ತು. ಮಧ್ಯರಾತ್ರಿ ಅದೊಂದು ಮನೆಗೆ ನುಗ್ಗಿತ್ತು. ಲಕ್ಷ ಲಕ್ಷ ಮೌಲ್ಯದ ಚಿನ್ನಾಭರಣಗಳನ್ನ ಕದ್ದು(Theft), ಮನೆಯವರದ್ದೇ ಕಾರು ತೆಗೆದುಕೊಂಡು ಎಸ್ಕೇಪ್ ಆಗಿತ್ತು. ಇನ್ನೂ ಇದೇ ಗ್ಯಾಂಗ್‌ನ ಬೆನ್ನುಬಿದ್ದ ಪೊಲೀಸರು ಕೇವಲ ಐದೇ ಗಂಟೆಯಲ್ಲಿ ಎಲ್ಲಾ ದರೋಡೆಕೋರರ ಹೆಡೆಮುರಿ ಕಟ್ಟಿದ್ದಾರೆ.

ಇದನ್ನೂ ವೀಕ್ಷಿಸಿ:  ದೈವ ಸನ್ನಿಧಿಯಲ್ಲಿ ಮತ್ತೊಂದು ಪವಾಡ: 24 ಗಂಟೆಯೊಳಗೆ ಕಳ್ಳನನ್ನು ಹುಡುಕಿಕೊಟ್ಟ ಬಬ್ಬು ಸ್ವಾಮಿ ದೈವ!

24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
Read more