Rameshwaram Cafe Blast: ಮಂಗಳೂರು ಹಾಗೂ ಬೆಂಗಳೂರಿನಲ್ಲಿ ಆದ ಬ್ಲಾಸ್ಟ್‌ಗೆ ಸಾಮ್ಯತೆ ಇದೆ: ಡಿಕೆ ಶಿವಕುಮಾರ್‌

Rameshwaram Cafe Blast: ಮಂಗಳೂರು ಹಾಗೂ ಬೆಂಗಳೂರಿನಲ್ಲಿ ಆದ ಬ್ಲಾಸ್ಟ್‌ಗೆ ಸಾಮ್ಯತೆ ಇದೆ: ಡಿಕೆ ಶಿವಕುಮಾರ್‌

Published : Mar 02, 2024, 02:29 PM IST

ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣ
ಜನ ಗಾಬರಿ ಮಾಡಿಕೊಳ್ಳುವಂಥ ಪರಿಸ್ಥಿತಿ ಇಲ್ಲ
ಇದು ಕಡಿಮೆ ತೀವ್ರತೆಯ ಬ್ಲಾಸ್ಟ್ ಆಗಿದೆ- ಡಿಕೆಶಿ

ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್(Dk SHivakumar) ಮಾತನಾಡಿದ್ದು, ಯಾರನ್ನು ರಕ್ಷಣೆ ಮಾಡುವ ಉದ್ದೇಶ ಇಲ್ಲ. ನಾನು, ಹೋಂ ಮಿನಿಸ್ಟರ್, ಸರ್ಕಾರ ಮುಖ್ಯಮಂತ್ರಿಗಳು ಎಲ್ಲಾ ಸ್ಥಳಕ್ಕೆ ಭೇಟಿ ಕೊಟ್ಟಿದ್ದೇವೆ. ಬಿಜೆಪಿ ಏನೇ ರಾಜಕೀಯ ಮಾಡಿಕೊಳ್ಳಲಿ, ಬಿಜೆಪಿಯವರ(BJP) ಸಹಕಾರ ನಮಗೆ ಬೇಡ. ಬೆಂಗಳೂರು(Bengaluru) ಹೆಸರು ಹಾಳು ಮಾಡಲು ಯತ್ನಿಸುತ್ತಿದ್ದಾರೆ. ರಾಜಕೀಯ ಮಾಡುತ್ತಾರೆ ಅಂದ್ರೆ ರಾಜಕಾರಣ ಮಾಡಿಕೊಳ್ಳಲಿ . ನಾವು ಮಾತ್ರ ಎಲ್ಲಾ ರೀತಿಯಿಂದಲೂ ನೋಡಬೇಕು ಅಂತ ಸೂಚನೆ ಕೊಟ್ಟಿದ್ದೇವೆ. ಪೊಲೀಸರು(Police) ಏಳು ಎಂಟು ತಂಡಗಳನ್ನು ರಚನೆ ಮಾಡಿದ್ದಾರೆ. ಇಡೀ ಬೆಂಗಳೂರು ಸಿಟಿಯಲ್ಲಿ ಕ್ಯಾಮೆರಾಗಳಿದ್ದಾವೆ. ಬಸ್ ಹತ್ತಿದ್ದಾನೆ ಬಸ್ ಇಳಿದಿದ್ದಾನೆ ವಾಪಸ್ ಹೋಗುವಾಗ ಹೇಗೆ ಹೋದ ಅನ್ನೋದನ್ನ ಟ್ರೇಸ್ ಮಾಡುತ್ತಿದ್ದಾರೆ. ನಿಮಗೂ ಕೂಡ ಬೇಕಾದಷ್ಟು ಕ್ಲಿಪ್ಪಿಂಗ್ ಸಿಕ್ಕಿದೆ ತೋರಿಸಿದ್ದೀರಾ ಎಂದು ಡಿಕೆಶಿ ಹೇಳಿದರು. ಪೊಲೀಸರಿಗೆ ನಾವು ತನಿಖೆಗೆ ಫ್ರೀ ಹ್ಯಾಂಡ್ ಬಿಟ್ಟಿದ್ದೇವೆ. ಇದು ಏಕವ್ಯಕ್ತಿ ಮಾಡಿರೋದು ಅಥವಾ ಸಂಘಟನೆ ಮಾಡಿರೋದು ನೋಡಬೇಕಿದೆ. ಮಂಗಳೂರು ಬ್ಲಾಸ್ಟ್ ಗೂ ಇದಕ್ಕೂ ಸಾಮ್ಯತೆ ಕಾಣಿಸುತ್ತಿದೆ. ನಮ್ಮ ಪೊಲೀಸ್ ಆಫೀಸರ್ ಹೇಳುವ ಪ್ರಕಾರ ಬ್ಲಾಸ್ಟ್ ಗೆ ಬಳಸಿರುವ ಮೆಟೀರಿಯಲ್ ನೋಡಿದಾಗ, ಮಂಗಳೂರು ಮತ್ತು ಬೆಂಗಳೂರಿನಲ್ಲಿ ಆದ ಬ್ಲಾಸ್ಟ್ ನಲ್ಲಿ ಸಾಮ್ಯತೆ ಇದೆ. ಟೈಮರ್‌ಗೆ ಬಳಸಿರುವ ವಸ್ತು, ಬ್ಲಾಸ್ಟ್‌ಗೆ ಬಳಸಿರುವ ವಸ್ತುಗಳಲ್ಲಿ ಸಾಮ್ಯತೆ ಇದೆ. ಮಂಗಳೂರಿನ ಪೊಲೀಸ್ ಆಫೀಸರು ಶಿವಮೊಗ್ಗ ಪೊಲೀಸ್ ಆಫೀಸರ್ ಕೂಡ ಬೆಂಗಳೂರಿಗೆ ಬಂದಿದ್ದಾರೆ ಎಂದು ಹೇಳಿದರು. 

ಇದನ್ನೂ ವೀಕ್ಷಿಸಿ:  ಎಫ್‌ಎಸ್‌ಎಲ್‌ ವರದಿ ಮುಚ್ಚಿ ಮತ್ತೊಂದು ಬೋಗಸ್ ವರದಿ ತಯಾರಿಸಲು ಸರ್ಕಾರ ಮುಂದಾಗಿದೆ: ಬಿ.ವೈ. ವಿಜಯೇಂದ್ರ

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more