Rameshwaram Cafe Blast: ಮಂಗಳೂರು ಹಾಗೂ ಬೆಂಗಳೂರಿನಲ್ಲಿ ಆದ ಬ್ಲಾಸ್ಟ್‌ಗೆ ಸಾಮ್ಯತೆ ಇದೆ: ಡಿಕೆ ಶಿವಕುಮಾರ್‌

Rameshwaram Cafe Blast: ಮಂಗಳೂರು ಹಾಗೂ ಬೆಂಗಳೂರಿನಲ್ಲಿ ಆದ ಬ್ಲಾಸ್ಟ್‌ಗೆ ಸಾಮ್ಯತೆ ಇದೆ: ಡಿಕೆ ಶಿವಕುಮಾರ್‌

Published : Mar 02, 2024, 02:29 PM IST

ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣ
ಜನ ಗಾಬರಿ ಮಾಡಿಕೊಳ್ಳುವಂಥ ಪರಿಸ್ಥಿತಿ ಇಲ್ಲ
ಇದು ಕಡಿಮೆ ತೀವ್ರತೆಯ ಬ್ಲಾಸ್ಟ್ ಆಗಿದೆ- ಡಿಕೆಶಿ

ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್(Dk SHivakumar) ಮಾತನಾಡಿದ್ದು, ಯಾರನ್ನು ರಕ್ಷಣೆ ಮಾಡುವ ಉದ್ದೇಶ ಇಲ್ಲ. ನಾನು, ಹೋಂ ಮಿನಿಸ್ಟರ್, ಸರ್ಕಾರ ಮುಖ್ಯಮಂತ್ರಿಗಳು ಎಲ್ಲಾ ಸ್ಥಳಕ್ಕೆ ಭೇಟಿ ಕೊಟ್ಟಿದ್ದೇವೆ. ಬಿಜೆಪಿ ಏನೇ ರಾಜಕೀಯ ಮಾಡಿಕೊಳ್ಳಲಿ, ಬಿಜೆಪಿಯವರ(BJP) ಸಹಕಾರ ನಮಗೆ ಬೇಡ. ಬೆಂಗಳೂರು(Bengaluru) ಹೆಸರು ಹಾಳು ಮಾಡಲು ಯತ್ನಿಸುತ್ತಿದ್ದಾರೆ. ರಾಜಕೀಯ ಮಾಡುತ್ತಾರೆ ಅಂದ್ರೆ ರಾಜಕಾರಣ ಮಾಡಿಕೊಳ್ಳಲಿ . ನಾವು ಮಾತ್ರ ಎಲ್ಲಾ ರೀತಿಯಿಂದಲೂ ನೋಡಬೇಕು ಅಂತ ಸೂಚನೆ ಕೊಟ್ಟಿದ್ದೇವೆ. ಪೊಲೀಸರು(Police) ಏಳು ಎಂಟು ತಂಡಗಳನ್ನು ರಚನೆ ಮಾಡಿದ್ದಾರೆ. ಇಡೀ ಬೆಂಗಳೂರು ಸಿಟಿಯಲ್ಲಿ ಕ್ಯಾಮೆರಾಗಳಿದ್ದಾವೆ. ಬಸ್ ಹತ್ತಿದ್ದಾನೆ ಬಸ್ ಇಳಿದಿದ್ದಾನೆ ವಾಪಸ್ ಹೋಗುವಾಗ ಹೇಗೆ ಹೋದ ಅನ್ನೋದನ್ನ ಟ್ರೇಸ್ ಮಾಡುತ್ತಿದ್ದಾರೆ. ನಿಮಗೂ ಕೂಡ ಬೇಕಾದಷ್ಟು ಕ್ಲಿಪ್ಪಿಂಗ್ ಸಿಕ್ಕಿದೆ ತೋರಿಸಿದ್ದೀರಾ ಎಂದು ಡಿಕೆಶಿ ಹೇಳಿದರು. ಪೊಲೀಸರಿಗೆ ನಾವು ತನಿಖೆಗೆ ಫ್ರೀ ಹ್ಯಾಂಡ್ ಬಿಟ್ಟಿದ್ದೇವೆ. ಇದು ಏಕವ್ಯಕ್ತಿ ಮಾಡಿರೋದು ಅಥವಾ ಸಂಘಟನೆ ಮಾಡಿರೋದು ನೋಡಬೇಕಿದೆ. ಮಂಗಳೂರು ಬ್ಲಾಸ್ಟ್ ಗೂ ಇದಕ್ಕೂ ಸಾಮ್ಯತೆ ಕಾಣಿಸುತ್ತಿದೆ. ನಮ್ಮ ಪೊಲೀಸ್ ಆಫೀಸರ್ ಹೇಳುವ ಪ್ರಕಾರ ಬ್ಲಾಸ್ಟ್ ಗೆ ಬಳಸಿರುವ ಮೆಟೀರಿಯಲ್ ನೋಡಿದಾಗ, ಮಂಗಳೂರು ಮತ್ತು ಬೆಂಗಳೂರಿನಲ್ಲಿ ಆದ ಬ್ಲಾಸ್ಟ್ ನಲ್ಲಿ ಸಾಮ್ಯತೆ ಇದೆ. ಟೈಮರ್‌ಗೆ ಬಳಸಿರುವ ವಸ್ತು, ಬ್ಲಾಸ್ಟ್‌ಗೆ ಬಳಸಿರುವ ವಸ್ತುಗಳಲ್ಲಿ ಸಾಮ್ಯತೆ ಇದೆ. ಮಂಗಳೂರಿನ ಪೊಲೀಸ್ ಆಫೀಸರು ಶಿವಮೊಗ್ಗ ಪೊಲೀಸ್ ಆಫೀಸರ್ ಕೂಡ ಬೆಂಗಳೂರಿಗೆ ಬಂದಿದ್ದಾರೆ ಎಂದು ಹೇಳಿದರು. 

ಇದನ್ನೂ ವೀಕ್ಷಿಸಿ:  ಎಫ್‌ಎಸ್‌ಎಲ್‌ ವರದಿ ಮುಚ್ಚಿ ಮತ್ತೊಂದು ಬೋಗಸ್ ವರದಿ ತಯಾರಿಸಲು ಸರ್ಕಾರ ಮುಂದಾಗಿದೆ: ಬಿ.ವೈ. ವಿಜಯೇಂದ್ರ

02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
20:21ಎಪ್‌ಸ್ಟೀನ್ ಫೈಲ್ಸ್‌: ಟ್ರಂಪ್, ಬಿಲ್ ಗೇಟ್ಸ್ ರಾಸ*ಲೀಲೆ ರಹಸ್ಯ! 2000 ವಿಡಿಯೋ, ರಷ್ಯಾ ಚೆಲುವೆಯರ ವಿಡಿಯೋ ಬಟಾಬಯಲು!
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
25:56ಬೆಟ್ಟಿಂಗ್​​ ಚಟ, ಊರು ತುಂಬ ಸಾಲ! ಸ್ವಂತ ತಂಗಿಯ ಮೇಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್‌ವುಡ್ ನಟಿ! ಏನಿದು ಪ್ರಕರಣ?
21:04ಪಿಜಿಯಲ್ಲಿ ಪ್ರೇಯಸಿ ಜೊತೆ ಕುಚ್​-ಕುಚ್​​! ರೆಡ್ ​​ಹ್ಯಾಂಡಾಗಿ ಸಿಕ್ಕಿಬಿದ್ದ ಗಂಡ ಕೊಟ್ಟ ಕಾರಣವೇ ಬೇರೆ!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:37ಬೆಂಗಳೂರು: ತಾಯಿ ಮೇಲಿನ ದ್ವೇಷಕ್ಕೆ 6 ವರ್ಷದ ಬಾಲಕಿ ಹತ್ಯೆ; ಪಾಗಲ್ ಪ್ರೇಮಿ ಕಾಟಕ್ಕೆ ವಿದ್ಯಾರ್ಥಿನಿ ಬಲಿ!
Read more