ಕಾಂಗ್ರೆಸ್ ಕಾರ್ಯಕರ್ತನ ಸಾವಿಗೆ ಟ್ವಿಸ್ಟ್..! ಸಾವಿನ ರಹಸ್ಯ ಬಯಲು ಮಾಡಿತ್ತು P.M ರಿಪೋರ್ಟ್..!

ಕಾಂಗ್ರೆಸ್ ಕಾರ್ಯಕರ್ತನ ಸಾವಿಗೆ ಟ್ವಿಸ್ಟ್..! ಸಾವಿನ ರಹಸ್ಯ ಬಯಲು ಮಾಡಿತ್ತು P.M ರಿಪೋರ್ಟ್..!

Published : May 29, 2024, 05:43 PM IST

ಹೆಂಡತಿ ವಿರುದ್ಧವೇ ಪತಿ ಸಾಯುವ ಮುನ್ನ ಸಾಕ್ಷಿ ಸೃಷ್ಟಿಸಿದ್ದ..!
ಹೆಂಡತಿಯನ್ನ ಜೈಲಿಗೆ ಕಳುಹಿಸಲು ಆತ ಪ್ಲಾನ್ ಮಾಡಿದ್ದೇಕೆ..?
ಪ್ರಾಣ ಬೆದರಿಕೆ ಇದೆ ಅಂತ ಕುಟುಂಬಸ್ಥರಿಗೆ ಸುಳ್ಳು ಹೆಳಿದ..!
 

ಆವತ್ತು ಮಾರ್ಚ್ 11ನೇ ತಾರೀಖು. ಒಬ್ಬ ಕಾಂಗ್ರೆಸ್‌ ಮುಖಂಡನ(Congress leader) ಬರ್ಬರ ಕೊಲೆಯ(Murder) ಬಗ್ಗೆ ನಾವು ಇದೇ ಕಾರ್ಯಕ್ರಮದಲ್ಲಿ ಹೇಳಿದ್ವಿ. ಪ್ರೀತಿಸಿ ಮದುವೆಯಾದವಳೇ ಆತನನ್ನ ಕೊಂದುಬಿಟ್ಟಿದ್ದಳು ಅಂತ ಪೊಲೀಸರೂ(Police) ಸಹ ಆವತ್ತು ಅಂದುಕೊಂಡಿದ್ರು. ಆದ್ರೆ ಇವತ್ತು ಇದೇ ಕೇಸ್‌ಗೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಅದು ಕೊಲೆ ಅಲ್ಲ ಬದಲಿಗೆ ಆತ್ಮಹತ್ಯೆ ಅನ್ನೋ ಭುಯಾನಕ ಸತ್ಯ ಈಗ ಹೊರಬಿದ್ದಿದೆ. ಇಷ್ಟೆಲ್ಲಾ ಆದಮೇಲೆ. ಇದು ಕೊಲೆಯೇ ಅಂತ ಪೊಲೀಸರು ಫಿಕ್ಸ್ ಆಗಿದ್ರು. ಇನ್ನೂ ಹೆಂಡತಿನೇ ಯಾಕೆ ಕೊಲೆ ಮಾಡ್ತಾಳೆ ಅಂತ ಪೊಲೀಸರು ತನಿಖೆಯನ್ನ ಮುಂದುವರೆಸಿದ್ರು. ಆದ್ರೆ ಗಂಡ ಹೆಂಡಿರ ನಡುವೆ ವೈಮನಸ್ಸು ಬಿಟ್ಟರೆ ಬೇರೇನೂ ಸಿಗಲಿಲ್ಲ ಪೊಲೀಸರಿಗೆ ಆದ್ರೆ ಇಷ್ಟೆಲ್ಲಾ ನಡೆದು ಈಗ ಎರಡುವರೆ ತಿಂಗಳಾಗಿದೆ. ಈಗ ಈ ಕೇಸ್ ಅನ್ನ ಪೊಲೀಸರು ಆತ್ಮಹತ್ಯೆ(suicide) ಕೇಸ್ ಅಂತ ಬರದು ಕೇಸನ್ನ ಕ್ಲೋಸ್ ಮಾಡಿದ್ದಾರೆ. ಶರಣಪ್ಪನ ವೈವಾಹಿಕ ಜೀವನ ಸರಿ ಇರಲಿಲ್ಲ. ಇದೇ ಕಾರಣಕ್ಕೆ ದೂರವಾಗಿದ್ದರು ಕೂಡ. ಆದ್ರೆ ದೂರವಾದ ಹೆಂಡತಿ ಮೇಲೆ ಶರಣಪ್ಪ ದ್ವೇಷ ಸಾದಿಸಲು ಶುರು ಮಾಡಿದ್ದ. ತನ್ನ ಜೀವನವನ್ನ ಹಾಳು ಮಾಡಿದವಳನ್ನ ಜೈಲಿನಲ್ಲಿ ಕೂರಿಸಬೇಕು ಅನ್ನೋ ಹಠಕ್ಕೆ ಬಿದ್ದುಬಿಟ್ಟಿದ್ದ. ಹೀಗೆ ಯೋಚನೆ ಮಾಡುತ್ತಿರುವಾಗ್ಲೇ ಆತನ ಸ್ನೇಹಿತನ ಕೇಸ್ ನೆನಪಿಗೆ ಬಂದಿತ್ತು. ಆ ಕೇಸ್ನಲ್ಲಿ ಗಂಡ ಸತ್ತ ನಂತರ ಹೆಂಡತಿ ಜೈಲಿಗೆ ಹೋಗಿದ್ದಳು. ನಾನು ಸತ್ತರೂ ನನ್ನ ಹೆಂಡತಿ ಜೈಲಿಗೆ ಹೋಗ್ತಾಳೆ ಅನ್ನೋದು ಅವನ ನಂಬಿಕೆಯಾಗಿತ್ತು. ತನ್ನ ಹೆಂಡತಿಯನ್ನ ಜೈಲಿಗೆ  ಕಳುಹಿಸುವ ಸಲುವಾಗಿ ತಾನೇ ಪ್ರಾಣ ಬಿಡೋದಕ್ಕೆ ನಿರ್ಧರಿಸಿಬಿಟ್ಟ. ಇನ್ನೂ ಕೇಸ್ ಬಲವಾಗಲು ತನಗೆ ಪ್ರಾಣ ಬೆದರಿಕೆ ಇದೆ ಅನ್ನೋ ವಾತವರಣ ಸೃಷ್ಟಿಸಿದ್ದ. ಅಷ್ಟೇ ಅಲ್ಲ ಕೊಲೆ ಅನ್ನೋದಕ್ಕೆ ಎಲ್ಲಾ ಸಾಕ್ಷಿಗಳನ್ನ ತಾನೇ ಸೃಷ್ಟಿ ಮಾಡಿ ಕೊನೆಗೇ ತಾನೇ ಹೋಗಿ ನೇಣುಬಿಗಿದುಕೊಂಡ.

ಇದನ್ನೂ ವೀಕ್ಷಿಸಿ:  ಕಾಸರಗೋಡಿನಲ್ಲಿ ಮತ್ತೆ ಲವ್ ಜಿಹಾದ್ ಸದ್ದು? ಮುಸ್ಲಿಂ ಲೀಗ್ ನೇತಾರನ ಷಡ್ಯಂತ್ರ ಎನ್ನುತ್ತಿದೆ ವಿಎಚ್‌ಪಿ!

25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
Read more