ಕುರುಬರ ಮಠದಲ್ಲಿ ದಲಿತ ಸ್ವಾಮೀಜಿಯ ಪ್ರತಿಮೆ ಇಟ್ಟಿದ್ದೇ ತಪ್ಪಾಯ್ತಾ?: ಬಳ್ಳಾರಿಯಲ್ಲಿ ಶುರುವಾಯ್ತು ಪ್ರತಿಮೆ ಪಾಲಿಟಿಕ್ಸ್​​..!

ಕುರುಬರ ಮಠದಲ್ಲಿ ದಲಿತ ಸ್ವಾಮೀಜಿಯ ಪ್ರತಿಮೆ ಇಟ್ಟಿದ್ದೇ ತಪ್ಪಾಯ್ತಾ?: ಬಳ್ಳಾರಿಯಲ್ಲಿ ಶುರುವಾಯ್ತು ಪ್ರತಿಮೆ ಪಾಲಿಟಿಕ್ಸ್​​..!

Published : Apr 09, 2024, 11:56 AM IST

ಗ್ರಾಮ ಇವತ್ತು ಅಕ್ಷರಶಃ ಬೆಂಕಿ ಉಂಡೆಯಾಗಿದೆ. ಸಹೋದರರಂತಿದ್ದ ಜನರ ಮಧ್ಯೆ ಜಾತಿ ಬೀಜ ಮೊಳಕೆ ಹೊಡೆದಿದೆ. ಒಂದೇ ಒಂದು ಪ್ರತಿಮೆಗಾಗಿ ಕೈಯಲ್ಲಿ ಕಲ್ಲು ಹಿಡಿದುಕೊಂಡು ಒಬ್ಬರ ಮೇಲೆ ಒಬ್ಬರು ಎಸೆಯುತ್ತಿದ್ದಾರೆ. 
 

ಬಳ್ಳಾರಿ(ಏ.09):  ಅದೊಂದು ಪುಟ್ಟ ಹಳ್ಳಿ... ಅಲ್ಲಿ ಜನ ಅಣ್ಣ ತಮ್ಮಂದಿರಂತೆ ಇದ್ರು... ಜಾತಿ ಬೇಧವಿಲ್ಲದೇ ಆ ಮಠಕ್ಕೆ ಹೋಗ್ತಿದ್ರು... ಕುರುಬರ ಮಠವಾದ್ರೂ ಪೂಜೆ ಮಾಡ್ತಿದ್ದಿದ್ದು ದಲಿತ ಸ್ವಾಮೀಜಿ.. ಒಂದೇ ಮಾತಿನಲ್ಲಿ ಹೆಳಬೇಕಂದ್ರೆ ಅದೊಂದು ಮಾದರಿ ಗ್ರಾಮವಾಗಿತ್ತು.. ಆದ್ರೆ ಇದೇ ಗ್ರಾಮ ಇವತ್ತು ಅಕ್ಷರಶಃ ಬೆಂಕಿ ಉಂಡೆಯಾಗಿದೆ. ಸಹೋದರರಂತಿದ್ದ ಜನರ ಮಧ್ಯೆ ಜಾತಿ ಬೀಜ ಮೊಳಕೆ ಹೊಡೆದಿದೆ. ಒಂದೇ ಒಂದು ಪ್ರತಿಮೆಗಾಗಿ ಕೈಯಲ್ಲಿ ಕಲ್ಲು ಹಿಡಿದುಕೊಂಡು ಒಬ್ಬರ ಮೇಲೆ ಒಬ್ಬರು ಎಸೆಯುತ್ತಿದ್ದಾರೆ. 

ಯಸ್.. ಎರ್ರಿತಾತ ರವರ ಮಠದಲ್ಲಿ ಅವರ ಶಿಷ್ಯ ಎರ್ರಪ್ಪ ತಾತನ ಪ್ರತಿಮೆ ಎಂಟ್ರಿ ಕೊಡುತ್ತೆ.. ಬಳಿಕ ಒಂದು ಸಮುದಾಯ ಕೋರ್ಟ್ ಮೆಟ್ಟಿಲನ್ನೂ ಹತ್ತುತ್ತೆ.. ಕೋರ್ಟ್ ಪ್ರತಿಮೆಯನ್ನ ತೆರವುಗಳಿಸುವಂತೆಯೂ ತೀರ್ಪು ಕೊಡುತ್ತೆ.. ಆದ್ರೆ ಯಾವಾಗ ತಮ್ಮ ಸ್ವಾಮೀಜಿಯ ಪ್ರತಿಮೆ ತೆರವು ಆಯ್ತೋ ದಲಿತ ಸಮುದಾಯದ ಸಹನೆ ಕಟ್ಟೆ ಹೊಡೆಯಿತು. ಬೀದಿಗೆ ಬರುವ ನಿರ್ಧಾರ ಮಾಡ್ತು ಪರಿಣಾಮವೇ ಈ ಕಲ್ಲು ತೂರಾಟ.

ದಿಂಗಾಲೇಶ್ವರ ಶ್ರೀ ಏನೇ ಮಾತಾಡಿದ್ರು ಅದು ನನಗೆ ಆಶೀರ್ವಾದ: ಪ್ರಲ್ಹಾದ್ ಜೋಶಿ

ಎರ್ರಪ್ಪ ತಾತನ ಪ್ರತಿಮೆ ತೆರವಾಗ್ತಿದ್ದಂತೆ ಆ ಗ್ರಾಮ ಅಕ್ಷರಶಹಃ ಬೆಂಕಿ ಉಂಡೆಯಾಗಿಬಿಡ್ತು. ಎರಡು ಸಮುದಾಯದವರ ನಡುವೆ ಕಲ್ಲು ತೂರಾಟ ನಡೆದಿತ್ತು.. ಇನ್ನೂ ಆ ಕಲ್ಲು ತೂರಾಟದಲ್ಲಿ ಪೊಲೀಸರಿಗೂ ಪೆಟ್ಟು ಬಿದ್ದಿತ್ತು. ಆದ್ರೆ ಘಟನೆ ನಡೆದಿ 24 ಗಂಟೆಯಾದ್ರೂ ಒಂದೇ ಒಂದು ಪ್ರಕರಣ ದಾಖಲಾಗಿರಲಿಲ್ಲ. ಇನ್ನೂ ಇದಕ್ಕೆ ಸರ್ಕಾರ ಕೂಡ ಕಾರಣ ಅಂತಲೂ ಮಾತುಗಳು ಬರೋದಕ್ಕೆ ಶುರುವಾಯ್ತು. ಆದ್ರೆ ಯಾವಾಗ ಸರ್ಕಾರ ವಿರುದ್ಧವೇ ಮಾತುಗಳು ಕೇಳಿಬಂದ್ವೋ ಪೊಲೀಸರು ಕೇಸ್ ದಾಖಲಿಸಿಕೊಂಡು 24 ಮಂದಿಯನ್ನ ವಶಕ್ಕೆ ಪಡೆದುಕೊಂಡ್ರು.

ಪವಾಡ ಪುರುಷರಿಗೆ ಇರದ ಜಾತಿ ಬೇದ ಈಗೀನ ಜನ್ರಿಗೆ ಯಾಕೆ ಬಂತು..? ಅನ್ನದು ದೇವರೇ ಬಲ್ಲ.. ಆದಷ್ಟು ಬೇಗ ಈ ಪ್ರಕರಣ ಸುಖಾಂತ್ಯ ಕಾಣಲಿ ಜಾತಿ ಬೇದ ಮರೆತು ಈ ಹಿಂದಿನಂತೆ ಅಲ್ಲಿನ ಜನ ಸಂತೋಷದಿಂದ ಬದುಕಲಿ ಅನ್ನೋದೆ ನಮ್ಮೆಲ್ಲ ಆಶಯ. 

04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
Read more