Rameshwaram Cafe Blast: ಮಂಗಳೂರು ಹಾಗೂ ಬೆಂಗಳೂರಿನಲ್ಲಿ ಆದ ಬ್ಲಾಸ್ಟ್‌ಗೆ ಸಾಮ್ಯತೆ ಇದೆ: ಡಿಕೆ ಶಿವಕುಮಾರ್‌

Rameshwaram Cafe Blast: ಮಂಗಳೂರು ಹಾಗೂ ಬೆಂಗಳೂರಿನಲ್ಲಿ ಆದ ಬ್ಲಾಸ್ಟ್‌ಗೆ ಸಾಮ್ಯತೆ ಇದೆ: ಡಿಕೆ ಶಿವಕುಮಾರ್‌

Published : Mar 02, 2024, 02:29 PM IST

ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣ
ಜನ ಗಾಬರಿ ಮಾಡಿಕೊಳ್ಳುವಂಥ ಪರಿಸ್ಥಿತಿ ಇಲ್ಲ
ಇದು ಕಡಿಮೆ ತೀವ್ರತೆಯ ಬ್ಲಾಸ್ಟ್ ಆಗಿದೆ- ಡಿಕೆಶಿ

ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್(Dk SHivakumar) ಮಾತನಾಡಿದ್ದು, ಯಾರನ್ನು ರಕ್ಷಣೆ ಮಾಡುವ ಉದ್ದೇಶ ಇಲ್ಲ. ನಾನು, ಹೋಂ ಮಿನಿಸ್ಟರ್, ಸರ್ಕಾರ ಮುಖ್ಯಮಂತ್ರಿಗಳು ಎಲ್ಲಾ ಸ್ಥಳಕ್ಕೆ ಭೇಟಿ ಕೊಟ್ಟಿದ್ದೇವೆ. ಬಿಜೆಪಿ ಏನೇ ರಾಜಕೀಯ ಮಾಡಿಕೊಳ್ಳಲಿ, ಬಿಜೆಪಿಯವರ(BJP) ಸಹಕಾರ ನಮಗೆ ಬೇಡ. ಬೆಂಗಳೂರು(Bengaluru) ಹೆಸರು ಹಾಳು ಮಾಡಲು ಯತ್ನಿಸುತ್ತಿದ್ದಾರೆ. ರಾಜಕೀಯ ಮಾಡುತ್ತಾರೆ ಅಂದ್ರೆ ರಾಜಕಾರಣ ಮಾಡಿಕೊಳ್ಳಲಿ . ನಾವು ಮಾತ್ರ ಎಲ್ಲಾ ರೀತಿಯಿಂದಲೂ ನೋಡಬೇಕು ಅಂತ ಸೂಚನೆ ಕೊಟ್ಟಿದ್ದೇವೆ. ಪೊಲೀಸರು(Police) ಏಳು ಎಂಟು ತಂಡಗಳನ್ನು ರಚನೆ ಮಾಡಿದ್ದಾರೆ. ಇಡೀ ಬೆಂಗಳೂರು ಸಿಟಿಯಲ್ಲಿ ಕ್ಯಾಮೆರಾಗಳಿದ್ದಾವೆ. ಬಸ್ ಹತ್ತಿದ್ದಾನೆ ಬಸ್ ಇಳಿದಿದ್ದಾನೆ ವಾಪಸ್ ಹೋಗುವಾಗ ಹೇಗೆ ಹೋದ ಅನ್ನೋದನ್ನ ಟ್ರೇಸ್ ಮಾಡುತ್ತಿದ್ದಾರೆ. ನಿಮಗೂ ಕೂಡ ಬೇಕಾದಷ್ಟು ಕ್ಲಿಪ್ಪಿಂಗ್ ಸಿಕ್ಕಿದೆ ತೋರಿಸಿದ್ದೀರಾ ಎಂದು ಡಿಕೆಶಿ ಹೇಳಿದರು. ಪೊಲೀಸರಿಗೆ ನಾವು ತನಿಖೆಗೆ ಫ್ರೀ ಹ್ಯಾಂಡ್ ಬಿಟ್ಟಿದ್ದೇವೆ. ಇದು ಏಕವ್ಯಕ್ತಿ ಮಾಡಿರೋದು ಅಥವಾ ಸಂಘಟನೆ ಮಾಡಿರೋದು ನೋಡಬೇಕಿದೆ. ಮಂಗಳೂರು ಬ್ಲಾಸ್ಟ್ ಗೂ ಇದಕ್ಕೂ ಸಾಮ್ಯತೆ ಕಾಣಿಸುತ್ತಿದೆ. ನಮ್ಮ ಪೊಲೀಸ್ ಆಫೀಸರ್ ಹೇಳುವ ಪ್ರಕಾರ ಬ್ಲಾಸ್ಟ್ ಗೆ ಬಳಸಿರುವ ಮೆಟೀರಿಯಲ್ ನೋಡಿದಾಗ, ಮಂಗಳೂರು ಮತ್ತು ಬೆಂಗಳೂರಿನಲ್ಲಿ ಆದ ಬ್ಲಾಸ್ಟ್ ನಲ್ಲಿ ಸಾಮ್ಯತೆ ಇದೆ. ಟೈಮರ್‌ಗೆ ಬಳಸಿರುವ ವಸ್ತು, ಬ್ಲಾಸ್ಟ್‌ಗೆ ಬಳಸಿರುವ ವಸ್ತುಗಳಲ್ಲಿ ಸಾಮ್ಯತೆ ಇದೆ. ಮಂಗಳೂರಿನ ಪೊಲೀಸ್ ಆಫೀಸರು ಶಿವಮೊಗ್ಗ ಪೊಲೀಸ್ ಆಫೀಸರ್ ಕೂಡ ಬೆಂಗಳೂರಿಗೆ ಬಂದಿದ್ದಾರೆ ಎಂದು ಹೇಳಿದರು. 

ಇದನ್ನೂ ವೀಕ್ಷಿಸಿ:  ಎಫ್‌ಎಸ್‌ಎಲ್‌ ವರದಿ ಮುಚ್ಚಿ ಮತ್ತೊಂದು ಬೋಗಸ್ ವರದಿ ತಯಾರಿಸಲು ಸರ್ಕಾರ ಮುಂದಾಗಿದೆ: ಬಿ.ವೈ. ವಿಜಯೇಂದ್ರ

21:04ಪಿಜಿಯಲ್ಲಿ ಪ್ರೇಯಸಿ ಜೊತೆ ಕುಚ್​-ಕುಚ್​​! ರೆಡ್ ​​ಹ್ಯಾಂಡಾಗಿ ಸಿಕ್ಕಿಬಿದ್ದ ಗಂಡ ಕೊಟ್ಟ ಕಾರಣವೇ ಬೇರೆ!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:37ಬೆಂಗಳೂರು: ತಾಯಿ ಮೇಲಿನ ದ್ವೇಷಕ್ಕೆ 6 ವರ್ಷದ ಬಾಲಕಿ ಹತ್ಯೆ; ಪಾಗಲ್ ಪ್ರೇಮಿ ಕಾಟಕ್ಕೆ ವಿದ್ಯಾರ್ಥಿನಿ ಬಲಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
23:12ಬೀದಿಗೆ ಬಂತು ಕನ್ನಡದ ಮತ್ತೊಬ್ಬ ಸೀರಿಯಲ್ ನಟಿಯ ಕುಟುಂಬ; ಮದುವೆಗೂ ಮುನ್ನವೇ ಬಳಸಿಕೊಂಡಿದ್ದ ಸುರೇಶ!
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
Read more