ನೀನ್ ಬೇಡ..ನನಗೆ ಬಾಯ್‌ಫ್ರೆಂಡೇ ಬೇಕು ಎಂದ ಪತ್ನಿ ಗಂಡನನ್ನೇ ಕೊಂದಳು..!

ನೀನ್ ಬೇಡ..ನನಗೆ ಬಾಯ್‌ಫ್ರೆಂಡೇ ಬೇಕು ಎಂದ ಪತ್ನಿ ಗಂಡನನ್ನೇ ಕೊಂದಳು..!

Published : Sep 07, 2022, 05:54 PM IST

ಕುಡುಕ ಗಂಡನ ಕಾಟ ಸಹಿಸಲಾರದೆ ಆತನನ್ನು ತನ್ನ ತಾಯಿ ಹಾಗೂ ಸಂಬಂಧಿಕರ ಜತೆ ಸೇರಿ ಮನೆಯಲ್ಲೇ ಹತ್ಯೆಗೈದ ಮೃತನ ಪತ್ನಿ, ರಾತ್ರೋರಾತ್ರಿ ತನ್ನೂರಿಗೆ ಮೃತದೇಹ ತೆಗೆದುಕೊಂಡು ಹೋಗಿ ಸಹಜ ಸಾವು ಎಂದು ಬಿಂಬಿಸಿ ಅಂತ್ಯಕ್ರಿಯೆಗೆ ಯತ್ನಿಸಿದ್ದಾಗ ಕೊಲೆ ರಹಸ್ಯ ಬಯಲಾಗಿ ಈಗ ಜೈಲು ಸೇರಿದ್ದಾರೆ.
 

ಬೆಂಗಳೂರು (ಸೆ.7): ಕುಡುಕ ಗಂಡನ ಕಾಟ ಸಹಿಸಲಾರದೆ ಆತನನ್ನು ತನ್ನ ತಾಯಿ ಹಾಗೂ ಸಂಬಂಧಿಕರ ಜತೆ ಸೇರಿ ಮನೆಯಲ್ಲೇ ಹತ್ಯೆಗೈದ ಮೃತನ ಪತ್ನಿ, ರಾತ್ರೋರಾತ್ರಿ ತನ್ನೂರಿಗೆ ಮೃತದೇಹ ತೆಗೆದುಕೊಂಡು ಹೋಗಿ ಸಹಜ ಸಾವು ಎಂದು ಬಿಂಬಿಸಿ ಅಂತ್ಯಕ್ರಿಯೆಗೆ ಯತ್ನಿಸಿದ್ದಾಗ ಕೊಲೆ ರಹಸ್ಯ ಬಯಲಾಗಿ ಈಗ ಜೈಲು ಸೇರಿದ್ದಾಳೆ. ಕೋಣನಕುಂಟೆ ಸಮೀಪದ ಕೋಕನೆಟ್‌ ಗಾರ್ಡನ್‌ ನಿವಾಸಿ ಶಿಲ್ಪಾ (26), ಈಕೆಯ ತಾಯಿ ಕೆಂಪದೇವಮ್ಮ (55) ಹಾಗೂ ಸೋದರ ಸಂಬಂಧಿ ಬಾಲಾಜಿ (30) ಬಂಧಿತರಾಗಿದ್ದು, ಈ ಕೃತ್ಯ ಎಸಗಿ ಪರಾರಿಯಾಗಿರುವ ರಘು ಹಾಗೂ ವಂಡ್ರೆ ಎಂಬುವರ ಪತ್ತೆ ತನಿಖೆ ನಡೆದಿದೆ.

ತಮ್ಮ ಅನೈತಿಕ ಸಂಬಂಧ ಪ್ರಶ್ನಿಸಿದ್ದಕ್ಕೆ ಪತಿಯನ್ನು ಸಂಬಂಧಿ ಬಾಲಾಜಿ ಜತೆ ಸೇರಿ ಶಿಲ್ಪಾ ಹತ್ಯೆ ಮಾಡಿದ್ದಾಳೆ ಎಂಬ ಆರೋಪ ಕೇಳಿ ಬಂದಿದೆ. ಕೆಲ ದಿನಗಳಿಂದ ಬಾಲಾಜಿ ಜತೆ ಶಿಲ್ಪಾ ಅಕ್ರಮ ಸಂಬಂಧ ಹೊಂದಿದ್ದಳು. ಈ ವಿಚಾರ ತಿಳಿದು ಮನೆಯಲ್ಲಿ ಪತ್ನಿ ಜತೆ ಮಹೇಶ್‌ ಗಲಾಟೆ ಮಾಡುತ್ತಿದ್ದ ಎನ್ನಲಾಗಿದೆ.

ಪ್ರಿಯಕರ ಮೇಲಿನ ಮೋಹ: ಗಂಡನನ್ನೇ ಬೆಂಗಳೂರಲ್ಲಿ ಹತ್ಯಗೈದು ಮಂಡ್ಯದಲ್ಲಿ ಸಿಕ್ಕಿ ಬಿದ್ಲು

ಮೂರು ದಿನಗಳ ಹಿಂದೆ ಕೌಟುಂಬಿಕ ಕಲಹ ಹಿನ್ನಲೆಯಲ್ಲಿ ಪತಿ ಮಹೇಶ್‌ ಮೇಲೆ ದೊಣ್ಣೆಗಳಿಂದ ಹಲ್ಲೆ ನಡೆಸಿ ತಾಯಿ ಹಾಗೂ ಸಂಬಂಧಿಕರ ಜತೆ ಸೇರಿ ಶಿಲ್ಪಾ ಕೊಲೆ ಮಾಡಿದ್ದಳು. ಬಳಿಕ ಮೃತದೇಹವನ್ನು ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಬೆಳಕವಾಡಿ ಸಮೀಪದ ಪೂರಿಗಾಲಿ ಗ್ರಾಮಕ್ಕೆ ಅಂತ್ಯಕ್ರಿಯೆಗೆ ಆಕೆ ತೆಗೆದುಕೊಂಡು ಹೋಗಿದ್ದಳು. ಆಗ ಮೃತದೇಹದ ಮೇಲಿನ ಗಾಯ ಗುರುತು ಕಂಡು ಅನುಮಾನಗೊಂಡ ಮೃತ ಮಹೇಶ್‌ನ ಸೋದರರು, ಕೂಡಲೇ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಮೃತದೇಹವನ್ನು ಮಂಡ್ಯ ಜಿಲ್ಲಾಸ್ಪತ್ರೆಯಲ್ಲಿ ಪೊಲೀಸರು ಮರಣೋತ್ತರ ಪರೀಕ್ಷೆಗೊಳಪಡಿಸಿದಾಗ ಕೊಲೆ ರಹಸ್ಯ ಬಯಲಾಗಿದೆ. ನಂತರ ಮೃತನ ಕುಟುಂಬದ ದೂರಿನ ಮೇರೆಗೆ ಆರೋಪಿಗಳನ್ನು ಬಂಧಿಸಲಾಯಿತು ಎಂದು ದಕ್ಷಿಣ ವಿಭಾಗದ ಡಿಸಿಪಿ ಕೃಷ್ಣಕಾಂತ್‌ ತಿಳಿಸಿದ್ದಾರೆ.

22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
24:33ಪರ ಪುರುಷನ ಸಹವಾಸಕ್ಕೆ ಪತಿ ಪರಮೇಶಿಯನ್ನೇ ಪರಲೋಕಕ್ಕೆ ಕಳಿಸಿದ ಪತ್ನಿ! ಹೆಣ ಹೊರತೆಗೆದಾಗ ಸತ್ಯವೂ ಹೊರಬಿತ್ತು!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
Read more