ನೀನ್ ಬೇಡ..ನನಗೆ ಬಾಯ್‌ಫ್ರೆಂಡೇ ಬೇಕು ಎಂದ ಪತ್ನಿ ಗಂಡನನ್ನೇ ಕೊಂದಳು..!

ನೀನ್ ಬೇಡ..ನನಗೆ ಬಾಯ್‌ಫ್ರೆಂಡೇ ಬೇಕು ಎಂದ ಪತ್ನಿ ಗಂಡನನ್ನೇ ಕೊಂದಳು..!

Published : Sep 07, 2022, 05:54 PM IST

ಕುಡುಕ ಗಂಡನ ಕಾಟ ಸಹಿಸಲಾರದೆ ಆತನನ್ನು ತನ್ನ ತಾಯಿ ಹಾಗೂ ಸಂಬಂಧಿಕರ ಜತೆ ಸೇರಿ ಮನೆಯಲ್ಲೇ ಹತ್ಯೆಗೈದ ಮೃತನ ಪತ್ನಿ, ರಾತ್ರೋರಾತ್ರಿ ತನ್ನೂರಿಗೆ ಮೃತದೇಹ ತೆಗೆದುಕೊಂಡು ಹೋಗಿ ಸಹಜ ಸಾವು ಎಂದು ಬಿಂಬಿಸಿ ಅಂತ್ಯಕ್ರಿಯೆಗೆ ಯತ್ನಿಸಿದ್ದಾಗ ಕೊಲೆ ರಹಸ್ಯ ಬಯಲಾಗಿ ಈಗ ಜೈಲು ಸೇರಿದ್ದಾರೆ.
 

ಬೆಂಗಳೂರು (ಸೆ.7): ಕುಡುಕ ಗಂಡನ ಕಾಟ ಸಹಿಸಲಾರದೆ ಆತನನ್ನು ತನ್ನ ತಾಯಿ ಹಾಗೂ ಸಂಬಂಧಿಕರ ಜತೆ ಸೇರಿ ಮನೆಯಲ್ಲೇ ಹತ್ಯೆಗೈದ ಮೃತನ ಪತ್ನಿ, ರಾತ್ರೋರಾತ್ರಿ ತನ್ನೂರಿಗೆ ಮೃತದೇಹ ತೆಗೆದುಕೊಂಡು ಹೋಗಿ ಸಹಜ ಸಾವು ಎಂದು ಬಿಂಬಿಸಿ ಅಂತ್ಯಕ್ರಿಯೆಗೆ ಯತ್ನಿಸಿದ್ದಾಗ ಕೊಲೆ ರಹಸ್ಯ ಬಯಲಾಗಿ ಈಗ ಜೈಲು ಸೇರಿದ್ದಾಳೆ. ಕೋಣನಕುಂಟೆ ಸಮೀಪದ ಕೋಕನೆಟ್‌ ಗಾರ್ಡನ್‌ ನಿವಾಸಿ ಶಿಲ್ಪಾ (26), ಈಕೆಯ ತಾಯಿ ಕೆಂಪದೇವಮ್ಮ (55) ಹಾಗೂ ಸೋದರ ಸಂಬಂಧಿ ಬಾಲಾಜಿ (30) ಬಂಧಿತರಾಗಿದ್ದು, ಈ ಕೃತ್ಯ ಎಸಗಿ ಪರಾರಿಯಾಗಿರುವ ರಘು ಹಾಗೂ ವಂಡ್ರೆ ಎಂಬುವರ ಪತ್ತೆ ತನಿಖೆ ನಡೆದಿದೆ.

ತಮ್ಮ ಅನೈತಿಕ ಸಂಬಂಧ ಪ್ರಶ್ನಿಸಿದ್ದಕ್ಕೆ ಪತಿಯನ್ನು ಸಂಬಂಧಿ ಬಾಲಾಜಿ ಜತೆ ಸೇರಿ ಶಿಲ್ಪಾ ಹತ್ಯೆ ಮಾಡಿದ್ದಾಳೆ ಎಂಬ ಆರೋಪ ಕೇಳಿ ಬಂದಿದೆ. ಕೆಲ ದಿನಗಳಿಂದ ಬಾಲಾಜಿ ಜತೆ ಶಿಲ್ಪಾ ಅಕ್ರಮ ಸಂಬಂಧ ಹೊಂದಿದ್ದಳು. ಈ ವಿಚಾರ ತಿಳಿದು ಮನೆಯಲ್ಲಿ ಪತ್ನಿ ಜತೆ ಮಹೇಶ್‌ ಗಲಾಟೆ ಮಾಡುತ್ತಿದ್ದ ಎನ್ನಲಾಗಿದೆ.

ಪ್ರಿಯಕರ ಮೇಲಿನ ಮೋಹ: ಗಂಡನನ್ನೇ ಬೆಂಗಳೂರಲ್ಲಿ ಹತ್ಯಗೈದು ಮಂಡ್ಯದಲ್ಲಿ ಸಿಕ್ಕಿ ಬಿದ್ಲು

ಮೂರು ದಿನಗಳ ಹಿಂದೆ ಕೌಟುಂಬಿಕ ಕಲಹ ಹಿನ್ನಲೆಯಲ್ಲಿ ಪತಿ ಮಹೇಶ್‌ ಮೇಲೆ ದೊಣ್ಣೆಗಳಿಂದ ಹಲ್ಲೆ ನಡೆಸಿ ತಾಯಿ ಹಾಗೂ ಸಂಬಂಧಿಕರ ಜತೆ ಸೇರಿ ಶಿಲ್ಪಾ ಕೊಲೆ ಮಾಡಿದ್ದಳು. ಬಳಿಕ ಮೃತದೇಹವನ್ನು ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಬೆಳಕವಾಡಿ ಸಮೀಪದ ಪೂರಿಗಾಲಿ ಗ್ರಾಮಕ್ಕೆ ಅಂತ್ಯಕ್ರಿಯೆಗೆ ಆಕೆ ತೆಗೆದುಕೊಂಡು ಹೋಗಿದ್ದಳು. ಆಗ ಮೃತದೇಹದ ಮೇಲಿನ ಗಾಯ ಗುರುತು ಕಂಡು ಅನುಮಾನಗೊಂಡ ಮೃತ ಮಹೇಶ್‌ನ ಸೋದರರು, ಕೂಡಲೇ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಮೃತದೇಹವನ್ನು ಮಂಡ್ಯ ಜಿಲ್ಲಾಸ್ಪತ್ರೆಯಲ್ಲಿ ಪೊಲೀಸರು ಮರಣೋತ್ತರ ಪರೀಕ್ಷೆಗೊಳಪಡಿಸಿದಾಗ ಕೊಲೆ ರಹಸ್ಯ ಬಯಲಾಗಿದೆ. ನಂತರ ಮೃತನ ಕುಟುಂಬದ ದೂರಿನ ಮೇರೆಗೆ ಆರೋಪಿಗಳನ್ನು ಬಂಧಿಸಲಾಯಿತು ಎಂದು ದಕ್ಷಿಣ ವಿಭಾಗದ ಡಿಸಿಪಿ ಕೃಷ್ಣಕಾಂತ್‌ ತಿಳಿಸಿದ್ದಾರೆ.

30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
24:482.5 ಲಕ್ಷ ಸಂಬಳ, 1 ಕೋಟಿ ಸಾಲ: ಸುಳಿವೇ ಇಲ್ಲದ ಟೆಕ್ಕಿ ಮರ್ಡರ್​​ ಕೇಸ್ ಟ್ರೇಸ್​​ ಆಗಿದ್ದೇ ರೋಚಕ!
Read more