Chaddi gang : ಮಳೆಗಾಲ ಬರ್ತಿದ್ದಂತೆ ಆ್ಯಕ್ಟೀವ್ ಚಡ್ಡಿ ಗ್ಯಾಂಗ್ ! ರಾಬರಿ ಗ್ಯಾಂಗ್‌ನ ಭರ್ಜರಿ ಬೇಟೆ ಹೇಗಿತ್ತು ಗೊತ್ತಾ?

Chaddi gang : ಮಳೆಗಾಲ ಬರ್ತಿದ್ದಂತೆ ಆ್ಯಕ್ಟೀವ್ ಚಡ್ಡಿ ಗ್ಯಾಂಗ್ ! ರಾಬರಿ ಗ್ಯಾಂಗ್‌ನ ಭರ್ಜರಿ ಬೇಟೆ ಹೇಗಿತ್ತು ಗೊತ್ತಾ?

Published : Jul 13, 2024, 04:33 PM IST

ಸತತ ವಿಫಲ ಯತ್ನಗಳ ಬಳಿಕ ಆಪರೇಷನ್ ಸಕ್ಸಸ್..!
ಮನೆಗಳ್ಳತನ ಮಾಡಿದವರು ಕಾರನ್ನೂ ಕದ್ದೊಯ್ದಿದ್ರು..!
ಕೇವಲ ಐದೇ ಗಂಟೆಯಲ್ಲಿ ಚಡ್ಡಿ ಗ್ಯಾಂಗ್ ಅಂದರ್..!
 

ಅದೊಂದು ನಟೋರಿಯಸ್ ಗ್ಯಾಂಗ್.ಬಟ್ಟೆ ಬಿಚ್ಚಿ, ಚಡ್ಡಿ ಹಾಕೊಂಡು ಅಖಾಡಕ್ಕೆ ಇಳಿದ್ರೆ ಮುಗಿದೇ ಹೊಯ್ತು. ಅಲ್ಲೊಂದು ಮನೆ ಧರೋಡೆ ಫಿಕ್ಸ್. ಅಷ್ಟೇ ಅಲ್ಲ ರಕ್ತ ಹರಿಯೋದೂ ಕೂಡ ಗ್ಯಾರೆಂಟಿ. ಆದ್ರೆ ಈ ಗ್ಯಾಂಗ್‌ನ ಮೇನ್ ಟಾರ್ಗೆಟ್ ನಮ್ಮ ಕರಾವಳಿ. ಮಳೆಗಾಲವನ್ನೇ (Rainy season) ಬಂಡವಾಳ ಮಾಡಿಕೊಳ್ಳೋ ಈ ಕಿರಾತಕರು ಸೀದಾ ಮನೆಗೆ ನುಗ್ಗಿ ಅಲ್ಲಿದ್ದವರ ಮೇಲೆ ಹಲ್ಲೆ ಮಾಡಿ ನಂತರ ಮನೆಯನ್ನ ದೋಚಿ ಎಸ್ಕೇಪ್ ಆಗಿಬಿಡ್ತಾರೆ. ಹೀಗೆ ಕಳೆದ ಕೆಲ ವರ್ಷಗಳಿಂದ ತಮ್ಮದೇ ಸ್ಟೈಲ್‌ನಲ್ಲಿ ದರೋಡೆ (Robbery)ಮಾಡಿ ಪೊಲೀಸರಿಗೆ ಛಳ್ಳೆಹಣ್ಣು ತನ್ನಿಸುತ್ತಿದ್ದ ನಟೋರಿಯಸ್ ಚಡ್ಡಿ ಗ್ಯಾಂಗ್(Chaddi gang) ಕೊನೆಗೂ ತಗ್ಲಾಕಿಕೊಂಡಿದೆ. ಲಕ್ಷಾಂತರ ರೂಪಾಯಿ ಚಿನ್ನಾಭರಣ ದೋಚಿ ಪರಾರಿಯಾಗುತ್ತಿದ್ದವರನ್ನ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಮಳೆಗಾಲ ಬರ್ತಿದ್ದಂತೆ ಕರಾವಳಿಗೆ ಎಂಟ್ರಿ ಕೊಡೋ ಈ ಚಡ್ಡಿ ಗ್ಯಾಂಗ್ ಮಾಡಿದ್ದೆಲ್ಲಾ ಬರೀ ವಿಫಲ ಯತ್ನಗಳೇ. ಆದ್ರೆ ಇವತ್ತು ಅವರಿಗೆ ಜಾಕ್‌ಪಾಟ್ ಹೊಡೆದಿತ್ತು. ಮಂಗಳೂರಿನ ಮನೆಯಲ್ಲಿ ಲಕ್ಷ ಲಕ್ಷ ಹಣ ಕದ್ದು ಎಸ್ಕೇಪ್ ಆಗಿತ್ತು. ಆದ್ರೆ ಹೀಗೆ ಎಸ್ಕೇಪ್ ಆದ ಕಳ್ಳರು ಐದೇ ಗಂಟೆಯಲ್ಲಿ ತಗ್ಲಾಕಿಕೊಂಡಿದ್ರು. ಕದ್ದ ಮನೆಯ ಕಾರನ್ನೇ ತೆಗೆದುಕೊಂಡು ಎಸ್ಕೇಪ್ ಆಗಿದ್ದ ಕಳ್ಳರು(Theives) ಅದೇ ಕಾರಿನಿಂದ ಸಿಕ್ಕಿಹಾಕಿಕೊಂಡಿದ್ರು. ಸತತ ಪ್ರಯತ್ನಗಳನ್ನ ಮಾಡಿ ವಿಫಲವಾಗಿದ್ದ ಚಡ್ಡಿ ಗ್ಯಾಂಗ್ ಆವತ್ತು ಭರ್ಜರಿ ಬೇಟೆಗೆ ಇಳಿದಿತ್ತು. ಮಧ್ಯರಾತ್ರಿ ಅದೊಂದು ಮನೆಗೆ ನುಗ್ಗಿತ್ತು. ಲಕ್ಷ ಲಕ್ಷ ಮೌಲ್ಯದ ಚಿನ್ನಾಭರಣಗಳನ್ನ ಕದ್ದು(Theft), ಮನೆಯವರದ್ದೇ ಕಾರು ತೆಗೆದುಕೊಂಡು ಎಸ್ಕೇಪ್ ಆಗಿತ್ತು. ಇನ್ನೂ ಇದೇ ಗ್ಯಾಂಗ್‌ನ ಬೆನ್ನುಬಿದ್ದ ಪೊಲೀಸರು ಕೇವಲ ಐದೇ ಗಂಟೆಯಲ್ಲಿ ಎಲ್ಲಾ ದರೋಡೆಕೋರರ ಹೆಡೆಮುರಿ ಕಟ್ಟಿದ್ದಾರೆ.

ಇದನ್ನೂ ವೀಕ್ಷಿಸಿ:  ದೈವ ಸನ್ನಿಧಿಯಲ್ಲಿ ಮತ್ತೊಂದು ಪವಾಡ: 24 ಗಂಟೆಯೊಳಗೆ ಕಳ್ಳನನ್ನು ಹುಡುಕಿಕೊಟ್ಟ ಬಬ್ಬು ಸ್ವಾಮಿ ದೈವ!

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:37ಬೆಂಗಳೂರು: ತಾಯಿ ಮೇಲಿನ ದ್ವೇಷಕ್ಕೆ 6 ವರ್ಷದ ಬಾಲಕಿ ಹತ್ಯೆ; ಪಾಗಲ್ ಪ್ರೇಮಿ ಕಾಟಕ್ಕೆ ವಿದ್ಯಾರ್ಥಿನಿ ಬಲಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
23:12ಬೀದಿಗೆ ಬಂತು ಕನ್ನಡದ ಮತ್ತೊಬ್ಬ ಸೀರಿಯಲ್ ನಟಿಯ ಕುಟುಂಬ; ಮದುವೆಗೂ ಮುನ್ನವೇ ಬಳಸಿಕೊಂಡಿದ್ದ ಸುರೇಶ!
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
Read more